ಇನ್ನೂ ಸರಿ ದಾರಿಗೆ ಬಾರದ ಬಸ್‌

ಸರ್ಕಾರ ಮತ್ತು ಸಾರಿಗೆ ಸಂಸ್ಥೆ ನೌಕರರ ಹಗ್ಗ ಜಗ್ಗಾಟದಿಂದ ಪ್ರಯಾಣಿಕರು ಪರದಾಡುವಂತಾಗಿದೆ.

Team Udayavani, Apr 9, 2021, 6:59 PM IST

Bus

ಬೀದರ: ಆರನೇ ವೇತನ ಆಯೋಗ ಶಿಫಾರಸು ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಆರಂಭಿಸಿರುವ ಅನಿರ್ದಿಷ್ಟಾವಧಿ  ಸಾರಿಗೆ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾರ್ಯಾಚರಣೆ ಹೊರತುಪಡಿಸಿದರೆ ಬಹುತೇಕ ಸರ್ಕಾರಿ ಬಸ್‌ ಸಂಚಾರ ಸ್ತಬ್ಧವಾಗಿತ್ತು. ಪರ್ಯಾಯ ವ್ಯವಸ್ಥೆ ನಡುವೆಯೂ ಪ್ರಯಾಣಿಕರು ಪರದಾಡುವಂತಾಯಿತು.

ಮುಷ್ಕರದ ಎರಡನೇ ದಿನ ಎನ್‌ಈಕೆಆರ್ ಟಿಸಿ ಮೇಲಾಧಿ ಕಾರಿಗಳು ಮನವೊಲಿಸುವ ಪ್ರಯತ್ನ ಮಾಡಿದರಾದರೂ ನೌಕರರು ಬೇಡಿಕೆ ಈಡೇರಿಸುವವರೆಗೆ ಬಸ್ ರಸ್ತೆಗಿಳಿಸಲ್ಲ ಎಂದು ಪಟ್ಟು ಹಿಡಿದರು. ಆದರೆ, ಕೆಲವು ನೌಕರರು ಅಧಿಕಾರಿಗಳ ಕೋರಿಕೆ ಮೇರೆಗೆ ಜಿಲ್ಲೆಯ 9 ಮಾರ್ಗಗಳಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸಿದರು.

ಬೀದರ-ಭಾಲ್ಕಿ, ಬೀದರ- ಉದಗೀರ್‌, ಬೀದರ-ಔರಾದ, ಬೀದರ-ಜಹೀರಾಬಾದ್‌, ಹುಮನಾಬಾದ-ಚಿಟಗುಪ್ಪ, ಬೀದರ- ಹುಮನಾಬಾದ, ಬಸವಕಲ್ಯಾಣ-ಚಿಟಗುಪ್ಪ ಮಾರ್ಗಗಳಲ್ಲಿ ಸಾರಿಗೆ ಬಸ್‌ಗಳ ಸಂಚಾರ ನಡೆಯಿತು. ಪ್ರತಿ ಬಸ್‌ಗಳಿಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.

ಇದನ್ನು ಹೊರತುಪಡಿಸಿದರೆ ಜಿಲ್ಲೆಯ ಯಾವುದೇ ಮಾರ್ಗಗಳಲ್ಲಿ ಸಾರಿಗೆ ಬಸ್ ಸಂಚರಿಸಲಿಲ್ಲ. ಜಿಲ್ಲಾದ್ಯಂತ ಸುಮಾರು 2 ಸಾವಿರಕ್ಕೂ ಹೆಚ್ಚು ಚಾಲಕ ಮತ್ತು
ನಿರ್ವಾಹಕರು ಸೇರಿ ಇತರ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆಗೆ ಸಾಥ್‌ ನೀಡಿದ್ದರು. ಯಾರೊಬ್ಬ ನೌಕರರು ಸಹ ಡಿಪೋದತ್ತ ಮುಖ ಮಾಡಲೇ ಇಲ್ಲ. ಹಾಗಾಗಿ ಜಿಲ್ಲೆಯ 6 ಡಿಪೋಗಳಿಂದ ನಿತ್ಯ ಕಾರ್ಯಾಚರಣೆ ಆಗುವ 500ಕ್ಕೂ ಬಸ್‌ ಗಳು ರಸ್ತೆಗೆ ಇಳಿಯಲೇ ಇಲ್ಲ.

ಸರ್ಕಾರ ಮತ್ತು ಸಾರಿಗೆ ಸಂಸ್ಥೆ ನೌಕರರ ಹಗ್ಗ ಜಗ್ಗಾಟದಿಂದ ಪ್ರಯಾಣಿಕರು ಪರದಾಡುವಂತಾಗಿದೆ. 6ನೇ ವೇತನಕ್ಕಾಗಿ ನೌಕರರು ಹಠ ಹಿಡಿದಿದ್ದರೆ, ಇತ್ತ ಸರ್ಕಾರ ಸಿಬ್ಬಂದಿ ಮಣಿಸಲು ಅಸ್ತ್ರಗಳನ್ನು ಪ್ರಯೋಗಿಸುತ್ತಲೇ ಇದೇ. ಪರ್ಯಾಯ ವ್ಯವಸ್ಥೆಯಾಗಿ ಖಾಸಗಿ ವಾಹನ ರಸ್ತೆಗಿಳಿಸಿದೆ. ಬೀದರ ಕೇಂದ್ರ ಬಸ್ ನಿಲ್ದಾಣದಿಂದ ಗುರುವಾರ ಖಾಸಗಿ 30 ಬಸ್ ಗಳು ಮತ್ತು 116 ಟ್ರಾಕ್ಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದರಿಂದ ಪ್ರಯಾಣಿಕರಿಗೆ ದೊಡ್ಡ ಪ್ರಮಾಣದಲ್ಲಿ ಪರದಾಡುವ ಸ್ಥಿತಿ ಎದುರಾಗದಿದ್ದರೂ ಪ್ರಯಾಣಿಕರಿಗೆ ದುಪ್ಪಟ್ಟು ಹಣ ವಸೂಲಿಗೆ ಇಳಿದದ್ದು ಆರ್ಥಿಕ ಹೊರೆಗೆ ಕಾರಣವಾಗುತ್ತಿದೆ.

ಇನ್ನೂ ಗ್ರಾಮೀಣ ಭಾಗದಲ್ಲಿ ಬಸ್‌ ಬಂದ್ ನಿಂದ ತೀವ್ರ ಬಿಸಿ ತಟ್ಟಿದ್ದು, ಆಟೋಗಳಲ್ಲಿ ದುಬಾರಿ ಹಣ ಕೊಟ್ಟು ಸಂಚರಿಸಬೇಕಾಯಿತು. ಗಡಿ ಜಿಲ್ಲೆಯಾಗಿರುವ ಬೀದರನಿಂದ ನಿತ್ಯ ಸಂಚರಿಸುವ ಮಹಾರಾಷ್ಟ್ರದ ಬಸ್‌ಗಳನ್ನು 10 ರಿಂದ 85ಕ್ಕೆ ಹಾಗೂ ತೆಲಂಗಾಣದ 80ರಿಂದ 120ಕ್ಕೆ ಬಸ್‌ ಹೆಚ್ಚಿಸಿ ಪ್ರಯಾಣಿಕರಿಗೆ
ಅನುಕೂಲ ಮಾಡಿಕೊಡಲಾಗಿದೆ.

ವೇತನ ಹೆಚ್ಚಳ ವಿಷಯದಲ್ಲಿ ಸರ್ಕಾರ ನೌಕರರಿಗೆ ಅನುಕೂಲ ಮಾಡಿಕೊಡಲಿದ್ದು, ಈ ಬಗ್ಗೆ ಸಿಬ್ಬಂದಿಗೆ ಮನವೊಲಿಸಲಾಗುತ್ತಿದೆ. ಗುರುವಾರ ಜಿಲ್ಲೆಯ 9 ಮಾರ್ಗಗಳಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆದಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ ಆಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯದ ಬಸ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ.
ಸಿ.ಎಸ್‌. ಫುಲೇಕರ್‌,
ವಿಭಾಗೀಯ ನಿಯಂತ್ರಣಾಧಿಕಾರಿ,
ಎನ್‌ಈಕೆಆರ್‌ಟಿಸಿ, ಬೀದರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.