ಬೀದರನಲ್ಲಿ ಉತ್ತಮ ಪ್ರತಿಕ್ರಿಯೆ
Team Udayavani, Jul 6, 2020, 12:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚುತ್ತ ತಲ್ಲಣ ಮೂಡಿಸಿರುವ ಕೋವಿಡ್ ಸೋಂಕು ನಿಯಂತ್ರಣ ಹಿನ್ನೆಲೆ ರಾಜ್ಯ ಸರ್ಕಾರ ಕರೆ ನೀಡಿದ್ದ ರವಿವಾರ ಒಂದು ದಿನದ ಲಾಕ್ ಡೌನ್ಗೆ ಗಡಿ ನಾಡು ಬೀದರ ನಗರ ಸೇರಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಅದೇಶಿಸಿದ್ದು, ಈ ಹಿನ್ನೆಲೆಯಲ್ಲಿ ರವಿವಾರ ಜಿಲ್ಲೆಯಲ್ಲಿ ಸಂಚಾರ, ವ್ಯಾಪಾರೋದ್ಯಮ ಸಂಪೂರ್ಣ ಬಂದ್ ಆಗಿತ್ತು. ಈಗಾಗಲೇ ಕೋವಿಡ್-19 ವೈರಸ್ ಭೀತಿಯಿಂದ ಮನೆಯಲ್ಲಿ ಇರುತ್ತಿರುವ ಜನ ಲಾಕ್ಡೌನ್ ಕಾರಣ ಹೊರಗೆ ಬರಲೇ ಇಲ್ಲ. ಹಾಗಾಗಿ ರಸ್ತೆಯಲ್ಲಿ ಬೆರಳಣಿಕೆಯಷ್ಟು ಜನರ ಓಡಾಟ ಮಾತ್ರ ಕಂಡುಬಂತು. ಇದರಿಂದ ಇಲ್ಲಿನ ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಮಡಿವಾಳ ವೃತ್ತ, ನಾಂದೇಡ ರಸ್ತೆ ಸೇರಿ ಪ್ರಮುಖ ವೃತ್ತ, ರಸ್ತೆಗಳಲ್ಲಿ ಜನ ಸಂಚಾರ ಇಲ್ಲದೇ ಬಿಕೋ ಎನ್ನುತ್ತಿದ್ದವು.
ಬೀದರ ನಗರ ಮಾತ್ರವಲ್ಲದೇ ಬಸವಕಲ್ಯಾಣ, ಹುಮನಾಬಾದ, ಭಾಲ್ಕಿ ಮತ್ತು ಔರಾದ ಸೇರಿದಂತೆ ಜಿಲ್ಲಾದ್ಯಂತ ಬಹುತೇಕ ಬಂದ್ ಆಗಿತ್ತು. ದೇವಸ್ಥಾನಗಳ ಬಾಗಿಲುಗಳು ಮುಚ್ಚಲಾಗಿದ್ದರೆ, ಸಾರಿಗೆ ಸಂಚಾರ ಸಹ ಬಹುತೇಕ ಸ್ತಬ್ದಗೊಳಿಸಲಾಗಿತ್ತು. ಇದರಿಂದ ಎಲ್ಲೆಡೆ ಅಘೋಷಿತ ಬಂದ್ ವಾತಾವರಣ ಏರ್ಪಟ್ಟಿತ್ತು. ಹಣ್ಣು-ತರಕಾರಿ, ಕಿರಾಣಾ ಮತ್ತು ಮೆಡಿಕಲ್ ಸೇರಿ ಅವಶ್ಯಕ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಸಾರಿಗೆ ಬಸ್ಗಳ ಕಾರ್ಯಾಚರಣೆಯೂ ಸಹ ಸ್ಥಗಿತಗೊಳಿಸಲಾಗಿತ್ತು. ಲಾಕ್ ಡೌನ್ ಹಿನ್ನೆಲೆ ಜನರ ನಿಯಂತ್ರಣ ಮತ್ತು ಬಂದೋಬಸ್ತ್ಗಾಗಿ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !