ಗಡಿ ಭಾಗದ ಶಾಲೆಗೆ ಕನ್ನಡ ಶಿಕ್ಷಕರ ನೇಮಿಸಿ

ಮುಂದಿನ ಶೈಕ್ಷಣಿಕ ವರ್ಷದಲ್ಲಾದರೂ ಭರ್ತಿಯಾಗಲಿನಿಯಮ ಮೀರಿ ಖಾಸಗಿ ಶಾಲೆಗಳಿಗೆ ಅನುಮತಿ ಸಲ್ಲ

Team Udayavani, Mar 9, 2020, 5:10 PM IST

9-March-23

ಭಾಲ್ಕಿ: ಗಡಿ ಭಾಗದ ಬಹುತೇಕ ಶಾಲೆಗಳಲ್ಲಿ ಸಾಕಷ್ಟು ವರ್ಷಗಳಿಂದ ಕನ್ನಡ ಭಾಷೆಯ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳು ಕನ್ನಡ ಭಾಷೆ ಕಲಿಕೆಯಿಂದ ವಂಚಿತರಾಗುವ ಆತಂಕ ಎದುರಾಗಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕನ್ನಡ ಶಿಕ್ಷಕರ ನೇಮಕ್ಕೆ  ಮುಂದಾಗುತ್ತಿಲ್ಲ ಎಂದು ತಾಪಂ ಉಪಾಧ್ಯಕ್ಷ ಮಾರುತಿರಾವ್‌ ಮಗರ್‌ ಹಾಗೂ ಸಾಯಿಗಾಂವ ಸದಸ್ಯ ಶಿವಾಜಿ ಮುರಳಿಧರಾವ್‌ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಮೀರಾಬಾಯಿ ಜನಾರ್ದನರಾವ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಾಯಿಗಾಂವ ವ್ಯಾಪ್ತಿಯ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇರುವ ಬಗ್ಗೆ ವಿಷಯ ಪ್ರಸ್ತಾಪಿಸಿ ಸಭೆಯ ಗಮನ ಸೆಳೆದರು.

ಉಪಾಧ್ಯಕ್ಷರು, ಸದಸ್ಯರು ಮಾತನಾಡಿ, ಗಡಿ ಭಾಗದಲ್ಲಿರುವ ನಮಗೆ ಈ ಹಿಂದೆ ಕನ್ನಡ ಭಾಷೆ ಕಲಿಯಲು ಸಾಧ್ಯವಾಗದೇ ಬೇರೆ ಭಾಷೆ ಕಲಿತು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಇಂತಹ ಸಮಸ್ಯೆ ಗಡಿ ಭಾಗದ ಮಕ್ಕಳಿಗೆ ಬರದಿರಲಿ ಎಂದು ಸಾಕಷ್ಟು ಪ್ರಯತ್ನ ಪಡುತ್ತಿದ್ದೇವೆ. ಈ ವಿಷಯ ಗಂಭೀರವಾಗಿ ತೆಗೆದುಕೊಂಡು ಶಾಲೆಗಳಲ್ಲಿ ಕೊರತೆ ಇರುವ ಕನ್ನಡ ಶಿಕ್ಷಕರನ್ನು ನೇಮಿಸುವಂತೆ ಪದೇಪದೇ ಸಭೆಯಲ್ಲಿ ಒತ್ತಾಯಿಸಲಾಗುತ್ತಿದೆ. ಆದರೆ, ಅಧಿಕಾರಿಗಳು ಶಿಕ್ಷಕರ ಕೊರತೆ ನಿಗಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಮುಂದಿನ ಶೈಕ್ಷಣಿಕ ವರ್ಷದಿಂದಾದರೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಗಡಿ ಭಾಗದ ಮಕ್ಕಳಿಗೆ ಕನ್ನಡ ಕಲಿಸುವಂತಾಗಬೇಕು ಎಂದು ಸೂಚನೆ ನೀಡಿದರು.

ನಿಯಮ ಮೀರಿ ಖಾಸಗಿ ಶಾಲೆಗಳಿಗೆ ಅನುಮತಿ: ತಾಲೂಕಿನ ವ್ಯಾಪ್ತಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿಯಮ ಮೀರಿ ಖಾಸಗಿ ಶಾಲೆಗಳಿಗೆ ಅನುಮತಿ ಕೊಡುತ್ತಿರುವುದರಿಂದ ಸರಕಾರಿ ಶಾಲೆಗಳು ಇಂದು ಮುಚ್ಚುವಂತಹ ಪರಿಸ್ಥಿತಿ ಬಂದಿವೆ ಎಂದು ಚಳಕಾಪೂರ ಸದಸ್ಯ ಕಿಶೋರರಾವ್‌ ರಾಮರಾವ್‌ ಅವರು ವಿಷಯ ಪ್ರಸ್ತಾಪಿಸುತ್ತಲೇ, ಮದಕಟ್ಟಿ ಸದಸ್ಯ ಲಿಂಗರಾಜ ಸಂಗಪ್ಪ, ಖಟಕ್‌ ಚಿಂಚೋಳಿ ಸದಸ್ಯ ವಿಜಯಕುಮಾರ ಕಡಗಂಚಿ, ಹಲಬರ್ಗಾ ಸದಸ್ಯ ಸುಧಾಕರ ಶರಣಪ್ಪ, ಜ್ಯಾಂತಿ ಸದಸ್ಯ ಜಗನ್ನಾಥ ಲಕ್ಷ್ಮಣ ಸೇರಿದಂತೆ ಮುಂತಾದ ಸದಸ್ಯರು ಧ್ವನಿಗೂಡಿಸಿದರು.

ಚಳಕಾಪೂರ ಗ್ರಾಮದಲ್ಲಿ ಕುವೆಂಪು ಹೆಸರಿನಲ್ಲಿ ಶತಮಾನೋತ್ಸವ ಶಾಲೆ ನಡೆಯುತ್ತಿದೆ. ಆದರೆ, ವ್ಯವಸ್ಥೆ ಇಲ್ಲದೇ ಅಧೋಗತಿಗೆ ಬಂದಿದೆ. ಇಲಾಖೆಯ ಅಧಿಕಾರಿಗಳು ವ್ಯವಸ್ಥೆ ಸರಿಪಡಿಸುವ ಪ್ರಯತ್ನ ಮಾಡುತ್ತಿಲ್ಲ. ಪರಿಣಾಮ ಸರಕಾರಿ ಶಾಲೆಗೆ ಮಕ್ಕಳಿಗೆ ಸೇರಿಸುವ ಪಾಲಕರ ಮನಸ್ಥಿತಿ ಬದಲಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುತ್ತಿದೆ ಎಂದು ಸದಸ್ಯ ಕಿಶೋರರಾವ್‌ ಬೇಸರ ವ್ಯಕ್ತ ಪಡಿಸಿದರು.

ಇನ್ನಾದರೂ ಅಧಿಕಾರಿಗಳು ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಪರವಾಗಿ ಸಭೆಗೆ ಬಂದಿದ್ದ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳ್ಕರ್‌ ಸಂಬಂಧಿ ತರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಕಂಪ್ಯೂಟರ್‌ ಶಿಕ್ಷಕರನ್ನು ನೇಮಿಸಿ: ತಾಲೂಕಿನ ಎಲ್ಲ ಸರಕಾರಿ ಶಾಲೆಗಳಲ್ಲಿರುವ ಕಂಪ್ಯೂಟರ್‌ಗಳು ಶಿಕ್ಷಕರು ಇಲ್ಲದೇ ಧೂಳು ತಿನ್ನುತ್ತಿವೆ. ಸರಕಾರ ಹಾಗೂ ಶಿಕ್ಷಣ ಇಲಾಖೆ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ತಿಳಿದುಕೊಳ್ಳಲು ಎಲ್ಲ ಶಾಲೆಗಳಿಗೆ ಕಂಪ್ಯೂಟರ್‌ ನೀಡುತ್ತಿದೆ. ಆದರೆ, ಕಂಪ್ಯೂಟರ್‌ ಕಲಿಸಲು ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅ ಧಿಕಾರಿಗಳು ಮುಂದಾಗುತ್ತಿಲ್ಲ. ಇದರಿಂದ ಮಕ್ಕಳು ಕಂಪ್ಯೂಟರ್‌ ಕಲಿಕೆಯಿಂದ ದೂರ ಸರಿಯುವಂತಾಗಿದೆ ಎಂದು ಸದಸ್ಯರು ಸಭೆಯ ಗಮನಕ್ಕೆ ತಂದರು.

ಇದಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್‌ ಅವರು ಕೂಡ ಸಹಮತ ವ್ಯಕ್ತ ಪಡಿಸಿ, ಬರುವ ಶೈಕ್ಷಣಿಕ ವರ್ಷದಿಂದಾದರೂ ಅತಿಥಿ ರೂಪದಲ್ಲಾದರೂ ಕಂಪ್ಯೂಟರ್‌ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಕಲಿಕೆಗೆ ಅವಕಾಶ ಮಾಡಿಕೊಡುವಂತೆ ಇಲಾಖೆಗೆ ಪತ್ರ ಬರೆಯುವಂತೆ ಕ್ಷೇತ್ರ ಸಮನ್ವಯಾಧಿ ಕಾರಿ ಹೋಳ್ಕರ್‌ಗೆ ಸೂಚನೆ ನೀಡಿದರು.

ಕೆಆರ್‌ಐಡಿಎಲ್‌ ಅ ಧಿಕಾರಿಗೆ ತರಾಟೆ: ತಾಲೂಕಿನ ವ್ಯಾಪ್ತಿಯಲ್ಲಿ ನಾನಾ ಕಡೆಗಳಲ್ಲಿ ಕೆಆರ್‌ಐಡಿಎಲ್‌ನಿಂದ ನಡೆಯುತ್ತಿರುವ ಅಂಗನವಾಡಿ ಕಟ್ಟಡ, ರಸ್ತೆ, ಚರಂಡಿ, ಸಮುದಾಯ ಭವನ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳು ಹಲವು ವರ್ಷಗಳಿಂದ ಅರ್ಧಕ್ಕೆ ನಿಂತರೂ ಇಲಾಖೆ ಅ ಧಿಕಾರಿಗಳು ಕಾಮಗಾರಿ ಪೂರ್ಣಗೊಳಿಸುವ ಪ್ರಯತ್ನ ಮಾಡುತ್ತಿಲ್ಲ. ಜನರು ನಮ್ಮನ್ನು ದೂರುತ್ತಿದ್ದಾರೆ ಎಂದು ಹಲಬರ್ಗಾ ಸದಸ್ಯ ಸುಧಾಕರ, ಮದಕಟ್ಟಿ ಸದಸ್ಯ ಲಿಂಗರಾಜ್‌ ಸೇರಿದಂತೆ ಮುಂತಾದರು ಆಕ್ರೋಶ ವ್ಯಕ್ತ ಪಡಿಸಿದರು. ಅಲ್ಲದೇ ಪ್ರತಿಸಲ ನಡೆಯುವ ಸಭೆಗೆ ಇಲಾಖೆಯ ಅಧಿ ಕಾರಿಗಳು ಗೈರಾಗುವ ಮೂಲಕ ಸದಸ್ಯರಿಗೆ ಅಗೌರವ ತೋರುತ್ತಿರುವ ಕೆಆರ್‌ಐಡಿಎಲ್‌ ಗೆ ಇನ್ಮುಂದೆ ಯಾವುದೇ ಕಾಮಗಾರಿ ನೀಡಬಾರದು ಎಂದು ತಿಳಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.