ಸಮಗ್ರ ಪ್ರಗತಿಯತ್ತ ಭಾಲ್ಕಿ ತಾಲೂಕು: ಸಚಿವ ಖಂಡ್ರೆ
Team Udayavani, Jan 23, 2018, 12:58 PM IST
ಭಾಲ್ಕಿ: ನಾಲ್ಕೂವರೆ ವರ್ಷಗಳಲ್ಲಿ ತಾಲೂಕಿನ ನಾನಾ ಗ್ರಾಮಗಳ ರಸ್ತೆ ಡಾಂಬರೀಕರಣ, ಶುದ್ಧ ಕುಡಿವ ನೀರಿನ ಘಟಕ ಸ್ಥಾಪನೆ, ಸಿಸಿ ರಸ್ತೆ, ಶಾಲಾ-ಕಾಲೇಜು, ಆಸ್ಪತ್ರೆ ಕಟ್ಟಡ ನಿರ್ಮಾಣ, ಸಮುದಾಯ ಭವನಗಳು ಸೇರಿದಂತೆ ಹಲವು ಅಭಿವೃದ್ಧಿಪರ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ಕೋನಮೇಳಕುಂದಾ ಗ್ರಾಮದಲ್ಲಿ ಬಸವ ಅನುಭವ ಮಂಟಪ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಪರ ಕೆಲಸಗಳನ್ನು ಕೈಗೊಳ್ಳುವ ಮೂಲಕ ಭಾಲ್ಕಿ ತಾಲೂಕನ್ನು ಸಮಗ್ರ ಪ್ರಗತಿಯತ್ತ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ಹಿಂದೆ ನನ್ನ ತಂದೆ ಭೀಮಣ್ಣ ಖಂಡ್ರೆ ಸೇರಿದಂತೆ ಸಹೋದರ ವಿಜಯಕುಮಾರ ಖಂಡ್ರೆ ಅವರಿಗೆ ಕ್ಷೇತ್ರದ ಜನತೆ ಕೈ ಹಿಡಿದಿದ್ದಾರೆ. ನನ್ನನ್ನು ಸತತ ಎರಡನೇ ಬಾರಿಗೆ ಕ್ಷೇತ್ರದ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಜನರ ನೀರಿಕ್ಷೆಯಂತೆ ಕೆಲಸ ಮಾಡುತ್ತಿದ್ದೇನೆ. ಕಳೆದ ಚುನಾವಣೆಯಲ್ಲಿ ನೀಡಿದ ಬಹುತೇಕ ಭರವಸೆಗಳನ್ನು ಈಡೇರಿಸಲಾಗಿದೆ. ವಸತಿ ಯೋಜನೆಯಡಿ ತಾಲೂಕಿನಲ್ಲಿ ದಾಖಲೆ ಪ್ರಮಾಣದ ಮನೆಗಳನ್ನು ಹಂಚಿಕೆ ಮಾಡಲಾಗಿದೆ.
ನೀರಾವರಿ ಕ್ಷೇತ್ರ, ಕೃಷಿ ಇಲಾಖೆ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಕ್ಷೇತ್ರದ ನಾನಾ ಕಡೆಗಳಲ್ಲಿ ಕೈಗೊಂಡ ಅಭಿವೃದ್ಧಿಪರ ಕಾರ್ಯಗಳು ಎಲ್ಲರ ಎದುರಿವೆ. ಸುಳ್ಳು ವಂಚನೆ ನಡೆಯುವುದಿಲ್ಲ. ಜನರು ಜಾಗೃತರಾಗಿದ್ದು, ಎಲ್ಲವನ್ನು ಸೂಕ್ಷ್ಮ ದೃಷ್ಟಿಯಿಂದ ನೋಡುತ್ತಾರೆ ಎಂದರು. ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಅನುಭವ ಮಂಟಪ ಚಿಂತನ- ಮಂಥನ, ವಚನ ಪ್ರವಚನ, ಅಧ್ಯಾತ್ಮಿಕ ಕಾರ್ಯಗಳಿಗೆ ಸದ್ಬಳಕೆಯಾಗಬೇಕು ಎಂದು ಸಲಹೆ ನೀಡಿದರು.
ಗ್ರಾಪಂ ಅಧ್ಯಕ್ಷ ಶಶಿಧರ ಕೋಸಂಬೆ, ಜಿಪಂ ಸದಸ್ಯ ಉಷಾ ರಾಜೇಂದ್ರ ನಿಟ್ಟೂರಕರ್, ತಾಪಂ ಸದಸ್ಯ ಭೂದೇವಿ ಸುರೇಶ, ಬಸವ ಅನುಭವ ಮಂಟಪದ ಅಧ್ಯಕ್ಷ ಕೆ.ವಿ.ಪಾಟೀಲ, ಈಶ್ವರಪ್ಪ ಚಾಕೋತೆ, ಶ್ರೀದೇವಿ ಪ್ರಕಾಶ ಸುಕಾಲೆ, ತಾಲೂಕು ಮಹಿಳಾ ಮಂಡಳದ ಅಧ್ಯಕ್ಷೆ ಚಿನ್ನಮ್ಮ ಬಾವುಗೆ, ಎಪಿಎಂಸಿ ಸದಸ್ಯ ಶಿವರಾಜ ಹಂಪಾ, ಗ್ರಾಪಂ ಸದಸ್ಯ ದತ್ತಾತ್ರಿ ಹಂಪಾ, ಜ್ಯೋತಿಷಿ ಹಲಬರ್ಗೆ, ಸಿದ್ದು ತುಗಶೆಟ್ಟೆ ಇದ್ದರು. ಬಸವರಾಜ ಕೊಡಗೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ