ಖಾಸಗಿ ವೈದ್ಯರಿಗೂ ಕೊರೊನಾ ಭೀತಿ 

ಸೋಂಕು ಹರಡುವ ಆತಂಕದಲ್ಲಿ ಕ್ಲಿನಿಕ್‌ | ಪರವಾನಗಿ ರದ್ದು ಎಚ್ಚಕೆಗೂ ಕ್ಯಾರೆ ಎನ್ನುತ್ತಿಲ್ಲ

Team Udayavani, Apr 7, 2020, 3:30 PM IST

07-April-20

ಬೀದರ: ದೇಶದಲ್ಲಿ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕು ಈಗ ವೈದ್ಯರ ಸೇವೆ ಮೇಲೂ ಪರಿಣಾಮ ಬೀರುತ್ತಿದೆ. ವೈರಸ್‌ ಭೀತಿಗೆ ಜಿಲ್ಲೆಯಾದ್ಯಂತ
ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್‌ ಆಗಿದ್ದು, ರೋಗಿಗಳು ಪರದಾಡುವಂತಾಗಿದೆ. ಕ್ಲಿನಿಕ್‌ಗಳನ್ನು ತೆರೆಯದಿದ್ದರೆ ಪರವಾನಗಿ ರದ್ದುಗೊಳಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರೂ ವೈದ್ಯರು ಕ್ಯಾರೆ ಎನ್ನುತ್ತಿಲ್ಲ.

ಮಹಾಮಾರಿ ಸೋಂಕು ಹರಡುವ ಭೀತಿ ಮತ್ತು ಲಾಕ್‌ಡೌನ್‌ ಹೇರಿಕೆ ಹಿನ್ನೆಲೆಯಲ್ಲಿ ಬಹುತೇಕ ಖಾಸಗಿ ಕ್ಲಿನಿಕ್‌ಗಳು ಬಂದ್‌ ಆಗಿವೆ. ಕೆಲವೆಡೆ ನರ್ಸಿಂಗ್‌
ಹೋಮ್‌ಗಳು ಮಾತ್ರ ತರೆದಿವೆ. ತುರ್ತು ಚಿಕಿತ್ಸೆ ನೀಡುತ್ತೇವೆ ಎಂದೆನ್ನುವ ವೈದ್ಯರು ವಾಸ್ತವವಾಗಿ ಗೇಟಿಗೆ ಬೀಗ ಹಾಕಿದ್ದಾರೆ. ಇದರಿಂದ ಜನ ಸಾಮಾನ್ಯರು ಆರೋಗ್ಯ ಸೇವೆ ಸಿಗದೆ ಕಂಗಾಲಾಗಿದ್ದಾರೆ. ಸದ್ಯ ಬೇಸಿಗೆ ದಿನಗಳಿದ್ದು, ದಿನ ಕಳೆದಂತೆ ತಾಪಮಾನ ಏರಿಕೆಯಾಗುತ್ತಿದೆ. ಉಷ್ಣಾಂಶದಿಂದ ಮಕ್ಕಳಲ್ಲಿ ಜ್ವರ, ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿವೆ. ವಯಸ್ಕರು ರಕ್ತದೊತ್ತಡ, ಮಧುಮೇಹ, ಕಣ್ಣಿನ ಸಮಸ್ಯೆ, ಸ್ನಾಯು ನೋವು ಸೇರಿದಂತೆ ಸಾಮಾನ್ಯ ರೋಗಗಳಿಗೆ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದು, ಚಿಕಿತ್ಸೆಗಾಗಿ ಹೋದರೆ ಬಾಗಿಲು ಹಾಕಿದ್ದನ್ನು ನೋಡಿ ವಾಪಸ್ಸು ಬರುವಂತಾಗಿದೆ. ಇನ್ನು ಕೆಲವರು ಸರ್ಕಾರಿ ಆಸ್ಪತ್ರೆಗಳ ಮೊರೆ ಹೋಗುತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಚಿಕಿತ್ಸೆಯ ಸೇವೆಯಲ್ಲಿ ಸರ್ಕಾರಿ ವೈದ್ಯರು ತಮ್ಮನ್ನು ತೊಡಗಿಸಿಕೊಂಡಿದ್ದರಿಂದ ಆರೋಗ್ಯ ಸೇವೆ
ಪಡೆಯುವವರು ಗಂಟೆಗಟ್ಟಲೇ ಕಾಯುವಂತಾಗಿದೆ.

ಹೆಚ್ಚಿದ ಆತಂಕ: ಕೊರೊನಾ ವೈರಸ್‌ ವ್ಯಾಪಿಸುತ್ತಿರುವ ಕಾರಣ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಹಿಂಜರಿಯುತ್ತಿದ್ದಾರೆ. ಆಸ್ಪತ್ರೆಗೆ ಕೆಲವೊಮ್ಮೆ ಕುಟುಂಬದ ಮೂರ್‍ನಾಲ್ಕು ಜನರು ಬರುತ್ತಾರೆ. ಮುಂಜಾಗ್ರತಾ ಕ್ರಮ ಅನುಸರಿಸುವುದಿಲ್ಲ. ಅವರಲ್ಲಿ ಕೊರೊನಾ ಸೋಂಕಿತರು ಯಾರು ಎಂದು ಹೇಳಲು
ಸಾಧ್ಯವಿಲ್ಲ. ಈಚೆಗೆ ಕಲಬುರ್ಗಿಯಲ್ಲಿ ಮೃತಪಟ್ಟ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಸೋಂಕು ತಗುಲಿದ ಪ್ರಕರಣ ಬಳಿಕ ವೈದ್ಯರಲ್ಲಿ ಆತಂಕ ಹೆಚ್ಚಿಸಿದೆ. ಅಷ್ಟೇ ಅಲ್ಲ, ಜನರೂ ಲಾಕ್‌ಡೌನ್‌ ಕಾರಣ ಬರುತ್ತಿಲ್ಲ. ಜತೆಗೆ ಆಸ್ಪತ್ರೆಗಳ ಸಿಬ್ಬಂದಿಯೂ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬೀದರ ನಗರದಲ್ಲಿ ಸುಮಾರು 50 ಮತ್ತು ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಿವೆ. ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ
ಬೆರಳಣಿಕೆಯಷ್ಟು ಆಸ್ಪತ್ರೆಗಳು ಮಾತ್ರ ತೆಗೆದಿವೆ. ಕೆಲವೆಡೆ ಒಪಿಡಿ ಮಾತ್ರ ಬಂದ್‌ ಮಾಡಿದ್ದರೆ, ಇನ್ನು ಕೆಲ ಕ್ಲಿನಿಕ್‌ಗಳನ್ನು ಸಂಪೂರ್ಣ ಬಂದ್‌ ಮಾಡಲಾಗಿದೆ.
ಹೀಗಾಗಿ ಸಾಮಾನ್ಯ ರೋಗದಿಂದ ಬಳಲುತ್ತಿರುವವರು ಮೆಡಿಕಲ್‌ ಅಂಗಡಿಗಳಲ್ಲಿ ನೇರವಾಗಿ ಮಾತ್ರೆ ಪಡೆದು ತಾತ್ಕಾಲಿಕ ರಿಲೀಫ್‌ ಪಡೆಯುತ್ತಿದ್ದಾರೆ.

ಆಸ್ಪತ್ರೆಗಳನ್ನು ಬಂದ್‌ ಮಾಡಬೇಕೆಂದು ಐಎಂಎ ಸೂಚನೆ ನೀಡಿಲ್ಲ. ನಗರದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಲಭ್ಯವಿದೆ. ಆದರೆ, ದಿನದಲ್ಲಿ ಮೂರ್‍ನಾಲ್ಕು
ರೋಗಿಗಳೂ ಸಹ ಕ್ಲಿನಿಕ್‌ಗೆ ಬರುತ್ತಿಲ್ಲ. ಸಿಬ್ಬಂದಿಯೂ ಕೆಲಸಕ್ಕೆ ಆಗಮಿಸುತ್ತಿಲ್ಲ. ಹೀಗಾಗಿ ಕೆಲವೆಡೆ ಮಾತ್ರ ಒಪಿಡಿ ಆರಂಭಿಸಲಾಗಿದೆ. ಸೋಂಕಿತರು ಚಿಕಿತ್ಸೆಗೆ ಬರಬಹುದೆಂಬ ಆತಂಕವೂ ಇದೆ.
ಡಾ| ವಿ.ವಿ. ನಾಗರಾಜ, ಅಧ್ಯಕ್ಷರು, ಇಂಡಿಯನ್‌
ಮೆಡಿಕಲ್‌ ಅಸೋಸಿಯೇಷನ್‌, ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.