ಮಾನವ ಜನ್ಮದ ಶ್ರೇಷ್ಠತೆ ಅರಿಯಿರಿ: ಭಾತಂಬ್ರಾ ಶ್ರೀ

ಜಿಲ್ಲಾ ಮಠಾಧಿಪತಿಗಳ ಒಕ್ಕೂಟದ 53ನೇ ಸಮ್ಮೇಳನ

Team Udayavani, Feb 24, 2020, 4:12 PM IST

24-February-23

ಭಾಲ್ಕಿ: ಭಕ್ತಾದಿಗಳು ಶ್ರದ್ಧೆ-ಭಕ್ತಿಯಿಂದ ದೇವರ ಧ್ಯಾನ ಮಾಡಿದಲ್ಲಿ ದೇವರು ಒಲಿಯುವನು ಎಂದು ಶ್ರೀ ಜಗದ್ಗುರು ನಿರಂಜನ ಸಂಸ್ಥಾನ ಮಠ ಭಾತಂಬ್ರಾದ ಶ್ರೀ ಜಗದ್ಗುರು ಶಿವಯೋಗೀಶ್ವರ ಮಹಾಸ್ವಾಮಿಗಳು ಹೇಳಿದರು.

ಭಾತಂಬ್ರಾ ಗ್ರಾಮದ ಜಗದ್ಗುರು ನಿರಂಜನ ಸಂಸ್ಥಾನ ಮಠದಲ್ಲಿ ನಡೆದ ಜಿಲ್ಲಾ ಮಠಾಧಿಪತಿಗಳ ಒಕ್ಕೂಟದ 53ನೇ ಸಮ್ಮೇಳನ ಹಾಗೂ ನಮ್ಮೂರ ಹಬ್ಬ ಕನ್ನಡಮ್ಮನ ಹಬ್ಬ-2020ರ ಸಮಾರೋಪ, ಶ್ರೀ ಶಿವಯೋಗೀಶ್ವರ ಮಹಾಸ್ವಾಮಿಗಳ 75ನೇ ಜಯಂತ್ಯುತ್ಸವ ನಿಮಿತ್ತ ಅನಾಥ ಮಕ್ಕಳ ಜನ್ಮದಿನಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಜೀವನದಲ್ಲಿ ಆಸೆಗೆ ಮಿತಿಇಲ್ಲ. ನಮ್ಮ ಭೌತಿಕ ಆಸೆಗಳಿಗೆ ಕಡಿವಾಣಹಾಕಿ ದೇವರನ್ನು ಪಡೆಯುವ ಆಸೆ ನಾವೆಲ್ಲರೂ ಬೆಳೆಸಿಕೊಳ್ಳಬೇಕಾಗಿದೆ. ಮಾನವ ಜನ್ಮದ ಶ್ರೇಷ್ಠತೆ ಅರಿತು, ಆ ದೇವರನ್ನು ಕಂಡುಕೊಳ್ಳಲು ಎಲ್ಲರೂ ಪ್ರಯತ್ನ ಪಡಬೇಕು. ಅದಕ್ಕಾಗಿ ನಾವೆಲ್ಲರೂ ಭಕ್ತಿ ಶ್ರದ್ಧೆಯಿಂದ ದೇವರ ಧ್ಯಾನ ಮಾಡಬೇಕು ಎಂದು ಹೇಳಿದರು.

ಸಮಾರಂಭಕ್ಕೆ ಮುನ್ನ ಗ್ರಾಮದ ವಿವಿಧ ಬೀದಿಗಳಲ್ಲಿ ಲಿಂಗಾಯತ ಧರ್ಮಗ್ರಂಥ ವಚನ ಸಾಹಿತ್ಯ, ಧರ್ಮಗುರು ಬಸವಣ್ಣ ಹಾಗೂ ಅಕ್ಕಮಹಾದೇವಿ ಅವರ ಭಾವಚಿತ್ರ ಮೆರವಣಿಗೆ ನಡೆಯಿತು. ಇದೇವೇಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಡಿತ ರಾಜೇಂದ್ರಸಿಂಗ್‌ ಪವಾರ ಅವರಿಗೆ ಬಸವ ಕಲಾರತ್ನ ಪ್ರಶಸ್ತಿ, ಡಾ| ವಿ.ಬಿ.ಕುಂಬಾರ, ಡಾ| ಪಂಚಯ್ನಾ ಸ್ವಾಮಿ, ಡಾ| ಸುನೀಲ ರಘೋಜಿ ಅವರಿಗೆ ಬಸವಕುಮಾರ ಸಮಾಜ ಸೇವಾ ರತ್ನ ಪ್ರಶಸ್ತಿ, ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ ಹಾಗೂ ಪತ್ರಕರ್ತ ದಿಲೀಪ ಜೊಳದಪಕೆ ಅವರಿಗೆ ವಿಶೇಷ ಸನ್ಮಾನ ನೀಡಿ ಗೌರವಿಸಲಾಯಿತು.

ಖ್ಯಾತ ಸಂಗೀತಗಾರ ಶಿವಾಜಿ ಸಗರ ಅವರಿಂದ ಶಾಸ್ತ್ರೀಯ ಸಂಗೀತ ನಡೆಯಿತು.ಡಾ| ಮಲ್ಲಿಕಾರ್ಜುನ ತರನಳ್ಳೆ, ಗ್ರಾಪಂ ಅಧ್ಯಕ್ಷ ಲಕ್ಷಣರಾವ್‌ ಮೋರೆ, ಜಗದೇವಿ ಸುರೇಶ ಲದ್ದೆ, ವಿಜಯಕುಮಾರ ಬೋರಾಳೆ, ಸತೀಶ ಬಿರಾದಾರ, ನಿರಂಜನ ಸ್ವಾಮಿ, ಸಾಹಿತಿ ದೇವೆಂದ್ರ ಕಮಲ, ಎಸ್‌.ವಿ. ಕಲಮಠ ಸಂಜೀವಕುಮಾರ ಗಾಮಾ, ಸತೀಶ ವಿರೂಪಾಕ್ಷಯ್ಯ ಮಠ, ಸುಭಾಷ ಇಟಗೆ, ಶಂಕರರಾವ್‌ ದಾಡಗೆ ಉಪಸ್ಥಿತರಿದ್ದರು. ದೀಪಕ ಥಮಕೆ ಸ್ವಾಗತಿಸಿದರು. ನ್ಯಾಯವಾದಿ ಶ್ರೀಕಾಂತ ಭೊರಾಳೆ ನಿರೂಪಿಸಿದರು. ಮಹೇಶ ರಾಚೋಟೆ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.