ಭಾಲ್ಕಿ: ಸಾಲಬಾಧೆ ತಾಳಲಾರದೇ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ
Team Udayavani, Jan 13, 2023, 2:53 PM IST
ಸಾಂದರ್ಭಿಕ ಚಿತ್ರ
ಭಾಲ್ಕಿ: ಸಾಲಬಾಧೆ ತಾಳಲಾರದೇ ವ್ಯಕ್ತಿಯೊಬ್ಬರು ತಮ್ಮ ಇಬ್ಬರು ಗಂಡು ಮಕ್ಕಳ ಜೊತೆ ತಮ್ಮ ಸ್ವಂತ ಹೊಲದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ (ಜ.11) ರಾತ್ರಿ ನಡೆದಿದೆ.
ತಾಲೂಕಿನ ಲಂಜವಾಡ ಗ್ರಾಮದ ವಿಕ್ರಂ ಜಾಲಿಂದರ್ ಬಿರಾದಾರ್ (36) ಮೃತ ರೈತ ಹಾಗೂ ಮಕ್ಕಳಾದ ಸಂಗಮೇಶ ವಿಕ್ರಂ (6), ಸುದರ್ಶನ್ ವಿಕ್ರಂ (8) ಮೃತರು.
ರೈತ ವಿಕ್ರಂಗೆ ಲಕ್ಕನಗಾವ್ ಎಸ್.ಬಿ.ಐ ಬ್ಯಾಂಕಿನಲ್ಲಿ 50,000/- ರೂ. ಸೇರಿದಂತೆ ಖಾಸಗಿಯಾಗಿ 6 ಲಕ್ಷ ರೂ ಸಾಲವಿತ್ತು. ಸುಮಾರು ಎರಡು ವರ್ಷಗಳಿಂದ ಈ ಸಾಲ ತೀರಿಸಲು ಪ್ರಯತ್ನಪಟ್ಟರೂ ಬಗೆಹರಿಯದ್ದಿದ್ದಾಗ ತಮ್ಮ ಮಕ್ಕಳನ್ನು ಕೂಡಾ ಕರೆದುಕೊಂಡು ತಮ್ಮ ಸ್ವಂತ ಹೊಲದಲ್ಲಿರುವ ಬಾವಿಗೆ ಹಾರಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕ್ಷೇತ್ರ ಇಲ್ಲದಿದ್ದರೆ 25 ಕ್ಷೇತ್ರಗಳಿಂದ ಆಫರ್ ಬರುತ್ತಿತ್ತಾ?: ಸಿದ್ದರಾಮಯ್ಯ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು