ಕೊರೊನಾ ಕರ್ಫ್ಯೂಗೆ ಬೀದರ ಜಿಲ್ಲೆ ಸ್ತಬ್ದ
Team Udayavani, Apr 29, 2021, 10:28 PM IST
ಬೀದರ: ಎರಡನೇ ಅಲೆ ರೂಪದಲ್ಲಿ ಅಪ್ಪಳಿಸಿರುವ ಹೆಮ್ಮಾರಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಘೋಷಿಸಿರುವ “ಕೊರೊನಾ ಕರ್ಫ್ಯೂ’ ಜಾರಿಯಾದ ಮೊದಲ ದಿನವೇ ಗಡಿ ನಾಡು ಬೀದರ ಸಂಪೂರ್ಣ ಸ್ತಬ್ಧಗೊಂಡಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಕಠಿಣ ನಿಯಮ ಪಾಲನೆಯಿಂದಾಗಿ ಜನ-ವಾಹನ ಸಂಚಾರ ತೀವ್ರ ಕಡಿಮೆಯಾಗಿದ್ದು, ಕರ್ಫ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಕೋವಿಡ್ ಸಾವಿನ ರಣಕೇಕೆ ಜತೆಗೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಬೀದರನಲ್ಲಿ ಈ ಮೊದಲೇ ನೈಟ್ ಕರ್ಫ್ಯೂ ಜಾರಿಯಲ್ಲಿತ್ತು. ನಂತರ ಸೋಂಕಿನ ಆರ್ಭಟ ಅಧಿಕವಾಗುತ್ತಿದ್ದಂತೆ ರಾಜ್ಯಾದ್ಯಂತ ಏ.21ರಿಂದ ನೈಟ್ ಕಫೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಈಗ ಬುಧವಾರದಿಂದ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದು, ಬೀದರ ನಗರ ಸೇರಿ ಇಡೀ ಜಿಲ್ಲೆ ನಿಶಬ್ಧವಾಗಿದೆ. ಬುಧವಾರ ಬೆಳಗ್ಗೆ 6ರಿಂದ 10ರ ವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಬೆಳಗ್ಗೆಯೇ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಅಗತ್ಯ ವಸ್ತುಗಳನ್ನು ಖರೀದಿಸಿದರು.
ನಗರ, ಪಟ್ಟಣ ಪ್ರದೇಶಗಳಲ್ಲಿನ ದಿನಸಿ, ತರಕಾರಿ, ಮಾಂಸ ಖರೀದಿಗೆ ಮುಗಿಬಿದದ್ದು ಕಂಡುಬಂತು. ನಂತರ ಖಾಕಿ ಪಡೆ ರಸ್ತೆಗಿಳಿದು ವ್ಯಾಪಾರ ವಹಿವಾಟು ಬಂದ್ ಮಾಡಿಸಿತು. ಜನಸಂಚಾರ, ವಾಹನ ಸಂಚಾರ ಸ್ತಬ್ದಗೊಂಡಿದ್ದು, ನಗರ ಸೇರಿದಂತೆ ಜಿಲ್ಲಾದ್ಯಂತ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಹಾಗಾಗಿ ಗಾಂ ಧಿ ಗಂಜ್, ಮೋಹನ್ ಮಾರ್ಕೆಟ್, ಅಂಬೇಡ್ಕರ ವೃತ್ತ, ನಾಂದೇಡ್ ರಸ್ತೆ ಮತ್ತು ಓಲ್ಡ್ ಸಿಟಿ ಸೇರಿದಂತೆ ನಗರದ ಎಲ್ಲ ಮಾರುಕಟ್ಟೆ ಪ್ರದೇಶಗಳು ಬಿಕೋ ಎನ್ನುತ್ತಿವೆ. ಎಲ್ಲಾ ದೇವಸ್ಥಾನಗಳು, ಮಸೀದಿ, ಚರ್ಚ್ ಮತ್ತು ಇನ್ನಿತರ ಧಾರ್ಮಿಕ ಸ್ಥಳಗಳಿಗೆ ಬೀಗ ಹಾಕಲಾಗಿತ್ತು. ಸಾರಿಗೆ ಬಸ್ಗಳ ಕಾರ್ಯಾಚರಣೆಯನ್ನು ಸಹ ನಿಷೇಧ ಮಾಡಲಾಗಿದೆ. ಅನಗತ್ಯ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಲಾಠಿ ರುಚಿ, ಬಸ್ಕಿ ಹೊಡೆಸಿ ಬಿಸಿ ಮುಟ್ಟಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಆದರೆ, ಹಳ್ಳಿಗಳಲ್ಲಿ ಜನರ ಓಡಾಡುವಿಕೆ ಮಾತ್ರ ಇನ್ನೂ ನಿಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ