ಕೋವಿಡ್‌ ಚಿಕಿತ್ಸೆಗೆ ಖಾಸಗಿ ವೈದ್ಯರ ಅಪಸ್ವರ

ಆಸ್ಪತ್ರೆಗಳಿಗೆ ಇತರೆ ರೋಗಿಗಳು ಬರಲ್ಲ ಎಂಬ ಆತಂಕ ಒಂದೇ ಕ್ಲಿನಿಕ್‌ ಮೀಸಲಿಡಲು ಆಗ್ರಹ

Team Udayavani, Jun 29, 2020, 1:31 PM IST

29-June-12

ಬೀದರ: ಗಡಿನಾಡು ಬೀದರನಲ್ಲಿ ರಕ್ಕಸ ಕೋವಿಡ್ ದಿನ ಕಳೆದಂತೆ ತನ್ನ ಕಬಂದಬಾಹು ಚಾಚುತ್ತಿದ್ದು, ಸಾವಿನ ರಣಕೇಕೆ ಹಾಕುತ್ತಿದೆ. ಈ ಆತಂಕದ ನಡುವೆ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌-19ಗೆ ಚಿಕಿತ್ಸೆ ನೀಡಬೇಕೆಂಬ ಸರ್ಕಾರದ ಆದೇಶ ಜನರಲ್ಲಿ ನೆಮ್ಮದಿ ತರಿಸಿದ್ದರೆ, ಖಾಸಗಿ ಕ್ಲಿನಿಕ್‌ಗಳಿಗೆ ಭೀತಿ ಶುರುವಾಗಿದೆ.

ರಾಜ್ಯದಲ್ಲಿ ಕೋವಿಡ್ ಆರ್ಭಟ ಹೆಚ್ಚಳ ಹಿನ್ನಲೆಯಲ್ಲಿ ಸರ್ಕಾರ ಆಯುಷ್ಮಾನ್‌ ಭಾರತ್‌ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ 483 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದ್ದು, ಅದರಲ್ಲಿ ಬೀದರ ನಗರದ 13 ಮತ್ತು ಬಸವಕಲ್ಯಾಣದ 1 ಕ್ಲಿನಿಕ್‌ ಸೇರಿ ಜಿಲ್ಲೆಯಲ್ಲಿ ಒಟ್ಟು 14 ಆಸ್ಪತ್ರೆಗಳನ್ನು ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಗುರುತಿಸಲಾಗಿದೆ.

ಕೋವಿಡ್‌-19 ವಿಪತ್ತಿನ ವೇಳೆ ರೋಗಿಗಳಿಗೆ ಚಿಕಿತ್ಸೆ ನೀಡುವುದು ನಮ್ಮ ಕರ್ತವ್ಯ. ಆದರೆ, ಸೋಂಕಿತರು ಚಿಕಿತ್ಸೆಗೆ ಬಂದರೆ ನಮ್ಮ ಕ್ಲಿನಿಕ್‌ ಗಳ ಗತಿ ಏನು ಎಂದು ಖಾಸಗಿ ಆಸ್ಪತ್ರೆಗಳ ವಲಯದಲ್ಲಿ ಅಪಸ್ವರ ಕೇಳಿ ಬರುತ್ತಿವೆ. ಬೀದರ ಜಿಲ್ಲೆಯಲ್ಲಿ ಪಾಸಿಟಿವ್‌ ಸಂಖ್ಯೆ 500ರ ಗಡಿ ದಾಟಿದ್ದರೂ ಗುಣಮುಖರಾದವರ ಸಂಖ್ಯೆ ಶೇ.80ರಷ್ಟು ಇರುವುದು ನೆಮ್ಮದಿಯ ಬೆಳವಣಿಗೆ. ಆದರೆ, ಸೋಂಕಿಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿ ಬೆಂಗಳೂರು ಬಳಿಕ ರಾಜ್ಯದಲ್ಲಿ 2ನೇ ಸ್ಥಾನದಲ್ಲಿರುವುದು ತೀವ್ರ ಆಘಾತವನ್ನುಂಟು ಮಾಡಿದೆ. 300 ಹಾಸಿಗೆಯ ಹಳೆ ಬ್ರಿಮ್ಸ್‌ ಕಟ್ಟಡವನ್ನು ಕೋವಿಡ್‌-19 ಆಸ್ಪತ್ರೆಯಾಗಿ ಪರಿವರ್ತಿಸಲಾಗಿದ್ದು, ಸೋಂಕಿತರು ಹೆಚ್ಚಾದರೆ ಖಾಸಗಿ ಕ್ಲಿನಿಕ್‌ಗಳನ್ನು ಬಳಸಿಕೊಳ್ಳುವ ಸರ್ಕಾರದ ನಿರ್ಧಾರದಿಂದ ಆತಂಕಗೊಂಡಿದ್ದಾರೆ.

ಏಕೆ ಅಪಸ್ವರ?:
ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆ ನೀಡುವ ವಿಷಯದಲ್ಲಿ ಪೂರ್ವಾಪರ ಯೋಚಿಸದೆ ಕ್ಲಿನಿಕ್‌ಗಳನ್ನು ಆಯ್ಕೆ ಮಾಡಿದೆ. ಮುಖ್ಯವಾಗಿ ಜಿಲ್ಲೆಯಲ್ಲಿ 4 ಕಣ್ಣಿನ ಆಸ್ಪತ್ರೆಗಳನ್ನು ಪಟ್ಟಿಯಲ್ಲಿ ಸೇರಿಸಿದೆ. ಕೆಲವೊಂದು ಸಿಂಗಲ್‌ ಸ್ಪೆಷಾಲಿಟಿಯ ಸಾಮಾನ್ಯ ಆಸ್ಪತ್ರೆಗಳಿದ್ದು, ಅಲ್ಲಿ ಅಗತ್ಯ ಸಿಬ್ಬಂದಿ, ಚಿಕಿತ್ಸಾ ಸಲಕರಣೆಗಳ ಕೊರತೆ ಇದೆ. ಪೂರ್ವ ವ್ಯವಸ್ಥೆಗಳಿಲ್ಲದಂಥ ಕ್ಲಿನಿಕ್‌ಗಳಲ್ಲಿ ಕೋವಿಡ್  ಮಹಾಮಾರಿಗೆ ಚಿಕಿತ್ಸೆ ನೀಡುವುದು ಕಷ್ಟಕರ ಎಂಬ ಅಪಸ್ವರ ಕೇಳಿಬರುತ್ತಿದೆ.

ಇನ್ನು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಅತಿ ಸೂಕ್ಷ್ಮವಾಗಿರುವುದರಿಮದ ಎಚ್ಚರಿಕೆ ಬಹು ಮುಖ್ಯವಾಗಿದೆ. ಸಿಂಗಲ್‌ ಕಟ್ಟಡಗಳನ್ನು ಹೊಂದಿರುವ ಖಾಸಗಿ ಕ್ಲಿನಿಕ್‌ಗಳಿಗೆ ಇದು ದೊಡ್ಡ ಸವಾಲಾಗಲಿದೆ. ಮುಖ್ಯವಾಗಿ ಒಬ್ಬನೇ ಕೋವಿಡ್ ಸೋಂಕಿತ ಆಸ್ಪತ್ರೆಗೆ ದಾಖಲಾದರೂ ಬೇರೆ ಯಾವ ರೋಗಿಗಳು ಸಹ ನಮ್ಮ ಆಸ್ಪತ್ರೆಗಳತ್ತ ಮುಖ ಮಾಡುವುದಿಲ್ಲ. ಇಂಥ ಸಂದರ್ಭದಲ್ಲಿ ಕೋವಿಡ್‌ ರೋಗಿಗಳನ್ನಷ್ಟೇ ಗಮನಿಸಿ ಆಸ್ಪತ್ರೆ ನಡೆಸುವುದಾದರೂ ಹೇಗೆ ಎಂಬುದು ಖಾಸಗಿ ಆಸ್ಪತ್ರೆಗಳವರ ಅಳಲಾಗಿದೆ.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.