ಬಡವರಿಗೆ ನಾಗಮಾರಪಳ್ಳಿ ಫೌಂಡೇಶನ್ ನೆರವು
ಸಚಿವ ಪ್ರಭು ಚವ್ಹಾಣ ನೇತೃತ್ವದಲ್ಲಿ ಅಧ್ಯಕ್ಷ ಸೂರ್ಯಕಾಂತರಿಂದ ಆಹಾರ ಧ್ಯಾನದ ಕಿಟ್ ವಿತರಣೆ
Team Udayavani, May 10, 2020, 12:43 PM IST
ಬೀದರ: ನೌಬಾದ್ನಲ್ಲಿ ಸಚಿವ ಪ್ರಭು ಚವ್ಹಾಣ ನೇತೃತ್ವದಲ್ಲಿ ನಾಗಮಾರಪಳ್ಳಿ ಫೌಂಡೇಶನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಬಡವರಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.
ಬೀದರ: ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ನಗರದ ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ಕೋವಿಡ್ ಸೋಂಕಿನ ಪ್ರಯುಕ್ತ ಜಾರಿಗೊಳಿಸಿರುವ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಸಹಾಯಹಸ್ತ ಚಾಚಿದೆ. ಉಸ್ತುವಾರಿ ಸಚಿವ ಪ್ರಭು ಚವ್ಹಾಣ ನೇತೃತ್ವದಲ್ಲಿ ಫೌಂಡೇಶನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ನಗರದ ವಿವಿಧೆಡೆ ಬಡವರಿಗೆ ಆಹಾರಧಾನ್ಯದ ಕಿಟ್ ಉಚಿತ ವಿತರಿಸಿದರು.
ನೌಬಾದ್, ಭೀಮನಗರ, ಮೈಲೂರು ಸೇರಿದಂತೆ ವಿವಿಧೆಡೆ ನಿರ್ಗತಿಕರು, ಕೂಲಿ ಕಾರ್ಮಿಕರು, ವಿಧವೆಯರು, ಅಲೆಮಾರಿಗಳು, ಬಡವರಿಗೆ ತಲಾ ಐದು ಕೆಜಿ ಅಕ್ಕಿ, ಒಂದು ಕೆಜಿ ಬೇಳೆ, ಒಂದು ಕೆಜಿ ಸಿಹಿ ಎಣ್ಣೆ, ಒಂದು ಕೆಜಿ ಉಪ್ಪು, ಮಾಸ್ಕ್, ಪೌಷ್ಟಿಕಾಂಶ ಮಾತ್ರೆ ಮತ್ತಿತರ ಸಾಮಗ್ರಿ ಒಳಗೊಂಡ ಕಿಟ್ ವಿತರಿಸಿದರು.
ಕೋವಿಡ್ ಸೋಂಕು ತಡೆಗೆ ಲಾಕ್ ಡೌನ್ ಜಾರಿಗೊಳಿಸಿರುವ ಕಾರಣ ಬದುಕು ಸಾಗಿಸಲು ಕೂಲಿ ಕೆಲಸವನ್ನೇ ಅವಲಂಬಿಸಿರುವ ಕುಟುಂಬಗಳು ತೊಂದರೆಗೆ ಸಿಲುಕಿವೆ. ಅಂಥ ಕುಟುಂಬಗಳಿಗೆ ಫೌಂಡೇಶನ್ ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚಿದೆ. ಬೀದರ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದೂವರೆ ತಿಂಗಳಿಂದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಆಹಾರ ಕಿಟ್ ಉಚಿತ ವಿತರಿಸಲಾಗುತ್ತಿದೆ. ಈವರೆಗೆ
27,500 ಕುಟುಂಬಗಳಿಗೆ ಕಿಟ್ ಒದಗಿಸಲಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಜನರಿಗೆ ನೆರವು ಕಲ್ಪಿಸಲಾಗುವುದು ಎಂದು ಸೂರ್ಯಕಾಂತ ನಾಗಮಾರಪಳ್ಳಿ ವಿವರಿಸಿದರು.
ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಯುದ್ಧೋಪಾದಿಯಲ್ಲಿ ಕೈಗೊಂಡ ಹಲವು ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ.ಕೋವಿಡ್ ನಿಂದ ತೊಂದರೆ ಗೊಳಗಾದವರಿಗೆ ಸಿಎಂ ವಿಶೇಷ ಪ್ಯಾಕೇಜ್ ಘೋಷಿಸಿ ಅವರಿಗೆ ಅಭಯ ನೀಡಿದ್ದಾರೆ ಎಂದು ಹೇಳಿದರು. ಕೋವಿಡ್ ತಡೆಗೆ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು. ಮಾಸ್ಕ್ ಧರಿಸಬೇಕು. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ನಗರಸಭೆ ಮಾಜಿ ಸದಸ್ಯರಾದ ವೀರಶೆಟ್ಟಿ ಭಂಗೂರೆ, ಶಶಿ ಹೊಸಳ್ಳಿ, ಅರುಣಕುಮಾರ, ಭೂಷಣ ಪಾಠಕ್, ರಾಜು ಚಿದ್ರಿ, ಕಿರಣ ಪಾಲಂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ