ವಿಮೋಚನೆಗೆ ಬೀದರ ಕೊಡುಗೆ ಅಪಾರ

•ವಿವಿಧೆಡೆ ನಡೆಯುತ್ತಿದ್ದವು ಸ್ವಯಂ ರಕ್ಷಣಾ ತರಬೇತಿ•ಜಿಲ್ಲೆಯ ಹೋರಾಟಗಾರರ ಸ್ಮಾರಕ ನಿರ್ಮಾಣವಾಗಲಿ

Team Udayavani, Sep 17, 2019, 3:03 PM IST

Udayavani Kannada Newspaper

ಬೀದರ: ಹೈದ್ರಾಬಾದ-ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಜಿಲ್ಲೆಯ ಅದೇಷ್ಟೊ ಜನ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದಾರೆ. ಹೋರಾಟದಲ್ಲಿ ಧುಮುಕಿ ಹತ್ಯಾಕಾಂಡಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಬಸವಕಲ್ಯಾಣ ತಾಲೂಕಿನ ಗೋರ್ಟಾ(ಬಿ) ಗ್ರಾಮದಲ್ಲಿ ನಡೆದ ಹತ್ಯಾಕಾಂಡವನ್ನು ಈ ಭಾಗದ ಜಲಿಯಾನ್‌ವಲಾಬಾಗ ಎಂದೇ ಅಲ್ಲಿನ ಗ್ರಾಮಸ್ಥರು ಇಂದಿಗೂ ನೆನೆಪಿಸುತ್ತಾರೆ. ನಾವು ದೇಶದ ಮಹಾನ್‌ ನಾಯಕರನ್ನು, ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸುತ್ತೇವೆ. ಆದರೆ, ಹೈದ್ರಾಬಾದ ಕರ್ನಾಟಕ ಭಾಗದ ಹೋರಾಟ ಕುರಿತು ಈ ಭಾಗದ ಯುವಕರಿಗೆ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪರಿಪೂರ್ಣ ಮಾಹಿತಿಯ ಕೊರತೆ ಇಂದಿಗೂ ಇದೆ. ವಿಮೋಚನಾ ಚಳವಳಿ ಕುರಿತು ಯಾವುದೇ ಪಠ್ಯಪುಸ್ತಕದಲ್ಲಿ ಪೂರ್ಣ ಪ್ರಮಾಣದ ಇತಿಹಾಸ ಹೇಳುವ ಕೆಲಸ ಇಂದಿಗೂ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಲ್ಲಿನ ಅನೇಕ ಹೋರಾಟಗಾರರ ಇತಿಹಾಸ ಅವರ ಕುಟುಂಬಕ್ಕೆ ಮಾತ್ರ ಸಿಮಿತಗೊಂಡಿರುವುದು ವಿಪರ್ಯಾಸ.

ಹೋರಾಟದ ಸ್ವರೂಪ: ಹೈ.ಕ. ವಿಮೋಚನೆಗಾಗಿ ಜಿಲ್ಲೆಯ ಅನೇಕ ಮಠ, ಸಂಸ್ಥಾನ, ಶಿಕ್ಷಣ ಸಂಸ್ಥೆಗಳು ಕೂಡ ಶ್ರಮಿಸಿವೆ. ಹೋರಾಟದ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಹೋರಾಟದಲ್ಲಿ ಧುಮುಕುವ ಯುವಕರಿಗಾಗಿ ವಿವಿಧೆಡೆ ತರಬೇತಿ ಕೇಂದ್ರಗಳು ನಡೆಯುತ್ತಿದ್ದವು. ಆ ಸಂದರ್ಭದಲ್ಲಿ ಅಸ್ಥಿತ್ವಕ್ಕೆ ಬಂದ ಆರ್ಯ ಸಮಾಜ, ಗೋರ್ಟಾ ಹಿರೇಮಠ, ಭಾಲ್ಕಿ ಹಿರೇಮಠ, ಮಾಣಿಕನಗರದ ಮಾಣಿಕಪ್ರಭುಗಳ ಸಂಸ್ಥಾನ, ಚಿಟಗುಪ್ಪ ಭವಾನಿ ಮಂದಿರ ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಲ್ಲಿ ಗುಪ್ತವಾಗಿ ಸ್ವಯಂ ರಕ್ಷಣಾ ತರಬೇತಿಗಳು ನಡೆಯುತ್ತಿದವು.

ಸೋಲಿಲ್ಲದ ಸರದಾರ ಎಂದು ಗುರುತಿಸಿಕೊಂಡ ದಿ| ರಾಮಚಂದ್ರ ವೀರಪ್ಪ ಅವರು ಕೂಡ ಈ ಹೋರಾಟದಲ್ಲಿ ಮುಂದಾಳತ್ವ ವಹಿಸಿ ಜೈಲು ಶಿಕ್ಷೆ ಅನುಭವಿಸಿದರು. ಅವರ ನಿಧನದ ನಂತರ ಸರ್ಕಾರ ಅವರ ಸ್ಮಾರಕ ನಿರ್ಮಾಣ ಮಾಡುವ ಭರವಸೆ ನೀಡಿದ್ದು, ಇಂದಿಗೂ ಆ ಕಾರ್ಯ ನಡೆದಿಲ್ಲ. ಈ ಭಾಗದಲ್ಲಿ ಆರ್ಯ ಸಮಾಜದ ಶಾಖೆಗಳನ್ನು ಸ್ಥಾಪಿಸಿದ ಭಾಯಿ ಬನಸ್ಸಿಲಾಲ್ ಹೋರಾಟಕ್ಕೆ ಹೊಸ ಸ್ವರೂಪ ನೀಡಿದರು. ವಕೀಲರಾದ ಇವರು ಸರದಾರ ವಲ್ಲಭಾಯಿ ಪಟೇಲ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಇಲ್ಲಿನ ಕ್ರೌರ್ಯ, ನಿಜಾಮನ ದಬ್ಟಾಳಿಕೆ ಕುರಿತು ವಿವರಿಸಿದರು. ಈ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದು, ಇವರ ಕಾರ್ಯಕ್ಕೆ ಭಾಯಿ ಶಾಮಲಾಲ್ ಸಾಥ್‌ ನೀಡಿದರು. ಅಲ್ಲದೆ ಜಿಲ್ಲೆಯ ಅನೇಕ ಗ್ರಾಮಗಳಲ್ಲಿನ ಜನರು ಹೋರಾಟ ನಡೆಸಿದ್ದು, ಅವರ ಕಾರ್ಯಗಳನ್ನು ಗುರುತಿಸಿ, ಈ ಭಾಗದಲ್ಲಿ ವಿಶೇಷ ಸ್ಮಾರಕಗಳನ್ನು ನಿರ್ಮಿಸುವ ಕಾರ್ಯ ನಡೆಯಬೇಕಾಗಿದೆ ಎನ್ನುತ್ತಾರೆ ಹುತಾತ್ಮರ ಕುಟುಂಬದವರು.

ಆಪರೇಷನ್‌ ಪೋಲೊ: ಸ್ವತಂತ್ರ ಭಾರತದ ಒಕ್ಕೂಟ ಆಡಳಿತ ವ್ಯವಸ್ಥೆಗೆ ಸೇರದಿರಲು ನಿರ್ಧರಿಸಿದ ನಿಜಾಮನ ಸೈನ್ಯ ಈ ಭಾಗದಲ್ಲಿ ಹಿಂಸೆಗೆ ಮುಂದಾಗಿತ್ತು. ಇಲ್ಲಿನ ಕ್ರೌರ್ಯದ ಮಾಹಿತಿ ಪಡೆದುಕೊಂಡ ಅಂದಿನ ಗೃಹ ಮಂತ್ರಿ ಸರ್ದಾರ್‌ ವಲ್ಲಭಾಯಿ ಪಟೇಲರು 1948 ಸೆಪ್ಟೆಂಬರ್‌ 13ಕ್ಕೆ ‘ಆಪರೇಷನ್‌ ಪೋಲೊ’ ಎಂಬ ಹೆಸರಿನ ಕಾರ್ಯಾಚರಣೆ ಶುರು ಮಾಡಿದರು. ಸೊಲ್ಲಾಪೂರ, ಬೇಜವಾಡ ಮಾರ್ಗವಾಗಿ ಆರಂಭಗೊಂಡ ಕಾರ್ಯಚರಣೆ ಮೇಜರ್‌ ಜನರಲ್ ಜೆ.ಎನ್‌. ಚೌಧರಿ ಅವರ ನೇತೃತ್ವದಲ್ಲಿ ರಜಾಕಾರರ ಪಡೆಯ ವಿರುದ್ಧ ಹೋರಾಟ ನಡೆಯಿತು.

ಸತತ ಐದುದಿನಗಳ ಕಾಲ ಕಾರ್ಯಾಚರಣೆ ನಡೆದಿದ್ದು, ಸೆಪ್ಟೆಂಬರ್‌ 17ರ ಸಂಜೆ 5 ಗಂಟೆ ಸುಮಾರು ಹೈದ್ರಾಬಾದ್‌ ಸಂಸ್ಥಾನದ ಸೇನೆಯ ಮುಖ್ಯಸ್ಥ ಎಲ್.ಉದ್ರುಜ್‌ ಭಾರತೀಯ ಸೇನೆಗೆ ಶರಣಾದರು. ನಿಜಾಮನು ಹೈದ್ರಾಬಾದ ಕರ್ನಾಟಕವನ್ನು ಅಧಿಕೃತವಾಗಿ ಭಾರತದ ಒಕ್ಕೂಟ ವ್ಯವಸ್ಥೆಗೆ ಸೇರಿಸಿ ಅಂಗೀಕಾರ ಪತ್ರಕ್ಕೆ ಸಹಿ ಹಾಕಿದನು. ಆ ಮೂಲಕ ಹೈ.ಕ. ವಿಮೋಚನೆ ಹೊಂದಿ ಒಕ್ಕೂಟ ವ್ಯವಸ್ಥೆಗೆ ಸೇರ್ಪಡೆಯಾಗಿರುವುದು ಇತಿಹಾಸ.

 

•ದುರ್ಯೋಧನ ಹೂಗಾರ

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.