ಬೀದರ್: ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ; ಲಕ್ಷ ಮೌಲ್ಯದ ಗಾಂಜಾ ಗಿಡ, ಬೈಕ್ ವಶ
Team Udayavani, Oct 9, 2020, 6:10 PM IST
ಬೀದರ್: ಚಿಟಗುಪ್ಪ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು 1 ಲಕ್ಷ ರೂ. ಮೌಲ್ಯದ ಗಾಂಜಾ ಗಿಡಗಳು ಮತ್ತು ಬೈಕ್ನ್ನು ವಶಪಡಿಸಿಕೊಂಡಿದ್ದಾರೆ.
ಭದ್ರಾಪುರ ಗ್ರಾಮದಿಂದ ಸುಮಾರು 2 ಕಿ.ಮೀ ದೂರದಲ್ಲಿನ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿರುವ ಭೂಮಿಯಲ್ಲಿ ತೊಗರಿ ಬೆಳೆಯ ನಡುವೆ 3 ಅಡಿ ಎತ್ತರದಿಂದ 7 ಅಡಿ ಎತ್ತರವರೆಗಿನ ಸುಮಾರು 212 ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು,ಗಾಂಜಾ ಗಿಡಗಳನ್ನು ಬುಡ ಸಮೇತ ತೆಗೆದುಹಾಕಿ, ಸ್ಥಳದಲ್ಲಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬೀದರ್ ಉಪ ವಿಭಾಗದ ಅಬಕಾರಿ ನಿರೀಕ್ಷಕರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಬಕಾರಿ ನಿರೀಕ್ಷಕರಾದ ರವೀಂದ್ರ ಪಾಟೀಲ್, ಆನಂದ ಉಕ್ಕಲಿ, ಕೆ.ಎಸ್. ರಾಜಶೇಖರ, ಉಪ ನಿರೀಕ್ಷಕ ಜೆಟ್ಟಪ್ಪಾ, ಅಬಕಾರಿ ರಕ್ಷಕರಾದ ಚಂದ್ರಕಾಂತ, ಹುಷೇನ್ ಸಾಬ್, ಅಬ್ದುಲ್ ಅತೀಖ್ ಮತ್ತು ಪವನ್, ಅರಣ್ಯ ರಕ್ಷಕ ಸಿದ್ದಲಿಂಗಪ್ಪ ಮತ್ತು ಗ್ರಾಮ ಲೆಕ್ಕಿಗ ಹನುಮೇಶ್ ದಾಳಿ ವೇಳೆ ಇದ್ದರು.
ಇದನ್ನೂ ಓದಿ: ಶೀಘ್ರವೇ ಶಾಲಾರಂಭ ಇಲ್ಲ, ಮಕ್ಕಳ ಆರೋಗ್ಯವೇ ಮುಖ್ಯ: ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ