ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಪಾಲನೆಯಾಗಲಿ

ಉಸ್ತುವಾರಿ ಕಾರ್ಯದರ್ಶಿ ಸೂಚನೆ |ರೈತರಿಗೆ ಮಾತ್ರ ಅನುಕೂಲ ಕಲ್ಪಿಸಿ |ವಾರ್ಡ್‌ಗೊಂದು ತಂಡ ರಚನೆ: ಡಿಸಿ

Team Udayavani, Apr 17, 2020, 11:18 AM IST

17-April-04

ಬೀದರ: ವಿಸ್ತರಣೆಯಾದ ಲಾಕ್‌ಡೌನ್‌ ಆದೇಶದ ನಿಯಮಗಳನ್ನು ಜಿಲ್ಲಾದ್ಯಂತ ಮೇ 3ರ ವರೆಗೆ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಇ.ವಿ. ರಮಣರೆಡ್ಡಿ ಹೇಳಿದರು.

ಕೋವಿಡ್ ವೈರಾಣು ಹರಡುವಿಕೆ ತಡೆ ಮತ್ತು ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ತಮಗೆ ಆಹಾರ ಧಾನ್ಯ, ಕಿರಾಣಿ, ತರಕಾರಿ, ಹಣ್ಣುಗಳು ಸಿಗುತ್ತಿಲ್ಲವೆಂದು ದೂರು ಬರದಂತೆ ಹಳೆಯ ಬೀದರ ಸಿಟಿನಲ್ಲಿ ಜನರಿಗೆ ಬೇಕಾದ ಎಲ್ಲ ವಸ್ತುಗಳನ್ನು ಸರಬರಾಜು ಮಾಡಲು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ವಾರ್ಡ್‌ಗೊಂದು ತಂಡ ರಚನೆ: ಓಲ್ಡ್‌ ಸಿಟಿಯಲ್ಲಿರುವ ಜನತೆಗೆ ಜೀವನಾವಶ್ಯಕ ಸಾಮಗ್ರಿ ತಲುಪಿಸಲೆಂದೇ ವಾರ್ಡ್‌ಗೊಂದು ತಂಡ ಮಾಡಿ ಕಾರ್ಯ ಪ್ರವೃತ್ತವಾಗಿದೆ. ಹಾಲು, ಮೊಸರು ಸರಬರಾಜಿಗೂ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ತಿಳಿಸಿದರು.

ಬೇರೆ ಬೇರೆ ವಸ್ತುಗಳನ್ನು ತಲುಪಿಸಲು ಓಲ್ಡ್‌ ಸಿಟಿಗೆ ಬೆಳಗ್ಗೆ ಮೂರು ಮಧ್ಯಾಹ್ನ ಮೂರು ವಾಹನಗಳು ಹೋಗುತ್ತಿವೆ ಎಂದು ಎಸಿ ಅಕ್ಷಯ್‌ ಶ್ರೀಧರ್‌ ಮಾಹಿತಿ ನೀಡಿದರು. ಜಿಲ್ಲಾಡಳಿತದ ನಿರ್ದೇಶನದಂತೆ ಓಲ್ಡ್‌ ಸಿಟಿನಲ್ಲಿ ನಿಯಮಿತವಾಗಿ ತರಕಾರಿ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಿಎಂಸಿ ಕಮಿಷನರ್‌ ಬಸಪ್ಪ ತಿಳಿಸಿದರು.

ಜಿಲ್ಲೆಯಲ್ಲಿ ಎಲ್ಲ ಕಡೆಗಳಲ್ಲಿ ಎಪಿಎಂಸಿ ಚಟುವಟಿಕೆ ನಡೆಸಲು ಎಲ್ಲ ತಹಶೀಲ್ದಾರರು ವ್ಯವಸ್ಥೆ ಮಾಡಬೇಕು. ಎಪಿಎಂಸಿ ಕಾರ್ಯದರ್ಶಿ ಅವರು ಇದರ ಮೇಲುಸ್ತುವಾರಿ ವಹಿಸಬೇಕು. ಸಣ್ಣ ಘಟನೆಯಾದರೂ ತಮ್ಮ ಇಲ್ಲವೇ ಎಸ್ಪಿ ಗಮನಕ್ಕೆ ತರಬೇಕು. ಎಪಿಎಂಸಿ ಸರಿಯಾಗಿ ನಡೆದರೆ ರೈತರು ಮತ್ತು ಸರ್ಕಾರಕ್ಕೆ ಅನುಕೂಲವಾಗಲಿದೆ ಎಂದು ಡಿಸಿ ಸೂಚಿಸಿದರು.

ರೈತರಿಗೆ ಮಾತ್ರ ಅನುಕೂಲ ಕಲ್ಪಿಸಿ: ಪೊಲೀಸ್‌ ದೌರ್ಜನ್ಯ ನಡೆಯುತ್ತಿದೆ ಎಂದು ಯಾವ ರೈತರಿಂದಲೂ ದೂರು ಬರದಂತೆ ಪೊಲೀಸ್‌ ಅಧಿಕಾರಿಗಳು ರೈತರೊಂದಿಗೆ ಸರಿಯಾಗಿ ವರ್ತಿಸಬೇಕು. ಅನವಶ್ಯಕವಾಗಿ ಲಾಠಿ ಬೀಸಬಾರದು. ಆಹಾರ ಧಾನ್ಯ, ಹಣ್ಣುಗಳು, ತರಕಾರಿ ಮತ್ತು ಮೇವು ಸರಬರಾಜು ವಾಹನಗಳಿಗೆ ಅಡ್ಡಿಪಡಿಸದೇ ಸಂಚರಿಸಲು ಅವಕಾಶ ಕಲ್ಪಿಸಬೇಕು ಎಂದು ಎಸ್‌ಪಿ ಡಿ.ಎಲ್‌. ನಾಗೇಶ ಜಿಲ್ಲೆಯ ಎಲ್ಲ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಾಸಾಶನ ನಿಯಮಿತ ತಲುಪಿಸಿ: ಎಲ್ಲ ಫಲಾನುಭವಿಗಳಿಗೆ ವೃದ್ಧಾಪ್ಯ, ವಿಧವಾ, ವಿಕಲಚೇತನ, ಮನಸ್ವಿನಿ, ಮೈತ್ರಿ ಸೇರಿದಂತೆ ಎಲ್ಲ ಮಾಸಾಶನಗಳು ಸರಿಯಾದ ವೇಳೆಗೆ ತಲುಪುತ್ತಿದೆಯೋ ಇಲ್ಲವೋ ಎಂಬುದರ ಬಗ್ಗೆ ಎಲ್ಲ ತಹಶೀಲ್ದಾರರು ಗಮನ ಹರಿಸಬೇಕು ಎಂದು ಡಿಸಿ ಎಲ್ಲ ತಹಶೀಲ್ದಾರ್‌ ಗೆ ಸೂಚಿಸಿದರು. ಈ ವೇಳೆ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಡಿಸಿ ರುದ್ರೇಶ ಗಾಳಿ, ಎಸಿ ಅಕ್ಷಯ್‌ ಶ್ರೀಧರ್‌, ಡಿಎಚ್‌ಒ ಡಾ| ವಿ.ಜಿ. ರೆಡ್ಡಿ ಇದ್ದರು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.