Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ
Team Udayavani, Apr 13, 2024, 2:28 PM IST
ಕಮಲನಗರ (ಬೀದರ್): ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಸಾಕಷ್ಟು ಗಿಡಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ.
ಅಲ್ಲದೇ ತಾಲ್ಲೂಕಿನಾದ್ಯಂತ ವಿದ್ಯುತ್ ಕಂಬಗಳು ಉರುಳಿ ಬಿದ್ದಿರುವುದರಿಂದ ರಾತ್ರಿ ಇಡಿ ವಿದ್ಯುತ್ ಕಡಿತಗೊಂಡು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಹಾರಿದ ಮನೆ ಮೇಲ್ಚಾವಣಿ: ಸುಮಾರು ಎರಡು ಗಂಟೆಗಳ ಕಾಲ ಜೋರಾಗಿ ಬೀಸಿದ ಗಾಳಿಯ ಹೊಡೆತಕ್ಕೆ ಹಲವಾರು ಮನೆಗಳ ಮೇಲಿನ ಹಂಚುಗಳು ಹಾರಿ ಹೋಗಿ ಸಾರ್ವಜನಿಕರ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದೆ.
ನೆಲಕ್ಕುರುಳಿದ ಮರಗಳು: ಜೋರಾಗಿ ಬೀಸಿದ ಗಾಳಿಗೆ ಹಲವು ಗ್ರಾಮಗಳಲ್ಲಿ ಗಿಡಮರಗಳು ನೆಲಕ್ಕುರುಳಿವೆ. ಅಲ್ಲದೇ ಖತಗಾಂವ್- ಹಕ್ಯಾಳ ಮಧ್ಯದ ರಸ್ತೆಯ ಮೇಲೆ ಮರವೊಂದು ಉರುಳಿ ಬಿದ್ದಿರುವುದರಿಂದ ಸಂಚಾರ ಸ್ಥಗಿತಗೊಂಡಿತ್ತು. ಖತಗಾಂವ್ – ಮದನೂರ್, ಕಮಲನಗರ್ – ಮದನೂರ್ ಮಧ್ಯದ ರಸ್ತೆಯಲ್ಲಿ ಕೂಡಾ ಮರಗಳು ಬಿದ್ದು ಸಂಚಾರ ಸ್ಥಗಿತಗೊಂಡಿತ್ತು.
ನೆಲಕ್ಕುರುಳಿದ ಮಾವು: ಭಾರಿ ಬಿರುಗಾಳಿಗೆ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಬಿರುಗಾಳಿಯೊಂದಿಗೆ ಮಳೆಯೂ ಸುರಿದಿದ್ದರಿಂದ ಮಿಡಿಕಾಯಿಗಳು ನೆಲಕ್ಕುರುಳಿವೆ. ಬಹುತೇಕ ಗಿಡಗಳ ಕೆಳಗೆ ಮಾವಿನ ಮಿಡಿ ಕಾಯಿಗಳ ರಾಶಿ ಸಂಗ್ರಹವಾಗಿರುವುದು ಕಂಡು ಬಂದಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು, ಮಾವು ಬೆಳೆಗಾರರು ಒಂದೆ ದಿನದಲ್ಲಿ ಬೆಳೆ ಕಳೆದುಕೊಳ್ಳುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ