ಭಾಲ್ಕಿ: ಮುಂಗಾರು ಕೃಷಿ ಚಟುವಟಿಕೆ ಚುರುಕು
Team Udayavani, May 25, 2018, 12:23 PM IST
ಭಾಲ್ಕಿ: ನಾಲ್ಕೈದು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿಗಳಿಗೆ ಸಿಲುಕಿ ನಲುಗಿರುವ ಈ ಭಾಗದ ರೈತರು ಈ ವರ್ಷ ಉತ್ತಮ ಮುಂಗಾರು ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ.
ಕಳೆದ ಸಾಲಿನಲ್ಲಿ ಸಾಧಾರಣ ಮಳೆಯಾಗಿದ್ದರಿಂದ ಮುಂಗಾರು ಫಸಲು ನಿರೀಕ್ಷೆಯಂತೆ ಬರದೇ ರೈತರು
ಒಂದಿಷ್ಟು ನಷ್ಟ ಅನುಭವಿಸಿದ್ದರು. ಈ ನಷ್ಟದ ನಡುವೆಯೂ ಈ ಬಾರಿ ಮುಂಗಾರು ಬಿತ್ತನೆಗೆ ಉತ್ಸುಕರಾಗಿರುವ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೇಡಿಕೆಯಂತೆ ಬೀಜ, ರಸಗೊಬ್ಬರ ಸಂಗ್ರಹವಾಗುತ್ತಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ. 25 ಸಾವಿರ ಕ್ವಿಂಟಲ್ ಸೋಯಾಬಿನ್ ಬೀಜಕ್ಕೆ ಬೇಡಿಕೆಯಿದ್ದು, ಈಗಾಗಲೇ 19 ಸಾವಿರ ಕ್ವಿಂಟಲ್ನ ಇಂಡೆಂಟ್ ಬಂದಿದೆ. ಅದರಲ್ಲಿ 5.5 ಕ್ವಿಂಟಲ್ ಸೋಯಾಬಿನ್ ಬೀಜ ಸಂಗ್ರಹವಾಗಿದ್ದು, ಆಯಾ ರೈತ ಸಂಪರ್ಕ ಕೇಂದ್ರಗಳಿಗೆ ತಲಾ ಒಂದು ಸಾವಿರ ಕ್ವಿಂಟಲ್ನಂತೆ ಸೋಯಾಬಿನ್ ಬೀಜ ಕಳುಹಿಸಲಾಗಿದೆ. ಹೆಸರು, ಉದ್ದು ಬೀಜ ಶೀಘ್ರವೇ ಆಯಾ ರೈತ ಸಂಪರ್ಕ ಕೇಂದ್ರಕ್ಕೆ ಬರಲಿವೆ. 10 ಸಾವಿರ ಮಟ್ರಿಕ್ ಟನ್ ರಸಗೊಬ್ಬರದ ಅಗತ್ಯವಿದ್ದು, ಈಗಾಗಲೇ ಸುಮಾರು 6 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಖಲಾಗಿದೆ.
ನಿರೀಕ್ಷೆಯಿಂತೆ ಜೂನ್ 5ರ ನಂತರ ಮುಂಗಾರು ಹಂಗಾಮು ಆರಂಭವಾಗುವ ಲಕ್ಷಣವಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸತೀಶ ಮುದ್ದಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ