ರೈತರಲ್ಲಿ ಮಂದಹಾಸ ತಂದ ಮುಂಗಾರು
Team Udayavani, Jun 11, 2020, 12:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಸದಾ ಪ್ರಕೃತಿ ವಿಕೋಪದಿಂದ ನಲುಗಿ ಹೋಗುತ್ತಿರುವ ಗಡಿನಾಡು ಬೀದರನಲ್ಲಿ ಮುಂಗಾರು ಮಳೆ ಆಗಮನ ನೊಂದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲಾದ್ಯಂತ ಬುಧವಾರ ಉತ್ತಮ ಮಳೆ ಸುರಿದಿದ್ದು, ರೈತರನ್ನು ಕೃಷಿ ಚಟುವಟಿಕೆಗೆ ಅಣಿಗೊಳಿಸುವಂತೆ ಮಾಡಿದೆ.
ಮುಂಗಾರು ಪೂರ್ವ ಮಳೆ ಕೊರತೆ ಎದುರಿಸಿದ್ದ ಜಿಲ್ಲೆಯಲ್ಲಿ ಎರಡು ದಿನ ತಡವಾದರೂ ಬುಧವಾರ ಉತ್ತಮವಾಗಿ ಮುಂಗಾರು ಮಳೆ ಸುರಿದಿದೆ. ಬೀದರ ನಗರ ಸೇರಿದಂತೆ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಮಧ್ಯಾಹ್ನದ ವೇಳೆ ಗುಡುಗು, ಗಾಳಿ ಆರ್ಭಟದೊಂದಿಗೆ ವರ್ಷಧಾರೆ ಆಗಿದ್ದು, ಅನ್ನದಾತರು ನಿಟ್ಟಿಸಿರು ಬಿಡುವಂತಾಗಿದೆ.
ಮುಂಗಾರು ಮಾರುತ ಪ್ರವೇಶಿಸಿದ್ದರೆ, ಇನ್ನೊಂದೆಡೆ ರೈತರು ಈಗಾಗಲೇ ಮುಂಗಾರು ಬಿತ್ತನೆಗೆ ಹೊಲ ಸಜ್ಜುಗೊಳಿಸಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ. ಹೀಗೆ ಇನ್ನೆರಡು ದಿನ ಮಳೆ ಸುರಿದು ಕೊಂಚ ಬಿಡುವು ನೀಡಿದರೆ ಬಿತ್ತನೆ ಚಟುವಟಿಕೆ ಶುರು ಮಾಡಿಕೊಳ್ಳಬಹುದು.
ಇನ್ನು ಭಾರೀ ಮಳೆಗೆ ನಗರದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದವು. ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ಕೆಲ ಕಾಲ ಕಿರಿಕಿರಿ ಅನುಭವಿಸುವಂತಾಯಿತು. ಇಲ್ಲಿನ ಹರಳಯ್ಯ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ ಸೇರಿ ಇನ್ನಿತರ ಕಡೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಯಿತು. ಚರಂಡಿಗಳಲ್ಲಿ ಹೂಳು ತುಂಬಿದ್ದರಿಂದ ಚರಂಡಿ ನೀರು ರಸ್ತೆಯಲ್ಲೇ ಹರಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ