ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವ 12ಕ್ಕೆ

ರಾಣಿ ಸತ್ಯಮೂರ್ತಿ ನಿರ್ದೇಶನದಲ್ಲಿ ಭರತನಾಟ್ಯ, ಕಥಕ್‌, ಕೂಚಿಪುಡಿ, ಜಾನಪದ ನೃತ್ಯ-ಸಂಗೀತ ಕಾರ್ಯಕ್ರಮ

Team Udayavani, Jan 10, 2020, 2:30 PM IST

10-January-14

ಬೀದರ: ನಾಟ್ಯಶ್ರೀ ನೃತ್ಯಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ. 12ರಂದು ನಗರದ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾ ಸಂಭ್ರಮೋತ್ಸವದಲ್ಲಿ ಕರಾವಳಿಯ ಕಲಾ ಪ್ರತಿಭೆ ರಾಣಿ ಸತ್ಯಮೂರ್ತಿ ಅವರ ನಿರ್ದೇಶನದಲ್ಲಿ ಭರತನಾಟ್ಯ, ಕಥಕ್‌ ನೃತ್ಯ, ಕೂಚಿಪುಡಿ ನೃತ್ಯ, ಜಾನಪದ ನೃತ್ಯ, ಸಂಗೀತ ಹಾಗೂ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 10:30ಕ್ಕೆ ನಡೆಯಲಿರುವ “ಶಾಸ್ತ್ರೀಯ ನೃತ್ಯ ವೈಭವ’ದಲ್ಲಿ ನಾಟ್ಯಶ್ರೀ ನೃತ್ಯಾಲಯದ ಕಲಾವಿದರು ಭರತನಾಟ್ಯ ಪ್ರದರ್ಶಿಸಲಿದ್ದಾರೆ.

ಶ್ವೇತಾ ವಿ. ಅವರ ನಿರ್ದೇಶನದಲ್ಲಿ ಪೌರಾಣಿಕ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು. ಮಧ್ಯಾಹ್ನ 12:30ಕ್ಕೆ ಶಾಸ್ತ್ರೀಯ ನೃತ್ಯ ಮತ್ತು ವ್ಯಕ್ತಿತ್ವ ವಿಕಸನ ಕುರಿತ ವಿಶೇಷ ಉಪನ್ಯಾಸ ಜರುಗಲಿದೆ. ಉಡುಪಿಯ ಕೊಡವೂರು ನೃತ್ಯ
ನಿಕೇತನದ ನಿರ್ದೇಶಕ ಕೆ. ಸು ಧೀರರಾವ್‌ ಉಪನ್ಯಾಸ ನೀಡುವರು. ಜಾನಪದ ಅಕಾಡೆಮಿ ಸದಸ್ಯ ಡಾ| ರಾಜೇಂದ್ರ ಯರನಾಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹಾಗೂ ಹಿರಿಯ ಸಾಹಿತಿ ಪ್ರೊ| ಶಿವಕುಮಾರ ಕಟ್ಟೆ ಉಪಸ್ಥಿತರಿರುವರು ಎಂದು ಹೇಳಿದರು.

ಮಧ್ಯಾಹ್ನ 2:45ಕ್ಕೆ ನಡೆಯಲಿರುವ “ಶಾಸ್ತ್ರೀಯ ನೃತ್ಯ ಕೂಚಿಪುಡಿ’ಯಲ್ಲಿ ಬಳ್ಳಾರಿಯ ಖ್ಯಾತ ಅಂತಾರರಾಷ್ಟ್ರೀಯ ಕಲಾವಿದ ಮಯೂರಿ ಬಸವರಾಜ ಅವರು “ತರಂಗಂ’ ಮತ್ತು “ಭಾಮಾಕಲಾಪ’ ಕೂಚಿಪುಡಿ ನೃತ್ಯ ಪ್ರದರ್ಶಿಸಲಿದ್ದಾರೆ ಎಂದು ತಿಳಿಸಿದರು.

ಮಧ್ಯಾಹ್ನ 3:30ಕ್ಕೆ ವಿಜಯಪುರದ ಖ್ಯಾತ ಅಂತಾರಾಷ್ಟ್ರೀಯ ಕಲಾವಿದ ರಂಗನಾಥ ಬತ್ತಾಸಿ ನಿರ್ದೇಶನದಲ್ಲಿ ಶಾಸ್ತ್ರೀಯ ನೃತ್ಯ ಕಥಕ್‌ ಜರುಗಲಿದೆ. ಕಲಾವಿದರಾದ ಶಂಭುಲಿಂಗ ವಾಲೊªಡ್ಡಿ, ಭಾನುಪ್ರಿಯಾ ಅರಳಿ, ಮಹೇಶ ಕುಂಬಾರ, ಮಹೇಶ್ವರಿ ಪಾಂಚಾಳ, ರೇಣುಕಾ ಎನ್‌.ಬಿ., ಪ್ರವೀಣಕುಮಾರ, ಇಮಾನುವೆಲ್‌, ಶೈಲಜಾ ದಿವಾಕರ್‌, ಭಾಗ್ಯಲಕ್ಷ್ಮೀ ಗುರುಮೂರ್ತಿ ಹಾಗೂ ರಮ್ಯ ಜೋಶಿ ಅವರು ಜಾನಪದ ಗೀತೆ, ದಾಸರ ಪದ, ಸುಗಮ ಸಂಗೀತ ಹಾಗೂ ವಚನ ಗಾಯನ ನಡೆಸಿಕೊಡುವರು ಎಂದು ವಿವರಿಸಿದರು.

ಸಂಜೆ 4ಕ್ಕೆ ಸಭಾ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಚಾಲನೆ ನೀಡುವರು. ಹಾರಕೂಡದ ಶ್ರೀ ಚನ್ನವೀರ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಸಂಸದ ಭಗವಂತ ಖೂಬಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಲವಂತರಾವ್‌ ಪಾಟೀಲ, ರಾಯಚೂರು ಕೃಷಿ ವಿವಿಯ ಡಾ| ಕೆ. ಭವಾನಿ, ದಕ್ಷಿಣ ಕರಾವಳಿ ಕನ್ನಡ ಸಂಘದ ಅಧ್ಯಕ್ಷ ಪ್ರೊ| ಪಿ.ಎನ್‌. ದಿವಾಕರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಉಡುಪಿಯ ಕೊಡವೂರು ನೃತ್ಯ ನಿಕೇತನದ ನಿರ್ದೇಶಕ ಕೆ. ಸುಧೀರರಾವ್‌ ಉಪಸ್ಥಿತರಿರುವರು. ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.
ವಿಜಯಪುರದ ಕಥಕ್‌ ನೃತ್ಯ ಕಲಾವಿದ ರಂಗನಾಥ ಬತ್ತಾಸಿ ಅವರಿಗೆ 2020ನೇ ಸಾಲಿನ ನಾಟ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿಯು ರೂ. 10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು. ಸಂಜೆ 5:30ಕ್ಕೆ ಜನಪದ ಸಂಭ್ರಮ ನಡೆಯಲಿದ್ದು, ನಾಟ್ಯಶ್ರೀ ನೃತ್ಯಾಲಯದ ಕಲಾವಿದರಿಂದ ವೈವಿಧ್ಯಮಯ ಸಮೂಹ ನೃತ್ಯ, ಶಾಂಭವಿ ತಂಡದಿಂದ ನೃತ್ಯ ರೂಪಕ ಹಾಗೂ ನಾಟ್ಯಶ್ರೀ ನೃತ್ಯಾಲಯದ ಪಾಲಕರಿಂದ ಕೋಲಾಟ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು. ನಾಟ್ಯಶ್ರೀ ನೃತ್ಯಾಲಯದ ಅಧ್ಯಕ್ಷ ಸತ್ಯಮೂರ್ತಿ ಹಾಗೂ ಪ್ರತಿಭಾ
ಚಾಮಾ ಇದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.