ಮಾಸ್ಕ್ ಅಭಾವ ಸೃಷ್ಟಿಸಿ ಸುಲಿಗೆ


Team Udayavani, Mar 7, 2020, 12:19 PM IST

7-March-05

ಬೀದರ: ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ಸೋಂಕು ಪಕ್ಕದ ತೆಲಂಗಾಣಕ್ಕೆ ಪ್ರವೇಶದಿಂದ ಗಡಿ ಜಿಲ್ಲೆ ಬೀದರನಲ್ಲಿ ರೋಗದ ಆತಂಕ ಹೆಚ್ಚಿದೆ. ಜನರಲ್ಲಿನ ಈ ಭೀತಿಯನ್ನೇ ಬಂಡವಾಳ ಮಾಡಿಕೊಂಡಿರುವ ಔಷಧ ವ್ಯಾಪಾರಿಗಳು ನಿಗದಿತ ದರಕ್ಕಿಂತ ಹೆಚ್ಚು ಬೆಲೆಯಲ್ಲಿ ಕ್ಲಿನಿಕಲ್‌ ಮಾಸ್ಕ್ (ಮುಖಗವಸ)ಗಳನ್ನ ಮಾರಾಟ ಮಾಡುವ ಮೂಲಕ ಸುಲಿಗೆಗೆ ಇಳಿದಿದ್ದಾರೆ.

ತೆಲಂಗಾಣದ ಹೈದ್ರಾಬಾದ್‌ನ ವ್ಯಕ್ತಿಯಲ್ಲಿ ವೈರಸ್‌ ದೃಢಪಟ್ಟಿರುವುದು ಮತ್ತು ಜಿಲ್ಲೆಯಲ್ಲಿ ಶಂಕಿತ ಕೊರೊನಾ ಮೂರು ಪ್ರಕರಣಗಳು ವರದಿಯಾಗಿವೆ. ಆದರೆ, ಅನಗತ್ಯ ಭಯಗೊಳ್ಳುವ ಅಗತ್ಯವಿಲ್ಲ. ಆದರೂ ಮಹಾಮಾರಿ ಸೋಂಕು ವ್ಯಾಪಿಸದಂತೆ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದ್ದು, ಜ್ವರ, ಕೆಮ್ಮು ಇರುವವರು ಸೇರಿದಂತೆ ಸಾರ್ವಜನಿಕರು ಮಾಸ್ಕ್ಗಳನ್ನು ಬಳಸಿ ಮುಂಜಾಗ್ರತೆ ವಹಿಸುವಂತೆ ಜಾಗೃತಿ ಮೂಡಿಸುತ್ತಿವೆ. ಆದರೆ, ಜಿಲ್ಲೆಯಲ್ಲಿ ಹೋಲ್‌ ಸೇಲ್‌ ಮಾರಾಟಗಾರರು ಕ್ಲಿನಿಕಲ್‌ ಮಾಸ್ಕ್ ಗಳ ಕೃತಕ ಅಭಾವ ಸೃಷ್ಟಿಸುತ್ತಿದ್ದಾರಲ್ಲದೇ ಸುಮಾರು ಶೇ. 300 ಪಟ್ಟು ದರ ಹೆಚ್ಚಿಸಿ ಮಾರಾಟ ಮಾಡಲಾಗುತ್ತಿದೆ. ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕು ಎಂದು ಶಾಲಾ ಆಡಳಿತ ಮಂಡಳಿ ಸೂಚಿಸಿವೆ. ಹಾಗಾಗಿ ಕಳೆದ ಎರಡ್ಮೂರು ದಿನಗಳಿಂದ ನಗರ ಸೇರಿ ಜಿಲ್ಲೆಯಲ್ಲಿ ಮಾಸ್ಕ್ಗಳ ಬೇಡಿಕೆ ಹೆಚ್ಚಾಗಿದೆ. ಆದರೆ, ಪಾಲಕರು ಔಷಧ ಮಳಿಗೆಗಳಿಗೆ ಸುತ್ತಾಡಿದರೂ ಮಾಸ್ಕ್ಗಳು ಲಭ್ಯವಿಲ್ಲ ಎಂಬ ಉತ್ತರ ಸಿಗುತ್ತಿದೆ. ಇದ್ದರೂ 30 ರಿಂದ 40 ರೂ.ಗಳಿಗೆ ಕೊಡುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಕ್ಲಿನಿಕಲ್‌ ಮಾಸ್ಕ್ ರಿಟೈಲ್‌ ಮಾರಾಟ ದರ 5 ರೂ. ಇರುತ್ತದೆ. ಇದನ್ನು ಹೋಲ್‌ಸೇಲ್‌ ದರದಲ್ಲಿ ಖರೀದಿ ಮಾಡಿದರೆ 3ರಿಂದ 4 ರೂ. ವರೆಗೆ ದೊರೆಯುತ್ತದೆ. ಆದರೆ, ಪ್ರಸ್ತುತ ಹೋಲ್‌ಸೇಲ್‌ ಮಾರಾಟಗಾರರೇ ರೀಟೈಲ್‌ ವ್ಯಾಪಾರಿಗಳಿಗೆ 20 ರಿಂದ 25 ರೂ. ವರೆಗೆ ದರ ನಿಗದಿಪಡಿಸುತ್ತಿದ್ದಾರೆ. ಇನ್ನೂ ರಿಟೈಲ್‌ ಮಾರಾಟಗಾರರು ಅದಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇನ್ನೊಂದೆಡೆ ಬೇಡಿಕೆ ಹೆಚ್ಚಾಗಿದ್ದು, ಅದಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಹಾಗಾಗಿ ಹೋಲ್‌ಸೇಲ್‌ ಮತ್ತು ರಿಟೈಲ್‌ ಇಬ್ಬರು ವ್ಯಾಪಾರಿಗಳು ಜನರಿಂದ ಹೆಚ್ಚು ಹಣ ಕೀಳುತ್ತಿದ್ದಾರೆ.

ಜನರ ಭೀತಿಯನ್ನು ಲಾಭವಾಗಿಸಿಕೊಳ್ಳಲು ಫಾರ್ಮಸಿಸ್ಟ್‌ಗಳು ಮತ್ತು ಔಷಧ ವಿತರಕ ಕಂಪನಿಗಳು ಮಾಸ್ಕ್ಗಳ ಕೊರತೆ ಸೃಷ್ಟಿಸಿ, ಹೆಚ್ಚು ದರಕ್ಕೆ ಮಾರಾಟ ಮಾಡಿದರೆ ಕಾನೂನು ಕ್ರಮ ಜರುಗಿಸುವ ಕುರಿತು ಸರ್ಕಾರ ಎಚ್ಚರಿಕೆ ನೀಡಿದೆ. ಎಂಆರ್‌ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಿದರೆ ಆರೋಗ್ಯವಾಣಿ 104ಗೆ ಕರೆ ಮಾಡಿ ದೂರು ನೀಡಬಹುದೆಂದು ಸೂಚಿಸಿದೆ. ಆದರೂ ವ್ಯಾಪಾರಿಗಳು ಜನರಿಂದ ಹಣ ಕೀಳುವುದು ನಿಲ್ಲಿಸುತ್ತಿಲ್ಲ. ಈ ಕೃತ್ಯಕ್ಕೆ ಕಡಿವಾಣ ಹಾಕಬೇಕಾದ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆಕ್ರೋಶ.

ಈಗಲಾದರೂ ಆರೋಗ್ಯ ಇಲಾಖೆ ಎಚ್ಚೆತ್ತು ಮಾಸ್ಕ್ಗಳನ್ನು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ದೊರಕಿಸಿಕೊಡುವತ್ತ ಕ್ರಮ ವಹಿಸಬೇಕಿದೆ.

ಕ್ಲಿನಿಕಲ್‌ ಮಾಸ್ಕ್ಗಳನ್ನು ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಶುಕ್ರವಾರ ಎಲ್ಲ ಔಷಧ ಅಂಗಡಿ ಮಾಲೀಕರ ಸಭೆ ನಡೆಸಿ ಮಾಸ್ಕ್ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಮತ್ತು ಫಾರ್ಮಸಿಸ್ಟ್‌ ಅಸೋಸಿಯೇಶನ್‌ ಮೂಲಕವೂ ಮನವಿ ಮಾಡಿಸಲಾಗಿದೆ. ಸಾರ್ವಜನಿಕರಿಂದ ಹಣ ಸುಲಿಗೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಶರಣಬಸಪ್ಪ, ಸಹಾಯಕ ಔಷಧ ನಿಯಂತ್ರಣಾಧಿಕಾರಿ

„ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.