ಬೀದರನಲ್ಲಿ ಕೋವಿಡ್‌ಗೆ ಮತ್ತಿಬ್ಬರ ಸಾವು

ಸತತ ಆರು ದಿನದಲ್ಲಿ 9 ಸಾವು ಮೃತರ ಸಂಖ್ಯೆ 15ಕ್ಕೇರಿಕೆ 13 ಹೊಸ ಕೇಸ್‌-58 ಜನ ಗುಣಮುಖ

Team Udayavani, Jun 22, 2020, 10:37 AM IST

22-June-04

ಬೀದರ: ಗಡಿ ನಾಡು ಬೀದರನಲ್ಲಿ ಮಹಾಮಾರಿ ಕೋವಿಡ್ ಸಾವಿನ ರಣಕೇಕೆ ಮುಂದುವರಿದಿದ್ದು, ರವಿವಾರ ಮತ್ತಿಬ್ಬರು ಸೋಂಕಿತರನ್ನು ಬಲಿ ಪಡೆದಿದೆ. ಇದರೊಂದಿಗೆ ಈವರೆಗೆ ಮೃತಪಟ್ಟವರ ಸಂಖ್ಯೆ 15ಕ್ಕೇರಿಕೆಯಾಗಿದೆ. ಇನ್ನೊಂದೆಡೆ 13 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ.

ಜನರ ಜೀವ ಹಿಂಡುತ್ತಿರುವ ಕೋವಿಡ್ ಗೆ ಸತತ ಆರು ದಿನದಲ್ಲಿ 9 ಜನರು ಮೃತಪಟ್ಟಿದ್ದಾರೆ. ಮಂಗಳವಾರದಿಂದ ಸತತ ಮೂರು ದಿನ ತಲಾ ಒಬ್ಬರು ಸೋಂಕಿತರು ಬಲಿ ಆಗಿದ್ದರೆ, ನಂತರ ಎರಡು ದಿನ ತಲಾ ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡಿದ್ದರು. ಈಗ ಮತ್ತೆ ರವಿವಾರ ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ವೈದ್ಯರ ಪ್ರಕಾರ ಕಿಡ್ನಿ, ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಗಳುಳ್ಳ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಬೀದರ ನಗರದ ಗವಾನ್‌ ಚೌಕ್‌ನ 70 ವರ್ಷದ ವ್ಯಕ್ತಿ (ಪಿ-9149) ಬಿಪಿ, ಜ್ವರದ ಸಮಸ್ಯೆ ಹಿನ್ನೆಲೆಯಲ್ಲಿ ಜೂ. 18ರಂದು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೇ ಅದೇ ದಿನ ಮೃತಪಟ್ಟಿದ್ದಾರೆ. ಅವರ ಗಂಟಲು ದ್ರವದ ವರದಿ ರವಿವಾರ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ.

ತಾಲೂಕಿನ ಮಾಳೆಗಾಂವ ಗ್ರಾಮದ 46 ವರ್ಷದ ವ್ಯಕ್ತಿ ಜೂ. 17ರಂದು ಸರಾಯಿ ನಶೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾರನೆ ದಿನ ಸಾವನ್ನಪ್ಪಿದ್ದರು. ಅವರ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲೂ ಪಾಸಿಟಿವ್‌ ಬಂದಿದೆ. ಇನ್ನು ರವಿವಾರ ಜಿಲ್ಲೆಯಲ್ಲಿ 13 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 4 ಜನರ ಸಂಪರ್ಕವೇ ಪತ್ತೆಯಾಗಿಲ್ಲ. ಇನ್ನು ಮೂವರಿಗೆ ಪಿ. 7524 ರೋಗಿಗಳ ಸಂಪರ್ಕದಿಂದ ಸೋಂಕು ವಕ್ಕರಿಸಿದೆ.

ಸೋಂಕಿತರಲ್ಲಿ 7 ಜನ ಬೀದರ ನಗರದವರೇ ಆಗಿದ್ದಾರೆ. ಸ್ಥಳೀಯ ಆಸ್ಪತ್ರೆಯೊಂದರ 4 ಸಿಬ್ಬಂದಿಗಳು, ಶಿವನಗರ, ಮುಲ್ತಾನಿ ಕಾಲೋನಿ, ಬಸವ ನಗರ, ಶಿವನಗರದ ತಲಾ ಒಂದು, ಜನವಾಡಾ ಮತ್ತು ಸುಲ್ತಾನಪುರ ಗ್ರಾಮದ ತಲಾ ಒಂದು ಪ್ರಕರಣ, ಭಾಲ್ಕಿ ತಾಲೂಕಿನ ನಾಗರಾಳ ಮತ್ತು ಕಮಲನಗರದಲ್ಲಿ ಒಂದು ಪಾಸಿಟಿವ್‌ ಕೇಸ್‌ ಪತ್ತೆಯಾಗಿವೆ. ರವಿವಾರ 58 ಸೋಂಕಿತರು ಡಿಸಾcರ್ಜ್‌ ಆಗಿರುವುದು ಕೊಂಚ ಸಮಾಧಾನ ತಂದಿದ್ದರೆ ಈವರೆಗೆ ಪಾಸಿಟಿವ್‌ಗಳ ಸಂಖ್ಯೆ 497ಕ್ಕೆ ತಲುಪಿದೆ. ಒಟ್ಟು 324 ಮಂದಿ ಡಿಸಾcರ್ಜ್‌ ಆಗಿದ್ದು, ಇನ್ನೂ 158 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.