ನೊಂದ ರಂಗದಾಳೆ ಕುಟುಂಬಕ್ಕೆ ಜಿಲ್ಲಾಡಳಿತದಿಂದ ನೆರವು


Team Udayavani, Apr 30, 2020, 11:51 AM IST

30-April-09

ಬೀದರ: ವಿಜಯಕುಮಾರ ರಂಗದಾಳೆ ಅವರಿಗೆ ಜಿಲ್ಲಾಡಳಿತ ಪೂರೈಸಿದ ಔಷಧಗಳನ್ನು ವಿನಯ ಮಾಳಗೆ, ಮಹೇಶ ಗೋರನಾಳಕರ್‌ ವಿತರಿಸಿದರು.

ಬೀದರ: ಲಾಕ್‌ಡೌನ್‌ ಪರಿಣಾಮ ಇಬ್ಬರು ಬುದ್ದಿಮಾಂದ್ಯ ಹೆಣ್ಣು ಮಕ್ಕಳೊಂದಿಗೆ ಮನೆಯಲ್ಲೇ ಬಂಧಿಯಾಗಿ ಆಹಾರ ಮತ್ತು ಔಷಧ ಸಿಗದೇ ಸಂಕಷ್ಟ ಎದುರಿಸುತ್ತಿದ್ದ ಅನಾರೋಗ್ಯ ಪೀಡಿತ ತಂದೆ ವಿಜಯಕುಮಾರ ರಂಗದಾಳೆ ನೆರವಿಗೆ ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳು ನೆರವಿಗೆ ಧಾವಿಸಿವೆ. ಬುಧವಾರ ಆಹಾರ ಸಾಮಗ್ರಿ- ಔಷಧ ಕಿಟ್‌ಗಳನ್ನು ವಿತರಿಸಿ ಕಣ್ಣೀರು ಒರೆಸುವ ಪ್ರಯತ್ನ ಮಾಡಲಾಗಿದೆ.

ನಗರದ ಓಲ್ಡ್‌ ಸಿಟಿ ಚೊಂಡಿಗಲ್ಲಿಯ ವಿಜಯಕುಮಾರ ರಂಗದಾಳೆ ಕುಟುಂಬದ ಕಣ್ಣೀರಿನ ಕಥೆ ಕುರಿತು ಉದಯವಾಣಿಯಲ್ಲಿ ನೊಂದ ಅಸಹಾಯಕ ಕುಟುಂಬಕ್ಕೆ ಲಾಕ್‌ಡೌನ್‌ ಬರೆ ತಲೆಬರಹದಡಿ ಪ್ರಕಟಗೊಂಡಿದ್ದ ವಿಸ್ತ್ರತ ವರದಿಗೆ ಜಿಲ್ಲಾಡಳಿತ ಸೇರಿ ಸಂಘಟನೆ ಸದಸ್ಯರು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಜಿಲ್ಲಾಧಿಕಾರಿ ಮಹಾದೇವ ಅಭಯ: ಸೋಂಕಿತರು ವಾಸಿಸುವ ಕಂಟೈನ್ಮೆಂಟ್‌ ಝೋನ್‌ನಲ್ಲಿ ನೆಲೆಸಿರುವ ವಿಜಯಕುಮಾರಗೆ ಟೇಲರಿಂಗ್‌ ಕೆಲಸ ಇಲ್ಲದೇ ಆದಾಯ ಸಿಗದೇ ಸಂಕಷ್ಟದಲ್ಲಿದ್ದರು. ಇತ್ತೀಚೆಗೆ ಪತ್ನಿಯನ್ನೂ ಕಳೆದುಕೊಂಡಿರುವ ಅವರು ಇಬ್ಬರು ಬುದ್ದಿಮಾಂದ್ಯ ಮಕ್ಕಳಿಗೆ ತುತ್ತು ಅನ್ನ ಮತ್ತು ಔಷಧ ಖರೀದಿಸಲು ಸಾಧ್ಯವಾಗದೇ ತೀವ್ರ ಅಸಹಾಯಕ ಸ್ಥಿತಿಯಲ್ಲಿದ್ದರು. ಪತ್ರಿಕಾ ವರದಿ ಗಮನಿಸುತ್ತಿದ್ದಂತೆ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ತಿಂಗಳಿಗೆ ಸಾಕಾಗುವಷ್ಟು ಔಷಧ ಪೂರೈಸಿದ್ದಾರೆ. ಅಷ್ಟೇ ಅಲ್ಲ ವಿಜಯಕುಮಾರ ಅವರನ್ನು ಮೊಬೈಲ್‌ ಮೂಲಕ ಮಾತನಾಡಿ, ಮನೆಯಲ್ಲೇ ಸುರಕ್ಷಿತವಾಗಿ ಇರುವಂತೆ ಮತ್ತು ಅಗತ್ಯ ಔಷಧ- ಆಹಾರ ಸಾಮಗ್ರಿಗಳನ್ನು ವಿತರಿಸುವ ಭರವಸೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರ ನಾಗಮಾರಪಳ್ಳಿ ಫೌಂಡೇಶನ್‌ ಮೂಲಕ ಅಕ್ಕಿ, ಎಣ್ಣೆ, ಬೆಳೆ ಒಳಗೊಂಡ ಐದು ಕಿಟ್‌ ಗಳನ್ನು ಪೂರೈಸಿದರೆ, ವಿನಯ ಮಾಳಗೆ ಮತ್ತು ಮಹೇಶ ಗೋರನಾಳಕರ್‌ ನೇತೃತ್ವದ ಟೀಮ್‌ ಯುವಾ ತಂಡ ಸಹ ಆಹಾರದ ಕಿಟ್‌, ಮಾಸ್ಕ್ ಮತ್ತು ಸಾನಿಟೈಸರ್‌ಗಳನ್ನು ವಿತರಿಸಿದೆ. ನಾಟ್ಯ ಕಲಾವಿದೆ ಉಷಾ ಪ್ರಭಾಕರ ದಂಪತಿ ಆರ್ಥಿಕ ಸಹಾಯ ಮಾಡಲು ಮುಂದಾಗಿದ್ದಾರೆ.

ಧೈರ್ಯ ತುಂಬಿದ ದಂಪತಿ: ಕಿರಿಯ ಆರೋಗ್ಯ ಸಹಾಯಕಿ ಪಾರ್ವತಿ ಸೋನಾರೆ ಮತ್ತು ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ದಂಪತಿ ರಂಗದಾಳೆ ಅವರ ಮನೆಗೆ ಭೇಟಿ ನೀಡಿ ಔಷಧಗಳನ್ನು ಖರೀದಿ ವಿತರಿಸಿದ್ದಾರೆ. ಹಾಸಿಗೆ ಹಿಡಿದಿರುವ ಮಕ್ಕಳು, ತಂದೆಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಧೈರ್ಯ ತುಂಬಿದ್ದಾರೆ. ಇನ್ನೂ ಅನೇಕರು ವಿಜಯಕುಮಾರ ಅವರನ್ನು ಮೊಬೈಲ್‌ನಲ್ಲಿ ಸಂಪರ್ಕಿಸಿ ನೆರವು ನೀಡುವ ಭರವಸೆ ಕೊಟ್ಟಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.