ಬೀದರ್: ಹಿರಿಯ ಪತ್ರಕರ್ತ ವಿಶ್ವನಾಥ ಪಾಟೀಲ್ ನಿಧನ
Team Udayavani, Feb 14, 2021, 6:09 PM IST
ಬೀದರ್: ಹಿರಿಯ ಪತ್ರಕರ್ತ, ಕರ್ನಾಟಕದ ಪ್ರಥಮ ಹಿಂದಿ ಪತ್ರಿಕೆ (ದಮನ್) ಸಂಪಾದಕರಾಗಿದ್ದ ವಿಶ್ವನಾಥ ಪಾಟೀಲ ಹಕ್ಯಾಳ್ ಅವರು ರವಿವಾರ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಬೀದರ್ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಾಯಕ ನಿರ್ದೇಶಕರಾಗಿ ವೃತ್ತಿ ಜೀವನ ಆರಂಭಿಸಿದ್ದ ವಿಶ್ವನಾಥ ಪಾಟೀಲ ಅವರು, ನಂತರ ಕಲ್ಬುರ್ಗಿ ಮತ್ತು ವಿಜಯಪುರದ ಜಿಲ್ಲಾ ವಾರ್ತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಂತರ 1970ರಲ್ಲಿ ದಮನ್ ಪತ್ರಿಕೆಯನ್ನು ಆರಂಭಿಸಿದ್ದರು. ಅಭಿವೃದ್ಧಿ ಪತ್ರಿಕೋದ್ಯಮ ಸೇರಿದಂತೆ ಹಲವು ಪ್ರಶಸ್ತಿ, ಸಮ್ಮಾನಗಳಿಗೆ ಪಾತ್ರರಾಗಿದ್ದರು.
ಜಿಲ್ಲೆಯಲ್ಲಿ ದಮನ್ ಪಾಟೀಲ ಎಂದೇ ಕರೆಯಿಸಿಕೊಳ್ಳುತ್ತಿದ್ದ ವಿಶ್ವನಾಥ ಅವರು ವಯೋ ಸಹಜ ರೋಗದಿಂದ ಬಳಲುತ್ತಿದ್ದರು. ರವಿವಾರ ನಗರದ ಎಸ್ಬಿಐ ಬ್ಯಾಂಕ್ ಕಾಲೋನಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಗಂಡು, ಓರ್ವ ಹೆಣ್ಣು ಮಗಳು ಸೇರಿ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಬೆ. 11.30ಕ್ಕೆ ನಗರದ ನರಸಿಂಹ ಝರಣಾ ಬಳಿಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ‘ಪಠಾಣ್’ ಚಿತ್ರದಲ್ಲಿ ಭಾಯ್ ಜಾನ್…. ಶಾರುಖ್ ಗೆ ಸಾಥ್ ನೀಡಿದ ಸಲ್ಮಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA