ಜಿಲ್ಲಾದ್ಯಂತ ಸಂಕ್ರಾಂತಿ ಸಂಭ್ರಮ
ಎಳ್ಳು-ಬೆಲ್ಲ ಹಂಚಿ-ಶುಭಾಶಯ ವಿನಿಮಯಬಾನಂಗಳದಲ್ಲಿ ಗಾಳಿಪಟಗಳ ಕಲರವ
Team Udayavani, Jan 16, 2020, 11:43 AM IST
ಬೀದರ: ಸುಗ್ಗಿಯ ಹಬ್ಬ ಮಕರ ಸಂಕ್ರಾಂತಿಯನ್ನು ಜಿಲ್ಲೆಯಾದ್ಯಂತ ಬುಧವಾರ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಪ್ರತಿ ಹಬ್ಬ ತನ್ನದೇಯಾದ ಸಂಪ್ರದಾಯ ಮತ್ತು ವೈಶಿಷ್ಟ್ಯತೆಗಳಿದ್ದು, ಅದರಲ್ಲಿ ಸಂಕ್ರಾಂತಿ ಎಲ್ಲ ಹಬ್ಬಕ್ಕಿಂತ ವಿಶೇಷ. ಹೆಣ್ಣು ಮಕ್ಕಳು ಸಂಭ್ರಮದಿಂದ ಹಬ್ಬ ಆಚರಿಸಿದರೆ, ಗಂಡು ಮಕ್ಕಳು ಗಾಳಿಪಟ ಹಾರಿಸಿ ಸಂತಸ ಪಟ್ಟರು. ಹಿಂದಿನ ಎರಡ್ಮೂರು ವರ್ಷ ಪ್ರಕೃತಿ ವಿಕೋಪದಿಂದ ಹಬ್ಬ ಸಂಭ್ರಮ ಮರೆಸಿತ್ತು. ಆದರೆ, ಈ ಬಾರಿ ಉತ್ತಮ ಮಳೆ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಸಂಭ್ರಮ ಮನೆ ಮಾಡಿತ್ತು.
ಪ್ರತಿಯೊಬ್ಬರ ಮನೆಯಲ್ಲಿ ಸುರ್ಯೋದಯವಾಗುತ್ತಿದ್ದಂತೆ ಸಂಭ್ರಮ ಆರಂಭವಾಗಿತ್ತು. ಹಬ್ಬಕ್ಕಾಗಿ ತಾಯಿ ಮಕ್ಕಳಿಗೆ ಚಿಗುಳು ಮತ್ತು ಎಣ್ಣೆ ನೀರು ಹಾಕಿ ಪುಣ್ಯ ಸ್ನಾನ ಮಾಡಿಸಿದರು. ಮನೆ ಮುಂದೆ ರಂಗೋಲಿ ಕಂಗೊಳಿಸುತ್ತಿತ್ತು. ನಿತ್ಯ ಚಹಾ ಅಥವಾ ಕಾಫಿಯಿಂದ ಆರಂಭವಾಗುವ ದಿನ ಸಂಕ್ರಾಂತಿ ದಿನದಂದು ಮಾತ್ರ ಎಳ್ಳು- ಬೆಲ್ಲ, ಹಣ್ಣು ಸೇವಿಸಿ ಹಬ್ಬ ಸ್ವಾಗತಿಸುವುದು ಸಾಮಾನ್ಯವಾಗಿತ್ತು.
ನಂತರ ಸಣ್ಣ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಹೊಸ ಬಟ್ಟೆ ತೊಟ್ಟು ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆಯುವುದು ಮತ್ತು ಸಂಜೆ ಹೊತ್ತಿಗೆ ಸಂಬಂಧಿಕರು ಮತ್ತು ಗೆಳೆಯರ ಮನೆಗಳಿಗೆ ತೆರಳಿ ಎಳ್ಳು ಬೀರಿ ಶುಭಾಷಯ
ವಿನಿಮಯ ಮಾಡಿಕೊಳ್ಳುವುದು ಸಾಮಾನ್ಯವಾಗಿತ್ತು. ಹಬ್ಬದ ನಿಮಿತ್ತ ಎಳ್ಳು ಬೀರುವುದರ ಜೊತೆಗೆ ಪ್ರತಿ ಮನೆಯಲ್ಲಿ ಮುತ್ತೆ$çದೆಯವರಿಗೆ ಉಡುಗೊರೆ ನೀಡುವ ಕಾರ್ಯಕ್ರಮಗಳು ನಡೆದವು.
ಗ್ರಾಮೀಣ ಭಾಗದಲ್ಲಿ ಈ ಹಬ್ಬವನ್ನು ಇನ್ನಷ್ಟು ವಿಶೇಷವಾಗಿ ಆಚರಿಸಲಾಯಿತು. ನಗರದ ಕೆಲವೆಡೆ ರಂಗೋಲಿ ಸ್ಪರ್ಧೆ ನಡೆಸಲಾಯಿತು. ಮಹಿಳೆಯರು ಬಗೆಬಗೆಯ ಚಿತ್ತಾರಗಳನ್ನು ಅರಳಿಸಿದರು. ಜಿಲ್ಲೆಯಲ್ಲಿ ವಿವಿಧೆಡೆಗಳಲ್ಲಿ ಎಳ್ಳು-ಬೆಲ್ಲ ವಿನಿಮಯದ ಮೂಲಕ ಸಂಕ್ರಾಂತಿ ಹಬ್ಬ ಆಚರಿಸಿದರೆ, ಹುಮನಾಬಾದನಲ್ಲಿ ಬಣ್ಣ ಬಣ್ಣದ ಗಾಳಿಪಟ ಹಾರಿಸಿ ಸಂಕ್ರಾಂತಿ ಆಚರಿಸಲಾಯಿತು. ಬಾನಂಗಳದಲ್ಲಿ ಗಾಳಿಪಟ-ಪತಂಗಗಳ ನಯನ ಮನೋಹರ ಚಿತ್ತಾರ ಆಕರ್ಷಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ