ಮೋದಿ ಹವಾ, ಸರ್ಕಾರದ ಆಟ ನಡೆದಿಲ್ಲ,ಜನ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ: ಭೀಮರಾವ್ ಪಾಟೀಲ
Team Udayavani, Dec 14, 2021, 12:59 PM IST
ಹುಮನಾಬಾದ: ಮೋದಿ ಹವಾ ಇಲ್ಲ ಸರ್ಕಾರದ ಆಟ ನಡೆದಿಲ್ಲ ಮತದಾರ ಪ್ರಭುಗಳು ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ ಎಂದು ನೂತನ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ ಹೇಳಿದ್ದಾರೆ.
ಮಂಗಳವಾರ ನಡೆದ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ ಜಿಲ್ಲೆಯಲ್ಲಿ ಕೇಂದ್ರ ಸಚಿವರು ಹಾಗೂ ರಾಜ್ಯ ಸಚಿವರ ಆಟ ಇಲ್ಲಿ ನಡೆದಿಲ್ಲ. ಹಣಬಲ ಕೆಲಸ ಮಾಡಿಲ್ಲ. ಮತದಾರರಿಗೆ ಸೀರೆ, ಹಣ, ನಾಣ್ಯಗಳು ಹಂಚಿರುವುದು ಎಲ್ಲರಿಗೂ ತಿಳಿದ ವಿಷಯ. ಅದರೂ ಕೂಡ ಮತದಾರ ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ ಎಂದರು.
ಇದನ್ನೂ ಓದಿ: ದ.ಕ ದ್ವಿಸದಸ್ಯ ಕ್ಷೇತ್ರ: ಕೋಟ ಶ್ರೀನಿವಾಸ ಪೂಜಾರಿ,ಮಂಜುನಾಥ್ ಭಂಡಾರಿಗೆ ಜಯ
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿಜಯಸಿಂಗ್, ಅಶೋಕ ಖೇಣಿ, ಅರವಿಂದ ಅರಳಿ, ಚಂದ್ರಸಿಂಗ್, ಶಾಸಕ ರಹೀಮ್ ಖಾನ್, ಮೀನಾಕ್ಷಿ, ಸಹೋದರ ಶಾಸಕ ರಾಜಶೇಖರ ಪಾಟೀಲ, ಡಾ। ಚಂದ್ರಶೇಖರ ಪಾಟೀಲ ಸೇರಿದಂತೆ ಅನೇಕರು ಹಗಲು ಇರುಳು ಶ್ರಮಿಸಿದ್ದಾರೆ. ಪುರಸಭೆ, ಪಟ್ಟಣ ಪಂಚಾಯತ, ಗ್ರಾಮ ಪಂಚಾಯತ, ನಗರಸಭೆ ಸದಸ್ಯರು ಹೆಚ್ಚಿನ ಮತಗಳು ಚಲಾಯಿಸಿ ಜಯಗಳಿಸಲು ಸಹಕಾರ ನೀಡಿದು ಅವರ ಋಣ ಅಭಿವೃದ್ಧಿ ಕಾರ್ಯಮಾಡುವ ಮೂಲಕ ತಿರಿಸುತ್ತೇನೆ ಎಂದು ಹೇಳಿದರು.
ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಅಭಿಮಾನಿಗಳು ಶಾಸಕರ ಮನೆಗೆ ಎದುರಿಗೆ ಜಮಾಯಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿವಿಧೆಡೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!