Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ
Team Udayavani, May 23, 2024, 3:04 PM IST
ಬೀದರ್: ಪರಿಷತ್ ಚುನಾವಣಾ ಅಭ್ಯರ್ಥಿ ಅಮರನಾಥ ಪಾಟೀಲ ಪರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನವೂ ಸಿಗುವುದಿಲ್ಲ. ಸಿಎಂ ಮತ್ತು ಡಿಸಿಎಂ ಎಷ್ಟೇ ಜಿಗಿದಾಡಿ ಭಾಷಣ ಮಾಡಿದರೂ ಕರ್ನಾಟಕದಲ್ಲಿ ನಾಲ್ಕಕ್ಕಿಂತ ಹೆಚ್ಚು ಸ್ಥಾನ ಕಾಂಗ್ರೆಸ್ ಬರುವುದಿಲ್ಲ, 24 ಸ್ಥಾನ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಕರ್ಮಕಾಂಡ ಮತ್ತು ನಡೆದುಕೊಳ್ಳುವ ರೀತಿ ನೋಡಿದರೆ, ಈಗ ವಿಧಾನಸಭೆ ಚುನಾವಣೆ ಆದಲ್ಲಿ ಈಗಿರುವ 135 ಸ್ಥಾನಗಳಲ್ಲಿ 35 ಸ್ಥಾನವೂ ಬರುವುದಿಲ್ಲ ಎಂದು ಜೋಶಿ ಹೇಳಿದರು.
ಐದು ಗ್ಯಾರಂಟಿಗಳಲ್ಲಿ ಎರಡು ಯೋಜನೆಗಳು ಅವು ಸಹ ಅರ್ದಂಬರ್ಧ ನಡೆಯುತ್ತಿವೆ. ರಸ್ತೆ, ಕಟ್ಟಡ ನಿರ್ಮಾಣ ಕಾಮಗಾರಿ ಇಲ್ಲದಿರುವುದರಿಂದ ಕಾಂಗ್ರೆಸ್ ಶಾಸಕರು ಮತ್ತು ನಾಯಕರ ಕಮಿಷನ್ ಹೊಡೆಯುವುದು ಬಂದ್ ಆಗಿದೆ. ಹಾಗಾಗಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ದರ ದುಪ್ಪಟ್ಟು ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ, ಕೊಲೆಯಂತ ಹಿಂಸಾತ್ಮಕ ಕೃತ್ಯಗಳು ಹೆಚ್ಚಲು ಕಾರಣವಾಗಿದೆ ಎಂದು ಜೋಶಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ
ಐ ಮಿಸ್ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್ ಪುತ್ರನಿಂದ ಮತ್ತೊಂದು ಪೋಸ್ಟ್
Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ
Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್ಗಳ ಪಾತ್ರ
Yash ಟಾಕ್ಸಿಕ್ ಸಿನಿಮಾ 200 ದಿನಗಳ ಶೂಟಿಂಗ್; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.