ಬೀದರ: ರಾಷ್ಟ್ರೀಯ ಜಾನಪದ ಸಮ್ಮೇಳನಕ್ಕೆ ತೆರೆ

ಹೃದಯವನ್ನು ನಿರ್ಲಿಪ್ತತೆಯಿಂದ ಇಡಲು ಜನಪದ ಸಹಕಾರಿಯಾಗಿದೆ

Team Udayavani, Jul 12, 2023, 6:45 PM IST

ಬೀದರ:ರಾಷ್ಟ್ರೀಯ ಜಾನಪದ ಸಮ್ಮೇಳನಕ್ಕೆ ತೆರೆ

ಬೀದರ: ಸಂಸ್ಕೃತಿ ಮಂತ್ರಾಲಯ ನವದೆಹಲಿ, ಕರ್ನಾಟಕ ಜಾನಪದ ಪರಿಷತ್ತು ಬೀದರ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರು ಆಶ್ರಯದಲ್ಲಿ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ಮೂರು ದಿನಗಳ “ರಾಷ್ಟ್ರೀಯ ಜನಪದ ಸಮ್ಮೇಳನ’ಕ್ಕೆ ತೆರೆ ಬಿದ್ದಿದೆ.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ|
ಬಿ.ಎಸ್‌. ಬಿರಾದಾರ, ಹಿಂದೆ ಯಾವುದೇ ವಿಶ್ವವಿದ್ಯಾಲಯಗಳಿರಲಿಲ್ಲ. ಆದರೂ ಅನಕ್ಷರಸ್ಥ ಹಿರಿಯರಿಂದ ಮೂಡಿ ಬಂದ ಶ್ರೀಮಂತ ಸಾಹಿತ್ಯವೇ ಜನಪದವಾಗಿದೆ. ಓದಲು ಬಾರದಿದ್ದರೂ ಜನಪದರು ಹೃದಯಕ್ಕೆ ತಟ್ಟುವ, ಮನಸ್ಸಿಗೆ ಮುಟ್ಟುವ ಸಾಹಿತ್ಯವನ್ನು ಈ ಲೋಕಕ್ಕೆ ನೀಡಿ ಹೋಗಿದ್ದಾರೆ ಎಂದು ಸ್ಮರಿಸಿದರು.

ಹಿಂದೆ ತಾಯಂದಿರು ತಾವು ಮಾಡುವ ಕೆಲಸದಲ್ಲಿ ದಣಿವು ಆಯಾಸ ಮರೆಯಲು ಸ್ವತಃ ತಾವೇ ಕಟ್ಟಿ ಹಾಡಿದ ಹಾಡುಗಳೇ ಜನಪದ ಹಾಡುಗಳಾಗಿ ಇಂದು ಲಭ್ಯವಾಗಿವೆ. ಈ ಜಾನಪದ ಹಾಡುಗಳಲ್ಲಿ ಪ್ರೀತಿ ನಂಬಿಕೆ ಪರಸ್ಪರ ಬಾಂಧವ್ಯ ಅಡಗಿದೆ. ಮನೆ ಹಸನಾಗಿರಲು ಮನಸ್ಸು ಹಸಿರಾಗಿರಬೇಕು. ತನ್ನ ಮನಸ್ಸಿನ ಸಮಾಧಾನದ ಜೊತೆಗೆ ಇತರರ ಹೃದಯವನ್ನು ನಿರ್ಲಿಪ್ತತೆಯಿಂದ ಇಡಲು ಜನಪದ ಸಹಕಾರಿಯಾಗಿದೆ ಎಂದರು.

ಶಾಹೀನ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಅಬ್ದುಲ್‌ ಖದೀರ್‌ ಮಾತನಾಡಿ, ನನಗೆ ಕನ್ನಡವೇ ಬರುತ್ತಿರಲಿಲ್ಲ. ಅಲ್ಪಸ್ವಲ್ಪ ಇಂದು
ಮಾತನಾಡುತ್ತಿದ್ದೇನೆ ಎಂದರೆ ಅದಕ್ಕೆ ಕಾರಣ ಡಾ| ಜಗನ್ನಾಥ ಹೆಬ್ಟಾಳೆ. ಮೂರು ದಿವಸಗಳ ಜಾನಪದ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ. ಗಡಿಭಾಗದಲ್ಲಿ ಜನಪದದ ಪಾಂಚಜನ್ಯ ಮೊಳಗಿಸುತ್ತಿರುವ ಡಾ| ಹೆಬ್ಟಾಳೆದ್ವಯರ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು. ಕರ್ನಾಟಕ ಸಾಹಿತ್ಯ ಸಂಘದ ಟ್ರಸ್ಟ್‌ ಅಧ್ಯಕ್ಷ ಶಂಕರರಾವ ಹೊನ್ನಾ, ನಿಜಲಿಂಗಪ್ಪ ತಗಾರೆ,
ಕೆ. ಸತ್ಯಮೂರ್ತಿ, ಶಂಭುಲಿಂಗ ವಾಲೊಡ್ಡಿ, ಬಸವರಾಜ ಮೂಲಗೆ, ಡಾ| ಜಗನ್ನಾಥ ಹೆಬ್ಬಾಳೆ, ಡಾ| ರಾಜಕುಮಾರ ಹೆಬ್ಬಾಳೆ, ಪ್ರೊ| ಎಸ್‌.ಬಿ. ಬಿರಾದಾರ ಇದ್ದರು.

ಸಾಂಸ್ಕೃತಿಕ ಕಾರ್ಯಕ್ರಮಗಳು: ಬೆಂಗಳೂರಿನ ಕಲಾವಿದರಾದ ಸಿ.ಎಂ. ನರಸಿಂಹಮೂರ್ತಿ, ಶಂಕರ ಭಾರತಿಪುರ, ದೇವಾನಂದ ವರಪ್ರಸಾದ, ಕೀಲಾರ ಕೃಷ್ಣೇಗೌಡ ಮತ್ತು ಸಂಗಡಿಗರು ಜಾನಪದ ಝೇಂಕಾರ ಕಾರ್ಯಕ್ರಮ ನಡೆಸಿಕೊಟ್ಟರು. ಕೋಲಾಟವನ್ನು ಸರಸ್ವತಿ ಹುಲಸೂರೆ ಸಂಗಡಿಗರು, ಚಕ್ರಿ ಭಜನೆಯನ್ನು ಮಲ್ಲಿಕಾರ್ಜುನ ಕಲಾತಂಡ, ಭಜನೆ ಹಾಡುಗಳನ್ನು ಅಕ್ಕಮಹಾದೇವಿ ಮಹಿಳಾ ತಂಡ, ಹಲಗೆ ಕುಣಿತವನ್ನು ಅಬ್ರಾಹಂ ಮತ್ತು ತಂಡದವರು ನಡೆಸಿಕೊಟ್ಟರು. ವೈಜಿನಾಥ ಪಾಟೀಲ ನಿರೂಪಿಸಿದರು. ಡಾ| ಬಿರಾದಾರ ರಾಜೇಂದ್ರ ಸ್ವಾಗತಿಸಿದರು. ಶ್ರೀಕಾಂತ ಸ್ವಾಮಿ ವಂದಿಸಿದರು.

ಪ್ರೊ| ಕಂಬಾರ ರಾಷ್ಟ್ರೀಯ ಪ್ರಶಸ್ತಿ ರಾಷ್ಟ್ರೀಯ ಜಾನಪದ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರೊ| ಚಂದ್ರಶೇಖರ ಕಂಬಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಲ್ಲಿಕಾರ್ಜುನ ಪಾಟೀಲ, ಡಾ| ದಯಾನಂದ ಕಾರಬಾರಿ, ಶಿವಾನಂದ ಗುಂದಗಿ, ಶಿವರಾಜ ಖೆಲೆ, ಸಂತೋಷ ಹಡಪದ, ಗಣಪತಿ ದೇಶಪಾಂಡೆ, ಕಮಳಮ್ಮ ಸಂತಪೂರೆ, ಮಹಾದೇವಿ ಅಷ್ಟೂರೆ, ವೀರಂತರೆಡ್ಡಿ ಜಂಪಾ, ಪಂಡಿತ ಬಾಳೂರೆ, ಗಂಗಮ್ಮ ಫುಲೆ, ದೇವೇಂದ್ರ ಭೂಪಾಳೆ, ಗುರುನಾಥ ಹಲಿಂಗೆ, ಹಾವಗಿರಾವ ಕಳಸೆ, ಡಾ| ಶಶಿಕಾಂತ ಪಾಟೀಲ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.