ಹೋಂ ಕ್ವಾರಂಟೈನ್‌ ವ್ಯವಸ್ಥೆಗೆ ಸೂಚನೆ

ಸಾಂಸ್ಥಿಕ ಕ್ವಾರಂಟೈನ್‌ ಪೂರೈಸದಿರುವವರನ್ನು ಬಿಡುಗಡೆ ಮಾಡದಿರಲು ಡಿಸಿ ಸೂಚನೆ

Team Udayavani, May 30, 2020, 12:40 PM IST

30-May-07

ಸಾಂದರ್ಭಿಕ ಚಿತ್ರ

ಬೀದರ: ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿ, ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ ಪೂರೈಸಿದವರಿಗೆ ಮತ್ತು ಸ್ಯಾಂಪಲ್‌ ನೀಡಿದ ಎಲ್ಲರಿಗೂ ಬಿಡುಗಡೆ ಮಾಡಿ ಅವರಿಗೆ ಸರ್ಕಾರದ ಹೊಸ ಮಾರ್ಗಸೂಚಿಯಂತೆ ಹೋಂ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಬೇಕು ಎಂದು ಡಿಸಿ ಡಾ.ಎಚ್‌.ಆರ್‌.ಮಹಾದೇವ್‌ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಸ್ಯಾಂಪಲ್‌ ನೀಡದೇ ಇರುವವರನ್ನು ಮತ್ತು ಕಡ್ಡಾಯ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ ಪೂರೈಸದೇ ಇರುವವರನ್ನು ಬಿಡುಗಡೆ ಮಾಡಬಾರದು ಎಂದು ಇದೆ ವೇಳೆ ಸ್ಪಷ್ಟಪಡಿಸಿದರು. ಜಿಲ್ಲೆಯ ವಿವಿಧ ವಸತಿ ನಿಲಯಗಳು ಮತ್ತು ವಸತಿ ಶಾಲೆಗಳಲ್ಲಿ ಈಗ ಸಾವಿರಾರು ಸಂಖ್ಯೆಯಲ್ಲಿ ಹೊರ ರಾಜ್ಯಗಳ ಜನರು ಸಾಂಸ್ಥಿಕ ಕ್ವಾರಂಟೈನ್‌ದಲ್ಲಿದ್ದಾರೆ. ನಮ್ಮನ್ನು ಬೇಗ ಬಿಡುಗಡೆ ಮಾಡಿ ಎಂಬುದು ಅಲ್ಲಿನ ಕೆಲವರ ಒತ್ತಾಯ ಕೂಡ ಆಗಿದೆ. ಸರ್ಕಾರ ಮಾರ್ಗಸೂಚಿ ಅನುಸಾರ ಈಗ ಹೋಂ ಕ್ವಾರಂಟೈನ್‌ ಹೋಗುವವರ ಮೇಲೆ ತಹಶೀಲ್ದಾರರು, ತಾಪಂ ಇಒಗಳು, ತಾಪಂ ಆರೋಗ್ಯಾಧಿಕಾರಿಗಳು, ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಇನ್ನಿತರ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ನಿಗಾ ಇಡಬೇಕು ಎಂದು ಸೂಚಿಸಿದರು.

ಹೋಂ ಕ್ವಾರಂಟೈನ್‌ಗೆ ಹೋಗುವವರಿಗೆ ಅವರ ಕೈ ಮೇಲೆ ಅಳಿಸಿ ಹೋಗದ ಹಾಗೆ ಕಡ್ಡಾಯ ಸೀಲ್‌ ಹಾಕಬೇಕು. ಅವರ ದಾಖಲೆಗಳನ್ನಿಟ್ಟುಕೊಳ್ಳಬೇಕು. ಹೋಂ ಕ್ವಾರಂಟೈನ್‌ದಲ್ಲಿರುವಾಗ ಹೇಗೆ ನಡೆದುಕೊಳ್ಳಬೇಕು ಎನ್ನುವ ಮಾಹಿತಿಯ ಕರಪತ್ರ ನೀಡಬೇಕು. ಅವರ ಮನೆಯಲ್ಲಿದೆ ಎಂಬುದನ್ನು ಖಾತರಿ ಮಾಡಿಕೊಂಡು ಹೋಂ ಕ್ವಾರಂಟೈನದಲ್ಲಿದ್ದಾರೆ ಎನ್ನುವ ಸ್ಟೀಕರ್‌ ನ್ನು ಅಂಟಿಸಲು ಕ್ರಮವಹಿಸಬೇಕು. ಹೋಂ ಕ್ವಾರಂಟೈನ್‌ಗೆ ಹೋಗುವವರ ಮೇಲೆ ಒಂದು ವಾರ ಕಾಲ ನಿಗಾ ಇಡಬೇಕು. ಅವರು ಎಲ್ಲಿಯೂ ಅಡ್ಡಾಡದ ಹಾಗೆ ನೋಡಿಕೊಳ್ಳಬೇಕು. ಹೋಂ ಕ್ವಾರಂಟೈನ್‌ ಮಾಡಿದ ನಂತರ ಅವರ ವಿವರವನ್ನು ಹೋಂ ಕ್ವಾರಂಟೈನ್‌ ಆ್ಯಪ್‌ನಲ್ಲಿ ಅಪಡೇಟ್‌ ಮಾಡಬೇಕು ಎಂದರು.

ಇದುವರೆಗೆ ಬಾಕಿ ಉಳಿದವರ ಸ್ಯಾಂಪಲ್‌ಗ‌ಳನ್ನು ಕೂಡ ಬೇಗ ಪಡೆದುಕೊಂಡು ಅವರನ್ನು ಕೂಡ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು ಎಂದರು. ನಮ್ಮ ವರದಿ ಬಂದ ಬಳಿಕವೇ ನಾವು ಹೋಂ ಕ್ವಾರಂಟೈನ್‌ಗೆ ಹೋಗುತ್ತೇವೆ ಎಂದು ಯಾರಾದರು ತಿಳಿಸಿದಲ್ಲಿ ಅವರಿಗೆ ಇನ್ನಷ್ಟು ದಿನ ಸಾಂಸ್ಥಿಕ ಕ್ವಾರಂಟೈನ್‌ ದಲ್ಲಿಯೇ ಮುಂದುವರಿಸಲು ಅವಕಾಶ ನೀಡಬೇಕು ಎಂದರು.  ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಸ್‌ಪಿ ಡಿ.ಎಲ್‌.ನಾಗೇಶ, ಅಪರ ಡಿಸಿ ರುದ್ರೇಶ ಗಾಳಿ, ಎಸಿ ಅಕ್ಷಯ್‌ ಶ್ರೀಧರ್‌, ಡಿಎಚ್‌ಒ ಡಾ.ವಿ.ಜಿ.ರೆಡ್ಡಿ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.