ಬೀದರ್: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕಳ್ಳತನ ಪ್ರಕರಣದ ಆರೋಪಿಗಳು
Team Udayavani, Nov 29, 2020, 9:00 PM IST
ಹುಮನಾಬಾದ್: ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವ ವೇಳೆ ಚಾಕುವಿನಿಂದ ಹಲ್ಲೆ ಮಾಡಿ ಓಡಿ ಹೋಗಲು ಯತ್ನಿಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ರವಿವಾರ ಸಂಜೆ ಪಟ್ಟಣ ಹೊರವಲಯದಲ್ಲಿ ನಡೆದಿದ್ದು, ಘಟನೆಯಲ್ಲಿ ಪಿಎಸ್ಐ ಮತ್ತು ಸಿಬ್ಬಂದಿಗಳಿಗೆ ಗಾಯಗಳಾಗಿವೆ.
ಬೀದರ್ ನಗರದ ಇರಾನಿ ಬಡಾವಣೆಯ ಇಬ್ಬರು ಆರೋಪಿಗಳು ಎಂದು ಮಾಹಿತಿ ಲಭ್ಯವಾಗಿದೆ. ಈ ಆರೋಪಿಗಳು ಮನ್ನಾಎಖೇಳ್ಳಿ ಹಾಗೂ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದೆನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾಗಿದ್ದು, ಈ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಓಡಿ ಹೋಗಲು ಯತ್ನಿಸಿದ ಹಿನ್ನಲೆಯಲ್ಲಿ ಪೊಲೀಸರು ಗಾಳಿಯನ್ನು ಮೂರು ಗುಂಡು ಹಾರಿಸಿದ್ದಾರೆ. ಈ ಕುರಿತು ಎಎಸ್ಪಿ ಡಾ. ಗೋಪಾಲ್ ಬ್ಯಾಕೋಡ್ ‘ಉದಯವಾಣಿ’ಗೆ ಖಚಿತಪಡಿಸಿದ್ದಾರೆ.
ಇಬ್ಬರು ಆರೋಪಿಗಳು ಮಿತ್ರ ಪೊಲೀಸ್ ಎಂದು ಗುರುತಿನ ಚೀಟಿ ತಯಾರಿಸಿಕೊಂಡು ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿರುವ ಬಗ್ಗೆ ಕೂಡ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಪಿಎಸ್ಐ ರವಿಕುಮಾರ, ಅಪರಾಧ ವಿಭಾಗದ ಪಿ.ಎಸ್.ಐ ಕಿರಣಕುಮಾರ ಹಾಗೂ ಸಿಬ್ಬಂದಿಗಳಾದ ಭಗವಾನ ಹಾಗೂ ನವೀನ ಅವರಿಗೆ ಗಾಯಗಳಾಗಿವೆ. ಈ ಕುರಿತು ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸಿದ್ದಾರೆ. ಹೆಚ್ಚುವರಿ ಎಸ್.ಪಿ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ವಿವರ ಪಡೆದಿದ್ದಾರೆ.
ಇದನ್ನೂ ಓದಿ: ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು: ತೀವ್ರ ಹೋರಾಟದ ಎಚ್ಚರಿಕೆ
ಘಟನೆಯ ವಿವರ:
ಬೈಕ್ ಮೇಲೆ ಸರ ಕಳ್ಳರು ಸಂಚರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ರವಿಕುಮಾರ್, ಅಪರಾಧ ವಿಭಾಗದ ಪಿಎಸ್ಐ ಕಿರಣಕುಮಾರ್, ಸಿಬ್ಬಂದಿಗಳಾದ ಭಗವಾನ, ನವೀನ ಹಾಗೂ ಮಲ್ಲು ನೇತೃತ್ವದಲ್ಲಿ ಪಟ್ಟಣದ ಹೊರವಲಯದ ಹೆದ್ದಾರಿಯಲ್ಲಿ ಬಂಧಿಸಲು ಮುಂದಾದಾಗ ಇಬ್ಬರು ಆರೋಪಿಗಳು ಹಾಗೂ ಪೊಲೀಸರ ಮಧ್ಯ ಗಲಾಟೆ ಉಂಟಾಗಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಆರೋಪಿಗಳು ಪೊಲೀಸರ ಮೇಲೆಯೇ ಹರಿತವಾದ ವಸ್ತುವಿನಿಂದ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್ಐ ರವಿಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಇಬ್ಬರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: ಸರಣಿ ಸೋತರೂ, ಹೊಸ ದಾಖಲೆ ಬರೆದ ನಾಯಕ ವಿರಾಟ್ ಕೊಹ್ಲಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ