![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ಬಿರುಗಾಳಿ ಸಹಿತ ಮಳೆ: ಅಪಾರ ಹಾನಿ
Team Udayavani, May 31, 2020, 12:55 PM IST
![31-May-20](https://www.udayavani.com/wp-content/uploads/2020/05/31-May-20-620x375.gif)
ಸಾಂದರ್ಭಿಕ ಚಿತ್ರ
ಭಾಲ್ಕಿ: ತಾಲೂಕಿನ ವಿವಿಧೆಡೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಮರ, ವಿದ್ಯುತ್ ಕಂಬ, ಪರಿವರ್ತಕ, ಮನೆಯ ಮೇಲಿನ ಶೀಟ್ಗಳು ಹಾರಿ ಹೋಗಿದ್ದು, ಅಪಾರ ಹಾನಿ ಉಂಟಾಗಿದೆ.
ತಾಲೂಕಿನ ಕೋನಮೇಳಕುಂದಾ ಗ್ರಾಮದಲ್ಲಿ ಎಸ್ಟಿ, ಎಲ್ಟಿ ಲೈನ್ ಕಡಿತಗೊಂಡಿದೆ. ಮರಗಳು ಉರುಳಿಬಿದ್ದು ಮೂರು ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿದೆ. ಅಹಮದಾಬಾದ್, ಕೊಟಗ್ಯಾಳ ಸೇರಿದಂತೆ ಇತರ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಬಿದ್ದು ಮುರಿದಿವೆ. ಅಂದಾಜು 5ರಿಂದ 10 ಲಕ್ಷ ಹಾನಿಯಾಗಿದೆ ಎಂದು ಎಇಇ ಪುಂಡಲೀಕ ಗೋಖಲೆ ತಿಳಿಸಿದ್ದಾರೆ.
ಕೋನಮೇಳಕುಂದಾ, ಅಹಮದಾಬಾದ್ ಸೇರಿದಂತೆ ಇತರ ಗ್ರಾಮಗಳಲ್ಲಿ ಶನಿವಾರ ಸಂಜೆವರೆಗೂ ವಿದ್ಯುತ್ ಕಡಿತಗೊಂಡಿತ್ತು. ಜೆಸ್ಕಾಂ ಸಿಬ್ಬಂದಿ ರಿಪೇರಿ ಕಾರ್ಯದಲ್ಲಿ ತೊಡಗಿದ್ದರು. ತೇಗಂಪೂರ ಗ್ರಾಮದಲ್ಲಿ ಸುಮಾರು ಮೂರು ಮರಗಳು ಬುಡಸಮೇತ ಕೆಳಕ್ಕೆ ಉರುಳಿ ಬಿದ್ದಿದ್ದವು. ಮಳೆಯ ವಿವರ: ಭಾಲ್ಕಿ ಹೋಬಳಿ 3 ಮಿ.ಮೀ, ಹಲಬರ್ಗಾ 7, ಖಟಕಚಿಂಚೋಳಿ 2. ಲಖನಗಾಂವ 2, ನಿಟ್ಟೂರ ಹೋಬಳಿಯಲ್ಲಿ 3 ಮಿಮೀ ಸೇರಿದಂತೆ ತಾಲೂಕಿನಲ್ಲಿ 3 ಮಿಮೀ ಮಳೆ ಆಗಿದೆ. ಸಾಯಿಗಾಂವ ಹೋಬಳಿಯಲ್ಲಿ ಮಳೆ ಆಗಿಲ್ಲ ಎಂದು ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕ ಶತ್ರುಘ್ನ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.