ಅಧಿಕಾರಿಗಳ ನಿರ್ಲಕ್ಷ್ಯ: ನಶಿಸುತ್ತಿದೆ ಪುರಾತನ ಜಲಸಂಗ್ವಿ ಕಲ್ಮೇಶ್ವರ ದೇವಾಲಯ


Team Udayavani, Sep 29, 2021, 1:58 PM IST

bidar  Kalmeshwara Temple

ಹುಮನಾಬಾದ: ಅಧಿಕಾರಿಗಳ ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಜಲಸಂಗ್ವಿ ಗ್ರಾಮದ ಇತಿಹಾಸ ಸಾರುವ ಐತಿಹಾಸಿಕ ದೇವಾಲಯ ಇಂದಿಗೂ ಬೆಳಕಿಗೆ ಬಾರದೆ ನಶಿಸುತ್ತಿದೆ.

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಜಲಸಂಗ್ವಿ ಗ್ರಾಮದಲ್ಲಿರುವ ಪುರಾತನ ಕಲ್ಮೇಶ್ವರ ದೇವಾಲಯ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಇಂದು ಅನಾಥವಾಗಿ ಜನರಿಂದ ದೂರವಾಗುವ ಸ್ಥಿತಿಗೆ ಬಂದಿದೆ.  900ಕ್ಕೂ ಅಧಿಕ ವರ್ಷಗಳ ಹಿಂದೆ ಕಲ್ಯಾಣ ಚಾಲುಕ್ಯರ ಅರಸ 6ನೇ ವಿಕ್ರಮಾಧಿತ್ಯನು ಈ ದೇವಾಲಯ ನಿರ್ಮಾಣ ಮಾಡಿದ್ದಾರೆಂದು ಪ್ರವಾಸ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ರಾಮಾಯಣದ ಪಾಂಡವ ಸಹೋದರರು ತಮ್ಮ ವನವಾಸದ ಸಮಯದಲ್ಲಿ ಇಲ್ಲಿ ಸಮಯ ಕಳೆದರು ಎಂದು ನಂಬಲಾಗಿದೆ.

ಈ ದೇವಸ್ಥಾನದ ಶಿಲ್ಪಕಲೆಗಳು ನೋಡುಗರನ್ನು ಸೆಳೆಯುತ್ತವೆ. ದೇವಾಲಯದ ಗೋಡೆಗಳಲ್ಲಿ ಹಲವಾರು ನೃತ್ಯ ಭಂಗಿಗಳಲ್ಲಿ ‘ಶಿಲಾಬಾಲಿಕೆಯರ’ ಹಾಗೂ ಸ್ತ್ರೀ ನರ್ತಕಿಯರ ಕೆತ್ತನೆಗಳು ಇಂದಿಗೂ ಕೂಡ ಜನರ ಆಕರ್ಷಣೆಯಾಗಿವೆ. ಚಿತ್ರಕಲಾ ಪ್ರೇಮಿಗಳು ಆಗಾಗ ಇಲ್ಲಿ ಭೇಟಿ ನೀಡಿ ಚಿತ್ರ ಬಿಡಿಸುತ್ತಿರುತ್ತಾರೆ. ಜಲಸಂಗ್ವಿಯ ಶಿಲ್ಪಗಳು ಬೇಲೂರು ಮತ್ತು ಹಳೇಬೀಡು ದೇವಾಲಯಗಳಲ್ಲಿನ ಶಿಲ್ಪಕಲೆಗಳಿಗೆ ಪ್ರೇರಣೆ ನೀಡುವಂತಿವೆ ಎಂದು ಇಲ್ಲಿನ ಜನರು ಹೇಳುತ್ತಾರೆ.

ಇದನ್ನೂ ಓದಿ:ತಾಲಿಬಾನ್ ಸಂಸ್ಕೃತಿ ಕಾಂಗ್ರೆಸ್ ನವರದ್ದು: ಮಹೇಶ್ ಟೆಂಗಿನಕಾಯಿ ಕಿಡಿ

ದೇವಸ್ಥಾನದ ಗೋಡೆಯಲ್ಲಿ ನಾಟ್ಯ ಗಣಪತಿ, ವೀರಭದ್ರ ದಕ್ಷಿಣಾಮೂರ್ತಿ, ದುರ್ಗಾ, ವರಾಹ, ದರ್ಪಣ ಸುಂದರೀ, ಕಾವ್ಯ ಕಣ್ಣಿಕೆ, ಶಾಸನ ಸುಂದರಿಯ ಮೂರ್ತಿಗಳು ಈ ದೇವಾಲಯದ ಸುತ್ತಲು ಕೆತ್ತಲಾಗಿದ್ದು ದೇವಾಲಯದ  ಗತವೈಭವದ ಇತಿಹಾಸವನ್ನು ಇವು ಸಾರಿ ಹೇಳುತ್ತವೆ.

ಈ ದೇವಾಲಯ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿದ್ದರೂ ಇದರ ಜಿರ್ಣೋದ್ಧಾರ ಕಾರ್ಯ ಮಾತ್ರ ಇಲ್ಲಿಯವರೆಗೂ ನಡೆದಿಲ್ಲ. ಅನೇಕ ಬಾರಿ ಭೇಟಿ ನೀಡಿದ ಉನ್ನತ ಅಧಿಕಾರಿಗಳು,  ರಾಜಕಾರಣಿಗಳು  ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿರುವ ಮೂಲಕ ಪ್ರಸಿದ್ಧ ಪ್ರವಾಸಿ ತಾಣವಾಗಿ ಮಾಡುವ ಭರವಸೆಗಳು ಇಂದಿಗೂ ಈಡೇರಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇಂತಹ ಐತಿಹಾಸಿಕ ದೇವಾಲಯ ಇದೀಗ ಪುಂಡ ಪೋಕರಿಗಳ ಅಡ್ಡವಾಗಿ ಪರಿವರ್ತನೆಯಾಗುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದು, ಸರ್ಕಾರ ಇಂತಹ ದೇವಸ್ಥಾನಗಳಿಗೆ ಸೂಕ್ತ ರಕ್ಷಣೆ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಬೀದರ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಬೇಬಿ ಪ್ರತಿಕ್ರಿಯೆ ನೀಡಿದ್ದು, ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಸುತ್ತುಗೋಡೆ ನಿರ್ಮಿಸುವ ಕೆಲಸ ನಡೆಯಲಿದೆ. ಪ್ರವಾಸಿಗರು ಇಲ್ಲಿಗೆ ಬಂದಾಗ ಅವರಿಗೆ ಮೂಲಸೌಕರ್ಯಗಳು ಒದಗಿಸುವ ನಿಟ್ಟಿನಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇತರೆ ಮೂಲಸೌಲಭ್ಯಗಳು ಒದಗಿಸುವುದಾಗಿ ಹೇಳಿದ್ದಾರೆ. ಬೆಳಕಿಗೆ ಬಾರದ ದೇವಸ್ಥಾನ ಇದಾಗಿದ್ದು ಬೆಳಕಿಗೆ ತರುವ ಕಾರ್ಯ ಇಲಾಖೆ ಮಾಡಲಿದೆ ಎಂದು ತಿಳಿಸಿದ್ದಾರೆ.

ವರದಿ: ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.