ವಸತಿ ಯೋಜನೆ: ಕಾಂಗ್ರೆಸ್‌-ಬಿಜೆಪಿ ಯೂ ಟರ್ನ್ ತಿಕ್ಕಾಟ


Team Udayavani, May 18, 2020, 2:36 PM IST

18-May-17′

ಸಾಂದರ್ಭಿಕ ಚಿತ್ರ

ಭಾಲ್ಕಿ: ತಾಲೂಕಿನ ವ್ಯಾಪ್ತಿಯ ವಿವಿಧ ವಸತಿ ಯೋಜನೆಯಡಿ ಮಂಜೂರಾದ ಬಡವರ ಮನೆ ಹಂಚಿಕೆಯಲ್ಲಿ ಭಾರಿ ಅವ್ಯವಹಾರ ಆಗಿದೆ ಎಂದು ಆರೋಪಿಸಿ ತನಿಖೆ ನಡೆಸುವಂತೆ ಸರಕಾರಕ್ಕೆ ಒತ್ತಾಯಿಸಿರುವ ಸಂಸದ ಭಗವಂತ ಖೂಬಾ ಅವರು ಇದೀಗ ಯೂಟರ್ನ್   ಹೊಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷರಾದ ಅಶೋಕ ಮಡ್ಡೆ, ವಿಶಾಲ ಪುರಿ, ಮಾಣಿಕಪ್ಪ ರೇಷ್ಮೆ ಆರೋಪಿಸಿದ್ದಾರೆ.

ಈ ಕುರಿತು ಜಂಟಿ ನೀಡಿರುವ ಅವರು, ವಸತಿ ಯೋಜನೆಯಡಿ ಅಕ್ರಮ ನಡೆದಿದೆ ಎಂದು ದೂರು ನೀಡಿ ಬಡ ಫಲಾನುಭವಿಗಳ ಖಾತೆಗೆ ಸೇರಬೇಕಾದ ನ್ಯಾಯಯುತ ಹಣ ತಡೆ ಹಿಡಿದು ಇದೀಗ ವಸತಿ ಸಚಿವರಲ್ಲಿ ಹಣ ಬಿಡುಗಡೆಗೆ ಕೋರಿರುವ ಸಂಸದರು ಜನರ ನಗೆಪಾಟಿಲಗೀಡಾಗಿದ್ದಾರೆ. ಸಂಸದರ ರಾಜಕೀಯ ಪ್ರೇರಿತ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರ ಮನೆಗಳ ಹಣ ಬಿಡುಗಡಗೆ ತಡೆಹಿಡಿದಿದೆ. ಇದರಿಂದ ಜಿಲ್ಲೆಯ ವಸತಿ ಫಲಾನುಭವಿಗಳ ಮನೆಗಳು ಅಪೂರ್ಣಗೊಂಡಿರುವ ಪರಿಣಾಮ ಆಶ್ರಯ ಇಲ್ಲದೇ ರಸ್ತೆಗೆ ಬರುವಂತಾಗಿದೆ. ವಸತಿ ಮನೆ ಹಣ ಬಿಡುಗಡೆಗೆ ವಿಳಂಬವಾಗುತ್ತಿರುವುದರಿಂದ ಜಿಲ್ಲೆಯ ಸಾವಿರಾರೂ ವಸತಿ ಫಲಾನುಭಗಳ ಆಕ್ರೋಶ ವ್ಯಕ್ತವಾಗುತ್ತಲೇ ದಿಢೀರ್‌ ಎಚ್ಚೆತ್ತುಕೊಂಡಂತೆ ಕಾಣುತ್ತಿರುವ ಸಂಸದರು ಜನರ ಅನುಕಂಪ ಗಿಟ್ಟಿಸಲು ಬರೀ ತೋರಿಕೆಗಾಗಿ ವಸತಿ ಖಾತೆ ಸಚಿವರನ್ನು ಭೇಟಿ ಮಾಡಿ ಹಣ ಬಿಡುಗಡೆಗೆ ಒತ್ತಾಯಿಸಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಪ್ರಶ್ನಿಸಿದ್ದಾರೆ.

ಭಾಲ್ಕಿ ಕ್ಷೇತ್ರ ಸಂಪೂರ್ಣ ಗುಡಿಸಲು ಮುಕ್ತವನ್ನಾಗಿ ಮಾಡುವ ಉದ್ದೇಶದಿಂದ ಶಾಸಕ ಈಶ್ವರ ಖಂಡ್ರೆ ಸರಕಾರದ ಮೇಲೆ ನಿರಂತರ ಒತ್ತಡ ತಂದು ದಾಖಲೆ ರೀತಿಯಲ್ಲಿ ಮನೆ ಮಂಜೂರಾತಿ ಮಾಡಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ಸಂಸದರು ಕೋವಿಡ್‌ -19 ಸಂಕಷ್ಟದಂತಹ ಸಮಯದಲ್ಲಿ ಭಾಲ್ಕಿ ಕ್ಷೇತ್ರವನ್ನು ಗುರಿಯಾಸಿಕೊಂಡು ಮನೆ ಅನುಷ್ಠಾನದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆ ನಡೆಸುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ. ಬಳಿಕ ಫಲಾನುಭವಿಗಳ ಖಾತೆಗೆ ಬರಬೇಕಾದ ಅನುದಾನ ತಡೆ ಹಿಡಿದು ಮತ್ತೊಂದಡೆ ವಸತಿ ಖಾತೆ ಸಚಿವರನ್ನು ಭೇಟಿ ಮಾಡಿ ಹಣ ಬಿಡುಗಡೆಗೆ ಒತ್ತಾಯಿಸಿರುವುದು ಸಂಸದರ ದಿವಾಳಿತನ ತೋರಿಸುತ್ತದೆ. ಅರ್ಹ ವಸತಿ ಫಲಾನುಭವಿಗಳ ಖಾತೆಗೆ ಸರಕಾರ ತಕ್ಷಣ ಬಾಕಿ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಭಾಲ್ಕಿ: ಸಂಸದ ಭಗವಂತ ಖೂಬಾ ಯೂಟರ್ನ್ ಹೊಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿಸಲು ಅವರು ವಸತಿ ಖಾತೆ ಸಚಿವರಿಗೆ ಮನವಿ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಬಿಜೆಪಿ ಮುಖಂಡರಾದ ಪ್ರತಾಪ ಪಾಟೀಲ, ಪ್ರಕಾಶ ಬಿರಾದಾರ ಮತ್ತು ವಿಶ್ವನಾಥ ಮೋರೆ, ಭಾಲ್ಕಿ ತಾಲೂಕಿನಲ್ಲಿ ಅರ್ಹವಾಗಿ ಮನೆ ಕಟ್ಟಿಕೊಂಡಿರುವ ಫಲಾನುಭವಿಗಳ ಹಣ ಬಿಡುಗಡೆಗಾಗಿ ಸಂಸದ ಭಗವಂತ ಖೂಬಾ ವಸತಿ ಖಾತೆ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ವಿನಃ ಅಕ್ರಮವಾಗಿ ಮನೆಕಟ್ಟಿಕೊಂಡಿರುವವರ ಹಣ ಬಿಡುಗಡೆಗೆ ಅವರೂ ಎಂದೂ ಒತ್ತಾಯಿಸಿಲ್ಲ. ಇದು ಈಶ್ವರ ಖಂಡ್ರೆ ಅವರ ಅನುಯಾಯಿಗಳ ಹಗಲು ಗನಸಾಗಿದೆ. ಸಂಸದರ ಮನವಿಯಂತೆ ಅರ್ಹ ಬಡವರು ಮನೆ ಕಟ್ಟಿಕೊಂಡಿರುವವರಿಗೆ ವಸತಿ ಸಚಿವರು ಒಂದು ವಾರದೊಳಗೆ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಹಗಣರಕ್ಕೆ ಸಿಲುಕಿದ್ದ ಸುಮಾರು 9710 ಮನೆಗಳ ಬಿಲ್‌ ಪಾವತಿ ನಡೆಯುತ್ತಿದೆ ಎಂದು ಈಶ್ವರ ಖಂಡ್ರೆ ಅನುಯಾಯಿಗಳು ಭಾವಿಸಿದ್ದರೆ ಅದು ಅವರ ಮೂರ್ಖತನವಾಗಿದೆ. ತಾಲೂಕಿನಲ್ಲಿ ನಡೆದಿರುವ 91 ಕೋಟಿ ರೂ. ಅವ್ಯವಹಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಬರುವುದಿಲ್ಲ. ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ಅಧಿಕಾರಗಳು, ಶಾಸಕರು ಮತ್ತು ಶಾಸಕರ ಅನುಯಾಯಿಗಳು ಶಿಕ್ಷೆಗೆ ಗುರಿಯಾಗುವ ದಿನಗಳು ದೂರವಿಲ್ಲ. ಸಂದರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಈಶ್ವರ ಖಂಡ್ರೆ ಅನುಯಾಯಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.