ಬೀದರ:ಭೂರಮೆಗೆ ಚರಗ ಚೆಲ್ಲಿ ರೈತರ ಪ್ರಾರ್ಥನೆ

ಎಳ್ಳಅಮವಾಸ್ಯೆ ಹಬ್ಬ ಗ್ರಾಮೀಣ ಭಾಗದ ಸೊಗಡನ್ನು ಇಂದಿಗೂ ಜೀವಂತವಾಗಿಡುತ್ತಿದೆ.

Team Udayavani, Jan 13, 2021, 5:16 PM IST

ಬೀದರ:ಭೂರಮೆಗೆ ಚರಗ ಚೆಲ್ಲಿ ರೈತರ ಪ್ರಾರ್ಥನೆ

Representative Image

ಬೀದರ: ತಲೆ ಮೇಲೆ ಭಕ್ಷ್ಯ ಭೋಜನದ ಬುಟ್ಟಿ ಹೊತ್ತು ಹೊಲದತ್ತ ಹೆಜ್ಜೆ ಹಾಕಿದ ರೈತ ಕುಟುಂಬಗಳು… “ಓಲಗ್ಯಾ ಓಲಗ್ಯಾ ಚಲ್ಲಂ ಪೋಲಗ್ಯಾ? ಎಂದು ಕೂಗುತ್ತ ಭೂರಮೆಗೆ ಚರಗ ಚೆಲ್ಲಿ ಭೂತಾಯಿಗೆ  ಪ್ರಾರ್ಥಿಸಿದ ಅನ್ನದಾತರು… ಬಂಧು-ಬಳಗ- ಸ್ನೇಹಿತರಿಗೆ ದಾಸೋಹ ಸೇವೆ ಮಾಡಿದ ನೇಗಿಲ ಯೋಗಿಗಳು…!

ಇದು ಜಿಲ್ಲೆಯ ವಿವಿಧೆಡೆ ಮಂಗಳವಾರ ಎಳ್ಳಮಾವಾಸ್ಯೆ ಹಿನ್ನೆಲೆ ಕಂಡು ಬಂದ ದೃಶ್ಯ. ಹೆಮ್ಮಾರಿ ಕೊರೊನಾ ಮತ್ತು ಪ್ರಕೃತಿ ವಿಕೋಪದ ಹೊಡೆತದಿಂದ ಅನ್ನದಾತರು ಆರ್ಥಿಕವಾಗಿ ತತ್ತರಿಸಿದ್ದರು. ಸುಗ್ಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಜಾತಿ, ಮತ ಎಂಬ ಭೇದ-ಭಾವ ಎನ್ನದೇ ಎಲ್ಲೆಡೆ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿತ್ತು..

ಎಳ್ಳಮಾವಾಸ್ಯ ಹಬ್ಬ ಭೂತಾಯಿಯ ಆರಾಧನೆ ಪ್ರತೀಕವಾಗಿದೆ. ಪ್ರತಿ ಹಬ್ಬಗಳನ್ನು ಮನೆಯಲ್ಲಿ ಸಿಹಿ ಭಕ್ಷ್ಯಗಳನ್ನು ಸಿದ್ಧಪಡಿಸಿ ಸವಿದು, ಆಚರಿಸಿದರೆ ಎಳ್ಳ ಅಮಾವಾಸ್ಯೆ ದಿನದಂದು ಮಾತ್ರ ಹೊಲದಲ್ಲಿ ಆಚರಿಸುವುದು ಈ ಹಬ್ಬದ ವಿಶೇಷ. ಎಳ್ಳ ಅಮವಾಸ್ಯೆ ಹಬ್ಬ ಗ್ರಾಮೀಣ ಭಾಗದ ಸೊಗಡನ್ನು ಇಂದಿಗೂ
ಜೀವಂತವಾಗಿಡುತ್ತಿದೆ.

ಮನೆಯಲ್ಲಿ ತಯಾರಿಸಿದ ಅಡುಗೆಯನ್ನು ಬೆಳಗ್ಗೆ ಬುಟ್ಟಿಯಲ್ಲಿ ತುಂಬಿಕೊಂಡು ರೈತರು ಹೊಲಗಳಿಗೆ ಬಂದು, ಅಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸುವ ಗುಡಿಸಿಲು ಮತ್ತು ಪಾಂಡವರಿಗೆ ಪೂಜೆ ಸಲ್ಲಿಸಿದರು. ನಂತರ ಜೋಳದ ಹೊಲದಲ್ಲಿ ಸಮೃದ್ಧವಾಗಿ ಬೆಳೆದ ಪೈರುಗಳ ಮಧ್ಯೆ ನಿಂತು ಚರಗಾ ಚೆಲ್ಲುವ ಮೂಲಕ “ಭೂತಾಯಿಗೆ ನಮಿಸುತ್ತ ಒಳ್ಳೆಯ ಬೆಳೆ ಕೊಡಮ್ಮಾ’ ಎಂದು ಕಾಯಕ ಜೀವಿಗಳು ಪ್ರಾರ್ಥಿಸಿದರು.

ಇತರ ಹಬ್ಬಗಳಿಗಿಂತ ಎಳ್ಳ ಅಮಾವಾಸ್ಯೆ ವಿಶೇಷವಾಗಿರುವಂತೆ ಮಾಡುವ ಭಕ್ಷ್ಯ ಭೋಜನಗಳಲ್ಲೂ ಸಹ ಡಿಫರೆಂಟ್‌. ಈ ಹಬ್ಬಕ್ಕಾಗಿ ವಿವಿಧ ಕಾಳು ಮತ್ತು
ತರಕಾರಿಗಳಿಂದ ತಯಾರಿಸಿದ ಭಜ್ಜಿ ವಿಶೇಷ. ಜತೆಗೆ ಜೋಳದ ರೊಟ್ಟಿ, ಸಜ್ಜಿ ರೊಟ್ಟಿ, ಬಗೆ ಬಗೆಯ ಅನ್ನ, ಅಂಬಲಿ ಮತ್ತು ಹುಗ್ಗಿ ಸೇರಿದಂತೆ ವಿವಿಧ ಭಕ್ಷ್ಯ ಅಲ್ಲಿರುತ್ತೆ. ಬಂಧು-ಬಾಂಧವರು ಹಸಿರು ಪರಿಸರದ ಮಧ್ಯ ಊಟದ ಸವಿಯನ್ನು ಸವಿದರು. ಜಿಲ್ಲೆಯ ಕೆಲವೆಡೆ ಬುಧವಾರ ಸಹ ಹಬ್ಬವನ್ನು ಅಚರಿಸಲಾಗುತ್ತಿದ್ದು, ರೈತರು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಉದ್ಯಾನದಲ್ಲಿ ಕಿಕ್ಕಿರಿದು ಸೇರಿದ್ದ ಜನ ಇಂದಿನ ಯಾಂತ್ರಿಕಮಯ ಜೀವನದಲ್ಲಿ ಒತ್ತಡಗಳ ಮಧ್ಯೆ ಕಾಲ ಕಳೆಯುವ ನಗರ ವಾಸಿಗರು ಎಳ್ಳ ಅಮಾವಾಸ್ಯೆ ಹಬ್ಬದಂದು ತಮ್ಮ ತಮ್ಮ ಊರುಗಳಿಗೆ ಅಥವಾ ಸಂಬಂಕರ ಜಮೀನುಗಳಿಗೆ ತೆರಳುತ್ತಾರೆ. ಇನ್ನೂ ಕೆಲವರು ನಗರದ ಪ್ರಸಿದ್ಧ ದೇವಸ್ಥಾನ ಮತ್ತು ಉದ್ಯಾನವನ, ವಿಹಾರಧಾಮಕ್ಕೆ ಹೋಗಿ ಊಟ ಮಾಡಿ ಹಬ್ಬವನ್ನು ಆಚರಿಸಿದರು. ಇಂತಹ ಹಬ್ಬಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.