
ಸ್ಮಶಾನ ಭೂಮಿ ಕೊರತೆ : ಕದ್ದು ಮುಚ್ಚಿ ಸರ್ಕಾರ ಜಾಗದಲ್ಲಿ ಅಂತ್ಯಸಂಸ್ಕಾರ
Team Udayavani, Sep 17, 2022, 7:38 AM IST

ಬೀದರ್ : ಸ್ಮಶಾನ ಭೂಮಿ ಕೊರತೆ ಹಿನ್ನಲೆ ಮೃತ ವ್ಯಕ್ತಿಯ ಶವವನ್ನು ತಡ ರಾತ್ರಿಯವರೆಗೆ ಕಾದು ಸರ್ಕಾರಿ ಜಾಗವೊಂದರಲ್ಲಿ ಕದ್ದು ಮುಚ್ಚಿ ಶವ ಸಂಸ್ಕಾರ ಮಾಡಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಧನ್ನೂರ್ (ಎಚ್) ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಹೃದಯಾಘಾತದಿಂದ ಶುಕ್ರವಾರ ದಲಿತ ಸಮಾಜದ ಶಿವರಾಜ ಬಾಲಾಜಿ ವಾಘಮಾರೆ (೪೫) ಎಂಬುವರು ನಿಧನರಾಗಿದ್ದು, ಮೃತರಿಗೆ ಸ್ವಂತ ಜಮೀನಿಲ್ಲ. ಮತ್ತೊಂದೆಡೆ ಸಮಾಜದವರಿಗೆ ಸ್ಮಶಾನ ಭೂಮಿಯೂ ಇಲ್ಲ. ಹೀಗಾಗಿ ಮೃತನ ಅಂತ್ಯ ಕ್ರಿಯೆಗೆ ದೊಡ್ಡ ಸಮಸ್ಯೆಯಾಗಿತ್ತು. ಸಂಜೆವರೆಗೆ ಕಾದು ಗ್ರಾಮದ ಹೊರ ವಲಯಲ್ಲಿನ ಅರಣ್ಯ ಇಲಾಖೆಯ ಜಾಗದಲ್ಲಿ ಕದ್ದು ಮುಚ್ಚಿ ಸುಡಲಾಗಿದೆ.
ಗ್ರಾಮದಲ್ಲಿ ದಲಿತ ಸಮಾಜದವರು ಯಾರಾದರೂ ಮೃತಪಟ್ಟರೆ ಅವರವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡುತ್ತಾರೆ. ಜಮೀನು ಇಲ್ಲದವರಿಗೆ ಯಾರಾದರೂ ಮೃತರಾದರೆ, ಸತ್ತ ದು:ಖಕ್ಕಿಂತ ಮಣ್ಣು ಮಾಡುವ ಚಿಂತೆಯೇ ಹೆಚ್ಚಾಗುತ್ತಿದೆ. ಸತ್ತ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಘನತೆ, ಗೌರವದಿಂದ ಮಾಡಬೇಕಾದ ಸ್ಥಳದಲ್ಲಿ ಕದ್ದು, ಮುಚ್ಚಿ ಅಂತ್ಯ ಸಂಸ್ಕಾರ ಮಾಡಬೇಕಾದ ದುಸ್ಥಿತಿ ಎದುರಾಗಿದೆ ಎಂದು ‘ಉದಯವಾಣಿ’ ಗೆ ಗೋಳು ತೋಡಿಕೊಂಡಿದ್ದಾರೆ.
ಶ್ರೀದೇವಿ ಕುಂದನ್, ಸ್ಮಶಾನ ಭೂಮಿಗಾಗಿ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ದಲಿತರಿಗೆ ಸ್ಮಶಾನ ಭೂಮಿ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಉಕ್ರೇನ್ನಿಂದ ಬಂದ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗೆ ಪೋರ್ಟಲ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನಪದ ಪ್ರಪಂಚ ಪ್ರಶಸ್ತಿ ಪ್ರದಾನ; ಅಧಿಕಾರಕ್ಕೆ ಬಂದ ಕೂಡಲೇ ವಿಶೇಷ ಅನುದಾನ: ಸಿದ್ದರಾಮಯ್ಯ

360 ಡಿಗ್ರಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಕಾಂಗ್ರೆಸ್ ಮುಖಂಡರಿಗೆ ಟಾಸ್ಕ್

ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ : ಸಿದ್ದರಾಮಯ್ಯ

ಬೆಂಗಳೂರು ಏರೋ ಇಂಡಿಯಾ ಶೋ ; ಮಾಂಸ ಮಾರಾಟ ಬಂದ್

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
