ಬಿರುಗಾಳಿ ಸಹಿತ ಮಳೆ: ಅಪಾರ ಹಾನಿ
Team Udayavani, May 31, 2020, 12:55 PM IST
ಸಾಂದರ್ಭಿಕ ಚಿತ್ರ
ಭಾಲ್ಕಿ: ತಾಲೂಕಿನ ವಿವಿಧೆಡೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಮರ, ವಿದ್ಯುತ್ ಕಂಬ, ಪರಿವರ್ತಕ, ಮನೆಯ ಮೇಲಿನ ಶೀಟ್ಗಳು ಹಾರಿ ಹೋಗಿದ್ದು, ಅಪಾರ ಹಾನಿ ಉಂಟಾಗಿದೆ.
ತಾಲೂಕಿನ ಕೋನಮೇಳಕುಂದಾ ಗ್ರಾಮದಲ್ಲಿ ಎಸ್ಟಿ, ಎಲ್ಟಿ ಲೈನ್ ಕಡಿತಗೊಂಡಿದೆ. ಮರಗಳು ಉರುಳಿಬಿದ್ದು ಮೂರು ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿದೆ. ಅಹಮದಾಬಾದ್, ಕೊಟಗ್ಯಾಳ ಸೇರಿದಂತೆ ಇತರ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಬಿದ್ದು ಮುರಿದಿವೆ. ಅಂದಾಜು 5ರಿಂದ 10 ಲಕ್ಷ ಹಾನಿಯಾಗಿದೆ ಎಂದು ಎಇಇ ಪುಂಡಲೀಕ ಗೋಖಲೆ ತಿಳಿಸಿದ್ದಾರೆ.
ಕೋನಮೇಳಕುಂದಾ, ಅಹಮದಾಬಾದ್ ಸೇರಿದಂತೆ ಇತರ ಗ್ರಾಮಗಳಲ್ಲಿ ಶನಿವಾರ ಸಂಜೆವರೆಗೂ ವಿದ್ಯುತ್ ಕಡಿತಗೊಂಡಿತ್ತು. ಜೆಸ್ಕಾಂ ಸಿಬ್ಬಂದಿ ರಿಪೇರಿ ಕಾರ್ಯದಲ್ಲಿ ತೊಡಗಿದ್ದರು. ತೇಗಂಪೂರ ಗ್ರಾಮದಲ್ಲಿ ಸುಮಾರು ಮೂರು ಮರಗಳು ಬುಡಸಮೇತ ಕೆಳಕ್ಕೆ ಉರುಳಿ ಬಿದ್ದಿದ್ದವು. ಮಳೆಯ ವಿವರ: ಭಾಲ್ಕಿ ಹೋಬಳಿ 3 ಮಿ.ಮೀ, ಹಲಬರ್ಗಾ 7, ಖಟಕಚಿಂಚೋಳಿ 2. ಲಖನಗಾಂವ 2, ನಿಟ್ಟೂರ ಹೋಬಳಿಯಲ್ಲಿ 3 ಮಿಮೀ ಸೇರಿದಂತೆ ತಾಲೂಕಿನಲ್ಲಿ 3 ಮಿಮೀ ಮಳೆ ಆಗಿದೆ. ಸಾಯಿಗಾಂವ ಹೋಬಳಿಯಲ್ಲಿ ಮಳೆ ಆಗಿಲ್ಲ ಎಂದು ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕ ಶತ್ರುಘ್ನ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ