Bidar; ರಾಜಿ ಸಂಧಾನದಲ್ಲಿ ಒಂದಾದ ಮೂರು ದಂಪತಿಗಳು
Team Udayavani, May 9, 2024, 10:52 PM IST
ಬೀದರ್ : ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಕೆ ಕನಕಟ್ಟೆ ಅವರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ಮೂರು ದಂಪತಿಗಳನ್ನು ಒಂದು ಮಾಡಿ ಶುಭ ಹಾರೈಸಲಾಯಿತು.
ಮಹಿಳಾ ಪೊಲೀಸ್ ಠಾಣೆಯ ಸಿಪಿಐ ರಾಮಪ್ಪಾ ಸವಳಗಿ ಅವರು ರಾಜಿ ಸಂದಾನಕ್ಕಾಗಿ ಮೂವರು ದಂಪತಿಗಳ ಅರ್ಜಿಯನ್ನು ಪ್ರಾಧಿಕಾರಕ್ಕೆ ಕಳುಹಿಸಿದ್ದರು. ಸದಸ್ಯ ಕಾರ್ಯದರ್ಶಿಗಳು ನೋಟಿಸ್ ಮೂಲಕ ಮೂವರು ದಂಪತಿಗಳನ್ನು ಪ್ರಾಧಿಕಾರಕ್ಕೆ ಕರೆಯಸಿ ಅವರ ಕೌಟುಂಬಿಕ ಸಮಸ್ಯೆಗಳನ್ನು ಆಲಿಸಿದರು. ನಂತರ ಗಂಡನಿಗೆ ಬುದ್ಧಿಮಾತುಗಳನ್ನು ಹೇಳಿ ರಾಜಿ ಸಂಧಾನದ ಮೂಲಕ ಒಂದುಗೂಡಿಸಿದ್ದಾರೆ.
ತಾಲೂಕಿನ ಮೈಲೂರಿನ ಸುಮಯ್ಯಾ ಬೆಗಂ ಮತ್ತು ಪತಿ ಶಮಿ, ನೌಬಾದ್ನ ಪೂಜಾ ಮತ್ತು ಪತಿ ಸಂತೋಷ ಮತ್ತು ಸುಕಿರ್ತಾ ಮತ್ತು ಪತಿ ರಾಹುಲ ದಂಪತಿಗಳು ಒಂದಾದರು. ಈ ವೇಳೆ ಮಾತನಾಡಿದ ನ್ಯಾಯಾಧೀಶರಾದ ಕನಕಟ್ಟೆ, ದಂಪತಿಗಳಿಬ್ಬರು ಸಣ್ಣಪುಟ್ಟ ವಿಚಾರಗಳಿಗೆ ಪೋಲಿಸ್ ಠಾಣೆ, ನ್ಯಾಯಾಲಯಕ್ಕೆ ಅಲೆದಾಡುವ ಬದಲಾಗಿ ಮನೆಯ/ಗ್ರಾಮದ ಹಿರಿಯರ ಮಾತನ್ನು ಕೇಳಿ ನೆಮ್ಮದಿಯಿಂದ ಬದುಕಬೇಕು. ಆಗಲೇ ಸಂಸಾರಕ್ಕೊಂದು ಅರ್ಥ ಬರುತ್ತದೆ. ರಾಜಿ ಸಂಧಾನ ಮಾಡಿಕೊಂಡ ದಂಪತಿಗಳು ಮುಂದೆ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ಬದುಕು ಸಾಗಿಸಬೇಕೆಂದು ಸಲಹೆ ನೀಡಿದರು.
ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಗುಂಡುರೆಡ್ಡಿ, ಲೋಕಾಯುಕ್ತ ಅಭಿಯೋಜಕ ಕೇಶವ ಶ್ರೀಮಾಳೆ, ಹಿರಿಯ ವಕೀಲ ಬಿ.ಎಸ್ ಪಾಟೀಲ, ಪ್ರಾಧಿಕಾರದ ಸಿಬ್ಬಂದಿಗಳಾದ ಜಗದೀಶ್ವರ ದೊರೆ, ಆಕಾಶ ಸಜ್ಜನ್, ರಾಹುಲ್, ಪ್ರೀತಿ ಜಿ.ಕೆ, ಜೀವನ್, ಯೋಹನ್ ಕಾಳೆ ಮತ್ತು ಈರಮ್ಮ ಸೇರಿದಂತೆ ದಂಪತಿಗಳಿಗೆ ಸಂಬಂಧಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ ಎಗರಿಸಿದ ಖದೀಮ
Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್
Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು
Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
MUST WATCH
ಹೊಸ ಸೇರ್ಪಡೆ
Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ
Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು
Kannada Cinema; ರಿಲೀಸ್ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..
Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು
HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು