Bidar: ಹಾಸ್ಟೆಲ್‌ ಮಕ್ಕಳಿಗೆ ವಾಶಿಂಗ್‌ ಮಷಿನ್‌ ಭಾಗ್ಯ


Team Udayavani, Dec 8, 2023, 5:57 PM IST

Bidar: ಹಾಸ್ಟೆಲ್‌ ಮಕ್ಕಳಿಗೆ ವಾಶಿಂಗ್‌ ಮಷಿನ್‌ ಭಾಗ್ಯ

ಬೀದರ: ಸರ್ಕಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಟ್ಟೆ ತೊಳೆಯುವುದು ಕಷ್ಟದ ಕೆಲಸ. ಜತೆಗೆ ವಿದ್ಯಾಭ್ಯಾಸಕ್ಕೆ ಸಮಯದ ವ್ಯರ್ಥ ಸಹ. ಇದನ್ನು ಮನಗಂಡು ಶಾಲಾ ಶಿಕ್ಷಕ ಬಾಂಧವರು ದಾನಿಗಳ ನೆರವಿನಿಂದ ವಾಶಿಂಗ್‌ ಮಶೀನ್‌ (ಬಟ್ಟೆ ಒಗೆಯುವ ಯಂತ್ರ)ಗಳ ಸೌಲಭ್ಯ ಕಲ್ಪಿಸಿ ಅನುಕೂಲ ಮಾಡಿಕೊಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬೀದರ ತಾಲೂಕಿನ ಘೋಡಂಪಳ್ಳಿಯ ಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಮಕ್ಕಳಿಗಾಗಿ ವಿಶೇಷ ಸೌಲತ್ತು ಒದಗಿಸಿ ಶಿಕ್ಷಕರು ಮತ್ತು ಮೇಲ್ವಿಚಾರಕರು ಸೈ ಎನಿಸಿದ್ದಾರೆ. ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ನೂರು ಪ್ರತಿಶತ ಫಲಿತಾಂಶದೊಂದಿಗೆ ಗಮನಾರ್ಹ ಸಾಧನೆ ಮಾಡುವ ಈ ವಸತಿ ಶಾಲೆ ಈಗ ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ಇಂಥದ್ದೊಂದು ವ್ಯವಸ್ಥೆ ಹೊಂದಿದ ರಾಜ್ಯದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿದೆ.

ವಸತಿ ಶಾಲೆಗಳು ಎಂದಾಕ್ಷಣ ಮೂಲಸೌಕರ್ಯಗಳ ಕೊರತೆ ದೂರುಗಳೇ ಹೆಚ್ಚು. ನೀರು, ಸ್ವತ್ಛತೆ ಹೀಗೆ ಒಂದಿಲ್ಲೊಂದು ಸಮಸ್ಯೆಗಳು ಸಾಮಾನ್ಯ. ಅದರೊಟ್ಟಿಗೆ ತಮ್ಮ ಬಟ್ಟೆಗಳನ್ನು ಶುಚಿಗೊಳಿಸಿಕೊಳ್ಳುವುದು ವಿದ್ಯಾರ್ಥಿಗಳಿಗೆ ಹರಸಾಹಸವೇ ಸರಿ.
ಅದರಲ್ಲೂ ಗಂಡು ಮಕ್ಕಳಿಗೆ ದೊಡ್ಡ ಹಿಂಸೆ. ವಾರದ ರಜೆ ಬಂದರೆ ಸಾಕು ಬಟ್ಟೆಗಳನ್ನು ತೊಳೆಯುವುದರಲ್ಲೇ ಅವರು ಸಮಯ ಕಳೆಯುತ್ತಾರೆ. ಕೆಲ ಮಕ್ಕಳು ಸಮೀಪದ ಊರಿನವರಾಗಿದ್ದರೆ ಮನೆಗೆ ಕಳುಹಿಸುತ್ತಾರೆ. ಇದರಿಂದ ಓದಲು ಸಮಯ ವ್ಯರ್ಥವಾಗಿ ವಿದ್ಯಾರ್ಥಿಗಳ ಕಲಿಕೆ ಮೇಲೂ ಪರಿಣಾಮ ಬೀಳುತ್ತಿದೆ.

ಮಕ್ಕಳ ಈ ಪಡಿಪಾಟಲು ಗಮನಿಸಿದ ವಸತಿ ಶಾಲೆಯ ಪ್ರಾಚಾರ್ಯರು ಮತ್ತು ಮೇಲ್ವಿಚಾರಕರು ಬಟ್ಟೆ ಒಗೆಯುವ ಕಷ್ಟದಿಂದ ಮುಕ್ತಿ ದೊರಕಿಸಿ ನಿರಾಳರನ್ನಾಗಿಸಿದ್ದಾರೆ. ಒಂದು ವರ್ಷದ ಹಿಂದೆ ದಾನಿಗಳು-ಶಿಕ್ಷಕರ ನೆರವಿನಿಂದಲೇ 9 ವಾಶಿಂಗ್‌ ಮಶೀನ್‌ಗಳನ್ನು ಖರೀದಿಸಿ ಬಟ್ಟೆ ಶುಚಿಗಾಗಿ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಒಟ್ಟು 550 ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ಓದುತ್ತಿದ್ದು, ಈಗ ಅವರೆಲ್ಲರೂ ಪ್ರತಿ ದಿನ ಕೋಣೆಗಳ ಪಾಳಿಯಂತೆ ಯಂತ್ರದ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ.

ಗುಣಮಟ್ಟದ ಐಎಫ್‌ಬಿ ಕಂಪನಿಯ ವಾಶಿಂಗ್‌ ಮಶೀನ್‌ಗಳನ್ನು ನೇರವಾಗಿ ಡೀಲರ್‌ಗಳ ಮೂಲಕ ಖರೀದಿ ಮಾಡಲಾಗಿದೆ. ಪ್ರತಿ ಯಂತ್ರಕ್ಕೆ 33 ಸಾವಿರ ರೂ.ಗಳಂತೆ 2.97 ಲಕ್ಷ ರೂ. ರೂ. ವೆಚ್ಚದಲ್ಲಿ ಖರೀದಿಸಲಾಗಿದೆ. ಯಂತ್ರಗಳಿಗೆ ನೀರು ಮತ್ತು ವಿದ್ಯುತ್‌ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಿ ವಿದ್ಯಾರ್ಥಿಗಳಿಗೆ ಬಟ್ಟೆ ಒಗೆದುಕೊಳ್ಳಲು ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ದಶಕದ ಹಿಂದೆ ರಾಜ್ಯದಲ್ಲೇ ಮೊದಲು ತರಗತಿಗಳು ಮತ್ತು ಕಚೇರಿಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ
ಕಲಿಕೆ ಮೇಲೆ ಕಣ್ಗಾವಲು ಮಾಡಿಕೊಂಡಿದ್ದ ಸರ್ಕಾರಿ ವಸತಿ ಶಾಲೆಯಲ್ಲಿ ಈಗ ವಿದ್ಯಾರ್ಥಿಗಳ ಮೇಲಿನ ಕೆಲಸದ ಹೊರೆ ತಪ್ಪಿಸಿ ಅಭ್ಯಾಸಕ್ಕೆ ಸಹಕಾರಿಯಾಗಿ ಹೊಸ ಪ್ರಯೋಗ ಮಾಡಿರುವುದು ವಿಶೇಷ. ಇತರೆ ವಸತಿ ಶಾಲೆಗಳು ಈ ರೀತಿಯ ವ್ಯವಸ್ಥೆ ಕಲ್ಪಿಸಲು
ಮುಂದಾಗಲಿ. ಅದಕ್ಕೆ ಸಾರ್ವಜನಿಕ ದಾನಿಗಳು ಕೈಜೋಡಿಸಲಿ.

ವಿದ್ಯಾರ್ಥಿಗಳಿಗೆ ಓದಲು ಸಮಯ ವ್ಯರ್ಥ ಆಗುವುದನ್ನು ತಪ್ಪಿಸಲು ಘೋಡಂಪಳ್ಳಿ ಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲಾ-ಕಾಲೇಜಿನಲ್ಲಿ ಒಟ್ಟು 9 ವಾಶಿಂಗ್‌ ಮಶೀನ್‌ಗಳನ್ನು ಖರೀದಿಸಲಾಗಿದೆ. ದಾನಿಗಳು, ಶಿಕ್ಷಕರ ಸಹಾಯದಿಂದ ಈ ವ್ಯವಸ್ಥೆ ಮಾಡಲು
ಸಾಧ್ಯವಾಗಿದ್ದು, ಒಟ್ಟು 3 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಶಾಲೆಯ 550 ಮಕ್ಕಳು ಕಳೆದ ಒಂದು ವರ್ಷದಿಂದ ಈ ಯಂತ್ರಗಳ
ಉಪಯೋಗ ಪಡೆದುಕೊಳ್ಳುತ್ತಿದ್ದಾರೆ.
ಶರಣಪ್ಪ ಬಿರಾದಾರ, ಪ್ರಾಚಾರ್ಯರು.

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.