ಜೇನು ಕೃಷಿಯಿಂದ ಬೆಳೆ ಇಳುವರಿ ವೃದ್ಧಿ

ಜೇನು ಮೇಳಬೀಜೋತ್ಪಾದನೆಗೂ ಸಹಕಾರಿಔಷಧ ರೂಪದಲ್ಲಿ ಬಳಕೆಯಾಗುತ್ತಿದೆ ಜೇನು

Team Udayavani, Mar 12, 2020, 1:39 PM IST

12-March-13

ಬೀದರ: ಜೇನು ಸಾಕಾಣಿಕೆ ಲಾಭದಾಯಕ ಉಪ ಕಸುಬು. ಮಾತ್ರವಲ್ಲ ತೋಟಗಾರಿಕೆ ಬೆಳೆಗಳ ಇಳುವರಿ ಹೆಚ್ಚಿಸಲು ನೆರವಾಗುತ್ತದೆ ಎಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಡಾ| ರವೀಂದ್ರ ಮೂಲಗೆ ತಿಳಿಸಿದರು.

ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ತೋಟಗಾರಿಕೆ ಇಲಾಖೆಯ “ಜೇನು ಮೇಳ’ ಜೇನು ಪ್ರದರ್ಶನ-ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಜೇನು ನಿಸರ್ಗದತ್ತವಾಗಿ ಸಿಗುವಂಥದ್ದು. ಇದನ್ನು ವೃದ್ಧಿ ಮಾಡಿ ಲಾಭ ಮಾಡಿಕೊಳ್ಳುವುದು ಮನುಷ್ಯರ ಕೆಲಸ ಎಂದು ಸಲಹೆ ನೀಡಿದರು.

ಜೇನು ನೊಣಗಳಿಂದ ಪರಾಗಸ್ಪರ್ಶವಾಗುವುದರಿಂದ ಬೆಳೆಗಳ ಇಳುವರಿ ಮತ್ತು ಗುಣಮಟ್ಟ ಹೆಚ್ಚುತ್ತದೆ. ಬೀಜೋತ್ಪನ್ನಕ್ಕೂ ಸಹಕಾರಿಯಾಗುತ್ತದೆ. ಹಾಗಾಗಿ ರೈತರು ಜೇನು ಸಾಕಾಣಿಕೆಗೆ ಮುಂದಾಗಬೇಕು. ಜೇನು ಸಾಕಾಣಿಕೆ ಆರಂಭಿಸಿರುವ ರೈತರು ಬೇಸಿಗೆ ಅವಧಿ ಯಲ್ಲಿ ಹೂಗಳ ಪ್ರಮಾಣ ಇಳಿಕೆಯಾಗುವ ಕಾರಣ ಸಕ್ಕರೆಪಾಕ ಒದಗಿಸುವ ಮೂಲಕ ಜೇನು ನೊಣಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಜೇನು ಕೃಷಿ ಉದ್ಯಮವಾಗಿ ಬೆಳೆಯುತ್ತಿದೆ. ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಜೇನು ಕೃಷಿ ಮಾಡಲಾಗುತ್ತಿದ್ದು, ಬೆಳೆಗಾರರ ಸಂಘಗಳನ್ನು ಮಾಡಿಕೊಂಡು ಪ್ರಗತಿ ಸಾಧಿ ಸುತ್ತಿದ್ದಾರೆ. ಈ ಕೃಷಿಯನ್ನು ಒಣ ಭೂಮಿ ಪ್ರದೇಶಕ್ಕೂ ವ್ಯಾಪಿಸುವ ಉದ್ದೇಶ ಸರ್ಕಾರ ಹೊಂದಿದೆ. ಇದಕ್ಕಾಗಿ ತೋಟಗಾರಿಕೆ ಇಲಾಖೆ ಮೂಲಕ ಅಗತ್ಯ ಸಹಾಯ, ಸಲಕರಣೆ ವಿತರಿಸಲಾಗುತ್ತಿದ್ದು, ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾವಗೆ ಮಾತನಾಡಿ, ಭೂಮಿ ಮೇಲಿರುವ ಸಸ್ಯ ಪ್ರಬೇಧಗಳಲ್ಲಿ ಬಹುತೇಕ ಸಸ್ಯಗಳ ಸಂತತಿ ಪರಾಗಸ್ಪರ್ಶದ ಮೂಲಕ ನಡೆಯುತ್ತದೆ. ಜೇನು ಔಷಧದ ರೂಪದಲ್ಲಿಯೂ ಬಳಕೆಯಾಗುತ್ತದೆ. ಜಿಲ್ಲೆಯು ಜೇನು ಸಾಕಾಣಿಕೆಗೆ ಸೂಕ್ತ ಸ್ಥಳವೆಂದು ತಜ್ಞರು ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆಯಿಂದಲೂ ಜೇನು ಸಾಕಾಣಿಕೆದಾರರಿಗೆ ನೆರವು ನೀಡಲಾಗುತ್ತಿದೆ. ರೈತರು ಯಾವುದೇ ಹಿಂಜರಿಕೆ ಇಲ್ಲದೇ ಇಲಾಖೆ ಸೌಲಭ್ಯ ಪಡೆದು ಜೇನು ಸಾಕಾಣಿಕೆ ಆರಂಭಿಸಬೇಕು ಎಂದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ|
ಸುನೀಲಕುಮಾರ.ಎನ್‌.ಎಂ ಮಾತನಾಡಿ, ಜೇನಿನ ಪ್ರಬೇಧಗಳು, ಜೇನು ಸಾಕಾಣಿಕೆ ವಿಧಾನಗಳು ಹಾಗೂ ಜೇನಿನ ಲಾಭದ ಕುರಿತು ವಿವರಣೆ ನೀಡಿದರು. ಮೊದಲಿಗೆ ಎರಡು ಪೆಟ್ಟಿಗೆಗಳಿಂದ ಜೇನು ಸಾಕಾಣಿಕೆ ಆರಂಭಿಸುವುದು ಸೂಕ್ತ. ಅನುಭವದ ಆಧಾರದ ಮೇಲೆ ಪೆಟ್ಟಿಗೆ ವಿಸ್ತರಿಸಿಕೊಳ್ಳಬಹುದು ಎಂದು ತಿಳಿಸಿದರು.

ಬೆಂಗಳೂರಿನ ಜೇನು ಪೆಟ್ಟಿಗೆ ತಯಾರಕರು ಮತ್ತು ವಿತರಕರಾದ ಇಂದುಶೇಖರ್‌ ಹಾಗೂ ಜಿಲ್ಲೆಯ ವಿವಿಧ ರೈತರು ಜೇನು ಸಾಕಾಣಿಕೆ ಕುರಿತು ತಮ್ಮ ಅನುಭವ ಹಂಚಿಕೊಂಡರು. ಈ ಸಂದರ್ಭದಲ್ಲಿ ಜೇನು ಕೃಷಿಕ ಡಾ| ಮಲ್ಲಿಕಾರ್ಜುನ ಎಮ್ಮೆ, ತೋಟಗಾರಿಕೆ ಇಲಾಖೆಯ ವಿಷಯ ತಜ್ಞ ವಿಜಯಕುಮಾರ ರೇವಣ್ಣನವರ್‌ ಸೇರಿದಂತೆ ರೈತರು ಉಪಸ್ಥಿತರಿದ್ದರು.

ಹಿರಿಯ ಸಹಾಯಕ ನಿರ್ದೇಶಕ ಶಿವಪುತ್ರ ಶಂಭು ನಿರೂಪಿಸಿದರು. ಜೇನು ಮೇಳದ ಪ್ರಯುಕ್ತ ತೋಟಗಾರಿಕೆ ಕಚೇರಿ ಆವರಣದಲ್ಲಿ ಜೇನು ಪ್ರದರ್ಶನ ಮತ್ತು ಮಾರಾಟ ನಡೆಯಿತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.