Bidar; ಸುಳ್ಳು ಮಾಹಿತಿ ನೀಡಿ ದುರ್ನಡತೆ: ಇಬ್ಬರು ಪೊಲೀಸ್ ಸಿಬಂದಿ ಅಮಾನತು
Team Udayavani, Mar 1, 2024, 8:47 PM IST
ಬೀದರ್ : ಪೇದೆ ಹುದ್ದೆಗಳ ಭರ್ತಿಗಾಗಿ ದೇಹ ದಾರ್ಡ್ಯತೆ ಪರೀಕ್ಷೆ ವೇಳೆ ಹಿರಿಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ದುರ್ನಡೆತೆ ತೋರಿದ ಹಿನ್ನಲೆ ಪೊಲೀಸ್ ಇಲಾಖೆಯ ಇಬ್ಬರು ಸಿಬಂದಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ಚನ್ನಬಸವಣ್ಣ ಲಂಗೋಟಿ ತಿಳಿಸಿದ್ದಾರೆ.
ಡಿಎಆರ್ ಎಪಿಸಿ ಐವಾನ್ ಮತ್ತು ಜನವಾಡಾ ಠಾಣೆಯ ಸಿಪಿಸಿ ಶಫಿಕ್ ಅಮಾನತ್ತುಗೊಂಡ ಸಿಬ್ಬಂದಿಗಳು. ಪೊಲೀಸ್ ಪೇದೆ ಭರ್ತಿಗಾಗಿ ಶುಕ್ರವಾರ ನಗರದ ಕವಾಯಿತು ಮೈದಾನದಲ್ಲಿ ದೇಹ ದ್ರಾಡ್ಯತೆ ಮತ್ತು ದೇಹ ಸಹಿಷ್ಣುತೆ (ಪಿಎಸ್ಟಿ-ಪಿಇಟಿ) ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಅಭ್ಯರ್ಥಿಯಾಗಿದ್ದ ಐವಾನ್ 1600 ಮೀ. ಓಟವನ್ನು 6.30 ನಿಮಿಷದಲ್ಲಿ ಪೂರ್ಣಗೊಳಿಸಬೇಕಾಗಿತ್ತು. ಇವರ ಓಟದ ಸಮಯ ನಿರೀಕ್ಷೆಗಾಗಿ ಸಿಪಿಸಿ ಶಫಿಕ್ ಅವರನ್ನು ನೇಮಿಸಲಾಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿ ಐವಾನ್ ಓಟದ ವಿಷಯದಲ್ಲಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ದುರ್ನಡತೆ ತೋರಿದ್ದು, ಇತರ ಓಟದ ಸಮಯ ನಿರೀಕ್ಷೆಗಾಗಿ ನಿಗದಿಪಡಿಸಿದ್ದ ಶಫಿಕ್ ಅವರು ಸಹ ಐವಾನ್ ಅವರು ಓಟ್ ಪೂರ್ಣಗೊಳಿಸಿದ್ದಾರೆಂದು ಸುಳ್ಳು ಮಾಹಿತಿ ನೀಡಿ ಕರ್ತವ್ಯ ನಿರ್ವಹಣೆಯಲ್ಲಿ ಬೇಜಬ್ದಾರಿತನ ತೋರಿದ್ದಾರೆ. ಈ ಕುರಿತು ಡಿಎಆರ್ ಡಿಎಸ್ಪಿ ವರದಿ, ಸಿಸಿಟಿವಿ ಮತ್ತು ವಿಡಿಯೋ ರಿಕಾರ್ಡಿಂಗ್ ಪರಿಶೀಲಿಸಿದಾಗ ಸಿಬಂದಿಗಳ ದುರ್ನಡತೆ ಬಯಲಾಗಿದ್ದು, ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ