Bidar; ಶಂಭುಲಿಂಗ ಶ್ರೀಗೆ ಲೋಕಸಭಾ ಬಿಜೆಪಿ ಟಿಕೆಟ್ ಗಾಗಿ ಭಕ್ತರ ಆಗ್ರಹ
Team Udayavani, Dec 12, 2023, 3:46 PM IST
ಕಮಲನಗರ (ಬೀದರ): ಮುಂಬರುವ ಲೋಕಸಭಾ ಚುನಾವಣೆಗೆ ಬೀದರ ಕ್ಷೇತ್ರದಿಂದ ಡೋಣಗಾಂವ (ಎಂ) ಹಾವಗೀಸ್ವಾಮಿ ಮಠದ ಪೀಠಾಧಿಪತಿ ಡಾ. ಶಂಭುಲಿಂಗ ಶಿವಾಚಾರ್ಯರಿಗೆ ಬಿಜೆಪಿ ಪಕ್ಷ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ ಭಕ್ತ ಸಮೂಹವು, ಟಿಕೆಟ್ ಕೈ ತಪ್ಪಿದರೆ ಪಕ್ಷೇತರರಾಗಿ ಕಣಕ್ಕಿಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಇಲ್ಲಿಗೆ ಸಮೀಪದ ಮಹಾಳಪ್ಪಯ್ಯಾ ದೇವಸ್ಥಾನದಲ್ಲಿ ಮಂಗಳವಾರ ಮುಖಂಡರಾದ ಪ್ರಕಾಶ ದೇಸಾಯಿ, ವಿಜಯಕುಮಾರ ದೇಶಮುಖ ಮತ್ತು ಪ್ರವೀಣ ಹೊಂಡಾಳೆ ಅವರು ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಹಾವಗಿಸ್ವಾಮಿ ಮಠದ ವ್ಯಾಪ್ತಿಯಲ್ಲಿ ಸುಮಾರು 3.56 ಲಕ್ಷ ಭಕ್ತ ಸಮೂಹವಿದೆ. ಲೋಕ ಕಲ್ಯಾಣಕ್ಕಾಗಿ ಸದಾ ದುಡಿಯುತ್ತಿರುವ ಪೂಜ್ಯರಿಗೆ ಟಿಕೆಟ್ ನೀಡಿದರೆ ಭಾರಿ ಬಹುಮತದಿಂದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
ದೇಶದ ರಾಜಕಾರಣದಲ್ಲಿ ಸನ್ಯಾಸಿಗಳಿಂದಲೇ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ, ರಾಜಸ್ಥಾನದಲ್ಲಿ ಯೋಗಿ ಬಾಲಕನಾಥ್, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಪ್ರಧಾನಿ ನರೇಂದ್ರ ಮೋದಿ ಹೀಗೆ ಹಲವು ಸಂಸಾರ ತ್ಯಾಗಿಗಳಿಂದಲೇ ರಾಷ್ಟ್ರ ಪ್ರಗತಿಯಾಗಿದೆ. ಹಾಗಾಗಿ ಬೀದರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಟಿಕೆಟ್ಗಾಗಿ ಡಾ. ಶಂಭುಲಿಂಗ ಶಿವಾಚಾರ್ಯರರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಬೀದರ ಲೋಕಸಭೆಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲೂ ಡಾ. ಶಿವಾಚಾರ್ಯರಿಗೆ ಬೀದರ್ ಲೋಕಸಭೆ ಬಿಜೆಪಿ ಅಭ್ಯರ್ಥಿ ಮಾಡಬೇಕೆಂಬ ಸಾಮೂಹಿಕ ಕೂಗು ಎದ್ದಿದೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ವೇಳೆ ಬಿಜೆಪಿ ಪಕ್ಷ ಪೂಜ್ಯರಿಗೆ ಟಿಕೆಟ್ ನಿರಾಕರಿಸಿದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು ನಿಶ್ಚಿತ ಎಂದು ಹೇಳಿದ ಅವರು, ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಮೀಜಿ ಬೆಂಬಲ ಇರಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿವರಾಜ ನೀಲಂಗೆ, ಸುಭಾಷ ಪಾಟೀಲ, ಸಂಜುಕುಮಾರ ಮುಧಾಳೆ, ಪ್ರೇಮದಾಸ ಕಾಳಗಾಪೂರೆ, ಬಸವರಾಜ ಮುಧಾಳೆ, ಉಮಾಕಾಂತ ಪಾಟೀಲ, ನಾಗೇಶ ಪಾಟೀಲ, ಗಣೇಶ ಕಾರೆಗಾವೆ, ರವಿ ಚಿಂಚನಸೂರೆ, ಶೈಲೇಶ ದೇಶಮುಖ, ವಿಜಯಕುಮಾರ ದೇಶಮುಖ, ವಿಜಯಕುಮಾರ ದೇಸಾಯಿ, ಮಲ್ಲಿಕಾರ್ಜುನ ಗಂದಗೆ, ಮಹಾಂತೇಶ ದೇವರ್ಸೆ, ಶೇಷರಾವ ಪಾಟೀಲ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?