ಕೃಷಿ ಸಾಲಕ್ಕೆ ಬಂಡವಾಳ ಕೊರತೆ

ಪ್ಯಾಕ್ಸ್‌ಗಳು ಸಾಮರ್ಥ್ಯ ಹೆಚ್ಚಿಸಿಕೊಳ್ಳಲಿಸಹಕಾರ ಸಂಘಗಳ ಅಭಿವೃದ್ಧಿಗೆ ಹೆಚ್ಚು ಒತ್ತು

Team Udayavani, Mar 13, 2020, 4:04 PM IST

13-March-22

ಬೀದರ: ಸಹಕಾರಿ ರಂಗವು ಕೃಷಿ ಕ್ಷೇತ್ರಕ್ಕೆ ಸಾಲ ನೀಡುವ ಪ್ರಧಾನ ಬ್ಯಾಂಕಿಂಗ್‌ ವ್ಯವಸ್ಥೆಯಾಗಿ ದಶಕಗಳಿಂದ ಮುಂಚೂಣಿಯಲ್ಲಿದೆ. ಆದರೂ ರೈತರ ಬೇಡಿಕೆಗೆ ಅನುಗುಣವಾಗಿ ಸಾಲ ನೀಡಲು ಬಂಡವಾಳದ ಕೊರತೆ ಎದುರಿಸುತ್ತಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಆಯ್ದ ಪ್ಯಾಕ್ಸ್‌ಗಳ ಅಧ್ಯಕ್ಷರಿಗಾಗಿ ಹಮ್ಮಿಕೊಂಡಿದ್ದ ಸಾಲ ನಿರ್ವಹಣೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಗಳು ಸಹಕಾರ ವ್ಯವಸ್ಥೆಯ ಮೂಲಕ ರೈತರಿಗೆ ಕಮ್ಮಿ ಬಡ್ಡಿ ದರದಲ್ಲಿ ಸಾಲ ನೀಡಲು ಸಹಾಯ ಮಾಡುತ್ತಿದ್ದು ನಬಾರ್ಡ್‌ನಿಂದ ಬಂಡವಾಳ ಹೊಂದಿಸುತ್ತಿದೆ. ಇದರಲ್ಲಿ ಗ್ರಾಮೀಣ ಮಟ್ಟದಲ್ಲಿ ಜನರೇ ನಡೆಸುವ ಸ್ಥಳೀಯವಾಗಿ ಅಸ್ತಿತ್ವದಲ್ಲಿರುವ ಕೆಪಿಪಿಎಸ್‌ ಮೂಲಕವೇ ವ್ಯವಹಾರ ನಡೆಯುತ್ತಿದೆ ಎಂದರು.

ಪಿಕೆಪಿಎಸ್‌ಗಳಿಗೆ ಸುಮಾರು ಶೇ. 2.5 ಬಡ್ಡಿ ದರದ ಲಾಭಾಂಶ ಸಿಗುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಮೇಲ್‌ಸ್ತರದ ಬ್ಯಾಂಕುಗಳು ಹೆಚ್ಚು ಬಡ್ಡಿದರ ವಿ ಧಿಸುವುದನ್ನು ತಡೆಯಲಾಗಿದೆ. ಸರ್ಕಾರ ನಬಾರ್ಡ್‌ ಮತ್ತು ಅಪೆಕ್ಸ್‌ ಬ್ಯಾಂಕ್‌ಗಳು ಹೆಚ್ಚೆಚ್ಚು ಕೃಷಿ ಸಾಲ ನೀಡುವ ನಿಟ್ಟಿನಲ್ಲಿ ಪ್ಯಾಕ್ಸ್‌ ಗಳು ತಮ್ಮ ಸ್ವಂತ ಬಂಡವಾಳ ಹೂಡುವಂತೆ ಯೋಜನೆಗಳನ್ನು ರೂಪಿಸುತ್ತಿವೆ. ಈ ನಿಟ್ಟಿನಲ್ಲಿ ಆಯ್ಕೆಯಾಗುವ ಪ್ಯಾಕ್ಸ್‌ಗಳು ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಬೇಕಾಗಿರುವ ಸಿದ್ಧತೆಗಳನ್ನು ಹೊಂದಬೇಕು. ಡಿಸಿಸಿ ಬ್ಯಾಂಕ್‌ ಅದಕ್ಕೆ ಬೇಕಾಗುವ ನೆರವು ನೀಡಲು ಸಿದ್ಧವಿದೆ ಊರಿನಲ್ಲಿರುವ ಎಲ್ಲ ರೈತರಿಗೂ ಸಾಲ ಸಿಗುವಂತಾಗಬೇಕು. ಬೇಡಿಕೆಯಷ್ಟು ಸಾಲ ವಿತರಿಸಬೇಕು. ಸಂಪನ್ಮೂಲಗಳ ಸದ್ಬಬಳಕೆಯಾಗಬೇಕು ಎಂದರು.

ಡಿಸಿಸಿ ಬ್ಯಾಂಕಿನಿಂದ ಜಿಲ್ಲೆಯ ಎಲ್ಲ ಪಿಕೆಪಿಎಸ್‌ ಗಳಿಗೆ ಕಂಪ್ಯೂಟರ್‌ಗಳನ್ನು ನೀಡಲಾಗುತ್ತಿದ್ದು ಬ್ಯಾಂಕಿನ ನುರಿತವರಿಂದ ಸಂಘಗಳ ಸಿಬ್ಬಂದಿಗೆ ಕಂಪ್ಯೂಟರ್‌ ತರಬೇತಿ ಕೂಡ  ಡಲಾಗುವುದು. ಸದಸ್ಯರ ಸಾಮರ್ಥ್ಯ ವೃದ್ಧಿಗೆ ಮತ್ತು ಸಂಘಗಳ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಿ ಶಕ್ತಿ ತುಂಬಲು ಡಿಸಿಸಿ ಬ್ಯಾಂಕ್‌ ಹಲವು ರೀತಿಯಲ್ಲಿ ಯತ್ನಿಸುತ್ತಿದೆ ಎಂದು ಹೇಳಿದರು.

ದೂರದೃಷ್ಟಿ, ಹೊಸ ಹೊಸ ಯೋಚನೆ, ಅಭಿವೃದ್ಧಿ ಪರ ಚಿಂತನೆಗಳಿರುವುದು ಸಂಸ್ಥೆಯ ಅಧ್ಯಕ್ಷರಿಗೆ ಅವಶ್ಯಕ. ತನಗೆ ಕಾನೂನುಬದ್ಧವಾಗಿ ಪ್ರದತ್ತವಾಗಿ ಬಂದ ಅಧಿಕಾರಗಳನ್ನು ಅರಿತು ಚಲಾಯಿಸುವುದು ಕೂಡ ಅವಶ್ಯಕ. ಆಡಳಿತದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಬ್ಯಾಂಕಿನಲ್ಲಿ ಮಾತ್ರವಲ್ಲ, ಎಲ್ಲ ಸಂಘಗಳಲ್ಲಿ ಕಂಪ್ಯೂಟರೀಕರಣ, ಪ್ರತಿ ತಿಂಗಳು ಆಯವ್ಯಯ ತಖ್ತೆಯನ್ನು ಕಂಪ್ಯೂಟಡೀಕರಣಗೊಳಿಸಲಾಗಿದೆ. ಪ್ರತಿ ಸಂಘಗಳನ್ನು ಆಧುನಿಕ ಬ್ಯಾಂಕಿಂಗ್‌ ವ್ಯವಸ್ಥೆಗೆ ಅನುಗುಣವಾಗಿ ಸನ್ನದುಗೊಳಿಸಲಾಗುತ್ತಿದ್ದು, ಸಂಘಗಳು ಕೇವಲ ಕೃಷಿ ಕ್ಷೇತ್ರವನ್ನಲ್ಲದೇ ಇತರ ವ್ಯಾಪಾರಾಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವತ್ತ ಗಮನ ಹರಿಸಬೇಕು. ಆ ಮೂಲಕ ಗ್ರಾಮದ ಸಮಾಜದ ಅಭಿವೃದ್ಧಿಗೆ ಕಾರಣವಾಗಬೇಕು ಎಂದು ಹೇಳಿದರು.

ಡಿಸಿಸಿ ಬ್ಯಾಂಕಿನ ಸಿಇಒ ಮಹಾಜನ ಮಲ್ಲಿಕಾರ್ಜುನ, ಪ್ರಧಾನ ವ್ಯವಸ್ಥಾಪಕ ಚನಬಸಯ್ಯ ಸ್ವಾಮಿ, ವಿಠಲ ರೆಡ್ಡಿ ಯಡಮಲ್ಲೆ, ಬಸವರಾಜ ಕಲ್ಯಾಣ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪಿಕೆಪಿಎಸ್‌ ಅಧ್ಯಕ್ಷರಾದ ಶಂಕರಾವ್‌ ಪಾಟೀಲ, ಅಶೋಕ ಜಿ., ಓಂಕಾರ ಬಿ. ಪಟನೆ, ವಿಜಯಕುಮಾರ, ಅನೀಲಕುಮಾರ ಕೋರಿ, ಸಂಗಮೇಶ ಎಂ., ಹಣಮಂತರಾವ್‌, ರವಿ ಪಾಟೀಲ, ಮಲ್ಲಿಕಾರ್ಜುನ ಇನ್ನಿತರರು ಇದ್ದರು. ಸಹಾರ್ದ ನಿರ್ದೇಶಕ ಸುಬ್ರಮಣ್ಯ ಪ್ರಭು ಸ್ವಾಗತಿಸಿದರು. ನಾಗಶೆಟ್ಟಿ, ತನ್ವೀರ ರಜಾ, ಅನೀಲ, ಮಹಾಲಿಂಗ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.