ಸೋಂಕಿತರ ಶವಕ್ಕೆ “ಬಿಲಾಲ್‌’ ಮುಕ್ತಿದಾತ


Team Udayavani, Jul 9, 2020, 6:32 PM IST

9-July-32

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ: ಹೆಮ್ಮಾರಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ದಿನಕ್ಕೊಂದು ಯಡವಟ್ಟಾಗುತ್ತಿರುವುದು ಒಂದೆಡೆಯಾದರೆ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಸ್ವತಃ ಕುಟುಂಬದವರೇ ಹೆದರುತ್ತಿರುವುದು ಸಾಮಾನ್ಯವಾಗಿದೆ.

ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಬಿಸಿಲೂರಿನ ಸಮಾಜಮುಖೀ ಕಾರ್ಯಕರ್ತರ ತಂಡ ಸೋಂಕಿತರು, ಅನಾಥರ ಶವ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದೆ. ಕೊರೊನಾ ದೇಶದೆಲ್ಲೆಡೆ ಜನರ ಜೀವ ಹಿಂಡುತ್ತ ತಲ್ಲಣ ಮೂಡಿಸುತ್ತಿದ್ದು ಬೀದರ್‌ ಸಹ ಇದಕ್ಕೆ ಹೊರತಾಗಿಲ್ಲ. ಜಿಲ್ಲೆಯಲ್ಲಿ ಸೋಂಕು ಹರಡುತ್ತಿದೆಯಲ್ಲದೆ ಇದರಿಂದ ಮೃತಪಟ್ಟವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಭೀತಿ ಮಧ್ಯೆಯೇ ಬೀದರನ ಮಹ್ಮದ್‌ ಮಜೀದ್‌ ಬಿಲಾಲ್‌ ಮತ್ತು ಯುವಕರ ತಂಡ ಮಾನವೀಯತೆ ನೆಲೆಯಲ್ಲಿ ಕೋವಿಡ್‌-19 ರೋಗಕ್ಕೆ ಬಲಿಯಾಗಿರುವ, ಅಪರಿಚಿತರ ಶವಗಳನ್ನು ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸುತ್ತಿದೆ. ಆರೋಗ್ಯ ಇಲಾಖೆ, ನಗರಸಭೆ ಪರವಾನಿಗೆ ಪಡೆದು ಈವರೆಗೆ ಸೋಂಕಿನಿಂದ ಮೃತಪಟ್ಟ ಮೂವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಬೀದರ ಹೊರವಲಯದ ಚಿದ್ರಿಯ ಹೈದರ್‌ ಕಾಲೋನಿಯ ನಿವಾಸಿ ಮಹಮದ್‌ ಮಜೀದ್‌ ಬಿಲಾಲ್‌ ಅಖಂಡ ಕರ್ನಾಟಕ ರಕ್ಷಣಾ ಸೇವಾ ದಳ ಸಂಘಟನೆ ಮೂಲಕ ಸಾಮಾಜಿಕ ಸೇವೆಗೈಯುತ್ತ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಳೆದ ಐದು ವರ್ಷಗಳಿಂದ ನಗರ ಸೇರಿ ಜಿಲ್ಲೆಯಲ್ಲಿ ಅಪಘಾತ, ಬಾವಿ, ಹೊಳೆ, ಕೆರೆ ಸೇರಿದಂತೆ ಯಾವುದೇ ಸ್ಥಳದಲ್ಲಿ ಅನಾಥ ಮೃತದೇಹ ಪತ್ತೆಯಾದರೂ ಆ ಸ್ಥಳಕ್ಕೆ ಹಾಜರಾಗಿ ಆ ದೇಹಕ್ಕೆ ಮುಕ್ತಿ ನೀಡುತ್ತ ಬಂದಿದ್ದಾರೆ. ಈ ವರೆಗೆ ಹತ್ತಾರು ಅನಾಥ ಶವಗಳ ಅಂತ್ಯಕ್ರಿಯೆ ಮಾಡಿರುವ ಅಖಂಡ ಕರ್ನಾಟಕ ರಕ್ಷಣಾ ಸೇವಾ ದಳ ಸಂಘಟನೆ ರಾಜ್ಯ ಜಂಟಿ ಕಾರ್ಯದರ್ಶಿ ಬಿಲಾಲ್‌ ಅವರ ತಂಡ ಈಗ ಕೊರೊನಾದಿಂದ ಸಾವಿಗೀಡಾದವರ ಸಂಸ್ಕಾರ ಮಾಡಲು ಮುಂದಾಗಿದೆ.

ಹದಿನೈದು ದಿನಗಳ ಹಿಂದೆಯಷ್ಟೇ ಡಿಎಚ್‌ಒ ಡಾ| ವಿ.ಜಿ. ರೆಡ್ಡಿಯವರಿಗೆ ಮನವಿ ನೀಡಿ ಪರವಾನಿಗೆ ಪಡೆದಿರುವ ತಂಡ ಮೂವರು ಸೋಂಕಿತರ ಶವ ಸಂಸ್ಕಾರ ಮಾಡಿದೆ. ಆರೋಗ್ಯ ಇಲಾಖೆ ಬಿಲಾಲ್‌ ಅವರನ್ನು ಸಂಪರ್ಕಿಸಿ ಮಾಹಿತಿ ನೀಡುತ್ತಿದೆ. ಪಿಪಿಇ ಕಿಟ್‌ ಧರಿಸಿ, ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್‌ ಹಾಕಿಕೊಂಡು ಮುಂಜಾಗ್ರತಾ ಕ್ರಮಗಳೊಂದಿಗೆ ಮೃತರ ಸಂಪ್ರದಾಯದಂತೆ ಅಂತಿಮ ಕ್ರಿಯೆಗಳನ್ನು ಮಾಡಲಾಗಿದೆ. ಇವರ ಸೇವೆಗೆ ಬ್ರಿಮ್ಸ್‌, ನಗರಸಭೆ ಸಹಕಾರ ನೀಡುತ್ತಿದೆ. ಅನಾಥರ ಶವ ಸಂಸ್ಕಾರಕ್ಕಾಗಿ ಮಜೀದ್‌ ಬಿಲಾಲ್‌ (ಮೊ. 8746999222) ಅವರನ್ನು ಸಂಪರ್ಕಿಸಬಹುದು. ಅವರ ತಂಡ ಸಂಬಂಧಪಟ್ಟವರ ಪರವಾನಿಗೆ ಪಡೆದು ಅಂತಿಮ ಕ್ರಿಯೆ ನಡೆಸಿಕೊಡಲಿದೆ.

ಅನಾಥ ಗೆಳೆಯನೊಬ್ಬನ ಶವ ಸಂಸ್ಕಾರದ ಘಟನೆ ನನ್ನನ್ನು ಈ ಸಮಾಜಮುಖೀ ಕಾರ್ಯದಲ್ಲಿ ತೊಡಿಗಿಸಿಕೊಳ್ಳುವಂತೆ ಮಾಡಿತು. ಸಮಾಜ ಸೇವೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ವ್ಯವಸ್ಥಾಪಕ ಹುದ್ದೆಯನ್ನು ಬಿಟ್ಟಿದ್ದೇನೆ. ಕಳೆದ ಐದು ವರ್ಷದಲ್ಲಿ ಹತ್ತಾರು ಶವಗಳ ಅಂತ್ಯ ಸಂಸ್ಕಾರ ನೆರವೇರಿಸಿದ್ದು, ಈಗ ಮುಂಜಾಗ್ರತಾ ಕ್ರಮದೊಂದಿಗೆ ಬೀದರನ ಮೂರು ಕೊರೊನಾ ಸೋಂಕಿತರ ಶವಕ್ಕೆ ಮುಕ್ತಿ ನೀಡಿದ್ದೇವೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಬೇರೆಡೆಗೆ ವಾಸವಾಗಿದ್ದೇನೆ.
ಮಜೀದ್‌ ಬಿಲಾಲ್‌

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.