ಪರ್ಯಾಯ ಬೀಜ ವಿತರಿಸಿ: ಖಾಶೆಂಪುರ
Team Udayavani, Jul 1, 2020, 4:05 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಇತ್ತೀಚೆಗೆ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಸೋಯಾಬೀನ್ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ಮೊಳಕೆ ಬಾರದೆ ಬೆಳೆ ನಷ್ಟಕ್ಕೆ ತುತ್ತಾದ ರೈತರ ಜಮೀನುಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ ಅವರು ಕೃಷಿ ಅಧಿಕಾರಿಗಳು, ಕೃಷಿ ವಿಜ್ಞಾನಿಗಳ ನೇತೃತ್ವದಲ್ಲಿ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ಬಗದಲ್ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಖಾಶೆಂಪುರ (ಬಿ) ಗ್ರಾಮದ ರವೀಂದ್ರ ಗುಮಾಸ್ತಿ ಎಂಬ ರೈತರ ಜಮೀನು ಹಾಗೂ ಸುತ್ತಮುತ್ತಲಿನ ಜಮೀನುಗಳಿಗೆ ಭೇಟಿ ನೀಡಿದ ಶಾಸಕರು, ಬೆಳೆ ನಷ್ಟದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅಲ್ಲದೇ ಮೊಳಕೆ ಬಾರದೆ ನಷ್ಟಕ್ಕೆ ತುತ್ತಾದ ರೈತರಿಗೆ ಪರಿಹಾರ ನೀಡುವಂತೆ ಹಾಗೂ ಪರ್ಯಾಯವಾಗಿ ಉದ್ದು, ಹೆಸರು ಬೀಜಗಳನ್ನು ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈಗಾಗಲೇ ಸೋಯಾಬಿನ್ ಬೆಳೆ ನಷ್ಟದ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿಲಾಗಿದೆ. ಕೃಷಿ ಇಲಾಖೆಯಿಂದ ಸೋಯಾಬಿನ್ ಬೀಜಗಳನ್ನು ಖರೀದಿಸಿದ ರೈತರು ಇನ್ನೂ ಬಿತ್ತನೆ ಮಾಡಿರದಿದ್ದರೆ, ವಾಪಸ್ ಮಾಡಬಹುದು. ವಾಪಸ್ ಮಾಡುವ ರೈತರ ಖಾತೆಗಳಿಗೆ ಹಣ ಮರಳಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ