ಶಾಸಕ ಈಶ್ವರ ಖಂಡ್ರೆ ರಾಜೀನಾಮೆ ನೀಡಲಿ

ಫ‌ಲಾನುಭವಿಗಳ ಆಯ್ಕೆಯಲ್ಲಿ ಅವ್ಯವಹಾರ ಸಾಬೀತು: ಸಂಸದ ಖೂಬಾ

Team Udayavani, May 10, 2020, 1:37 PM IST

10-May-14

ಬೀದರ: ಭಾಲ್ಕಿ ತಾಲೂಕಿನಲ್ಲಿ ವಸತಿ ಯೋಜನೆಯಡಿ ಮಂಜೂರಾದ ಮನೆಗಳಿಗೆ ಫಲಾನುಭವಿಗಳ ಆಯ್ಕೆಯಲ್ಲಿ ಅವ್ಯವಹಾರ ಆಗಿರುವುದು ರಾಜೀವ ಗಾಂಧಿ ವಸತಿ ನಿಗಮದ ತನಿಖಾ ವರದಿಯಿಂದ ಸಾಬೀತಾಗಿದೆ. ಅವ್ಯವಹಾರ ನಡೆದಿದ್ದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದ ಶಾಸಕ ಈಶ್ವರ ಖಂಡ್ರೆ ನುಡಿದಂತೆ ನಡೆಯಲಿ ಎಂದು ಸಂಸದ ಭಗವಂತ ಖೂಬಾ ಆಗ್ರಹಿಸಿದರು.

2015-16, 2017-18ರಲ್ಲಿ ತಾಲೂಕಿಗೆ ಮಂಜೂರಾದ 17 ಸಾವಿರ ಚಿಲ್ಲರೆ ಮನೆಗಳ ಪೈಕಿ 9710 ಮನೆಗಳ ಫಲಾನುಭವಿಗಳ (ನಗರ-ಗ್ರಾಮೀಣ) ಆಯ್ಕೆಯಲ್ಲಿ ಬೊಗಸ್‌ ಆಗಿದೆ. ಅವ್ಯವಹಾರದ ದೂರಿನ ಮೇರೆಗೆ ವಸತಿ ಖಾತೆ ಸಚಿವರು ವಸತಿ ನಿಗಮದಿಂದ ತನಿಖೆ ನಡೆಸಿದ್ದಾರೆ. ಈಗ ಅಕ್ರಮ ಆಗಿರುವುದು ತನಿಖಾ ವರದಿಯಲ್ಲಿ ಉಲ್ಲೇಖೀತವಾಗಿದೆ. 91 ಕೋಟಿ ರೂ. ಮೊತ್ತದ 9710 ಮನೆಗಳ ಆಯ್ಕೆಯಲ್ಲಿ ಅವ್ಯವಹಾರ ನಡೆದಿದೆ. ಇದಕ್ಕೆ ಕ್ಷೇತ್ರದ ಶಾಸಕ ಖಂಡ್ರೆ ನೇರ ಹೊಣೆಗಾರರು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮನೆ ನೀಡುವುದು ಹಾಗೂ ಫಲಾನುಭವಿಗಳ ಆಯ್ಕೆ ಮಾಡುವ ಅಧಿಕಾರ ಗ್ರಾಪಂಗೆ ಇದೆ. ಆದರೆ, ಭಾಲ್ಕಿಯಲ್ಲಿ ಇಡೀ ತಾಲೂಕಿನ ಫಲಾನುಭವಿಗಳ ಆಯ್ಕೆಯನ್ನು ಶಾಸಕ ಖಂಡ್ರೆ ಮಾಡಿದ್ದಾರೆ. ಮನೆ ಹಂಚಿಕೆ ಮಂಜೂರಾತಿ ಪತ್ರ, ಫಲಾನುಭವಿಗಳ ಪಟ್ಟಿಯನ್ನು ಶಾಸಕರ ಮನೆಯಲ್ಲಿನ ಕಂಪ್ಯೂಟರ್‌ನಲ್ಲಿ ಸಿದ್ಧಪಡಿಸಿ ಖಂಡ್ರೆ ಅವರೇ ಸ್ವತಃ ಸಹಿ ಮಾಡಿ ಜನರಿಗೆ ನೀಡಿದ್ದಾರೆ. ಖಂಡ್ರೆ ಅವರ ಕಾರ್‌ ಡ್ರೈವರ್‌, ಅವರ ಪಿಎ ಅವರು ಒಂದೊಂದು ದಿನ 900 ಮನೆಗಳ ಜಿಪಿಎಸ್‌ ಮಾಡಿದ್ದಾರೆ. ಆ ಮೂಲಕ ಶಾಸಕರು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಶಾಸಕ ಈಶ್ವರ ಖಂಡ್ರೆ ನುಡಿದಂತೆ ನಡೆಯುವವರು. ಹೀಗಾಗಿ, ಮನೆ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದ್ದರೆ ರಾಜೀನಾಮೆ ನೀಡಿ ರಾಜಕೀಯ ಜೀವನದಿಂದ ದೂರ ಇರುವುದಾಗಿ ತಿಳಿಸಿದ್ದರು. ಇದೀಗ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದು ಸಾಬೀತಾಗಿದೆ. ಹಾಗಾಗಿ ನುಡಿದಂತೆ ನಡೆದು ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಿಂದ ದೂರ ಇರಬೇಕು. ರಾಜೀನಾಮೆ ನೀಡದೇ ಭಂಡತನ ತೋರಿದರೆ, ಸದನದೊಳಗೆ ಸಚಿವ ಚವ್ಹಾಣ, ಪರಿಷತ್ತಿನಲ್ಲಿ ರಘುನಾಥ ಮಲ್ಕಾಪುರೆ, ಹೊರಗಡೆ ನಾನು, ಪಕ್ಷ ಹಾಗೂ ಸಂಘ- ಸಂಸ್ಥೆಗಳ ನೆರವಿನಿಂದ ಸಂಘರ್ಷಕ್ಕಿಳಿಯುವೆ ಎಂದು ಎಚ್ಚರಿಸಿದರು.  ಎಂಎಲ್‌ಸಿ ರಘುನಾಥ ಮಲ್ಕಾಪುರೆ, ಬಿಜೆಪಿ ಮುಖಂಡ ಡಿ.ಕೆ. ಸಿದ್ರಾಮ ಸುದ್ದಿಗೋಷ್ಠಿಯಲ್ಲಿದ್ದರು.

91 ಕೋಟಿ ರೂ. ಖಂಡ್ರೆ ಭರಿಸಲಿ ವಸತಿ ಯೋಜನೆಯಡಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಿಪಂ ಸಿಇಒ ತಾಪಂ ಇಒ ಅವರನ್ನು ಅಮಾನತುಗೊಳಿಸಿದ್ದಾರೆ. ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿಯಾಗಿದೆ. ಇಡೀ ಅವ್ಯವಹಾರದ ಸಂಪೂರ್ಣ ಜವಾಬ್ದಾರಿಯನ್ನು ಶಾಸಕ ಖಂಡ್ರೆ ಹೊರಬೇಕು ಮತ್ತು ಸರ್ಕಾರ ಬೊಕ್ಕಸಕ್ಕೆ ಆಗಿರುವ 91 ಕೋಟಿ ರೂ. ಹಾನಿಯನ್ನು ಸ್ವಂತ ಹಣದಿಂದ ಭರಿಸಬೇಕು. ಅಧಿಕಾರಿಗಳು ತಪ್ಪು ಮಾಡದೇ ಇದ್ದರೆ, ಅಂತಹವರನ್ನು ಉಳಿಸುವ ಕೆಲಸವನ್ನು ಖಂಡ್ರೆ ಮಾಡಲಿ.
ಭಗವಂತ ಖೂಬಾ,
ಸಂಸದರು

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.