ಕ್ವಾರಂಟೈನ್ ಮುಗಿಸಿದವರ ಸ್ಯಾಂಪಲ್ ಪರೀಕ್ಷೆ ಕಡ್ಡಾಯ
Team Udayavani, May 20, 2020, 2:34 PM IST
ಸಾಂದರ್ಭಿಕ ಚಿತ್ರ
ಬೀದರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕ್ವಾರಂಟೈನ್ನಲ್ಲಿ 12ರಿಂದ 14 ದಿನಗಳನ್ನು ಮುಗಿಸಿದ ಎಲ್ಲರ ಗಂಟಲು, ಮೂಗಿನ ದ್ರವದ ಮಾದರಿಯನ್ನು ತೆಗೆದು ಪರೀಕ್ಷೆಗೆ ಕಳುಹಿಸಲು ಎತಾಲೂಕು ಆರೋಗ್ಯಾಧಿಕಾರಿಗಳು ತುರ್ತಾಗಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ನುರಿತ ಲ್ಯಾಬ್ ಸಿಬ್ಬಂದಿ ಕ್ವಾರಂಟೈನ್ನಲ್ಲಿರುವ ಜನರ ಗಂಟಲು ದ್ರವದ ಮಾದರಿ ತೆಗೆದುಕೊಳ್ಳಬೇಕು. ಇದಕ್ಕೆ ಕ್ವಾರಂಟೈನ್ನಲ್ಲಿರುವವರು ಸಹಕಾರ ನೀಡದೇ ಹೋದರೆ ಕಾಯ್ದೆ ಅನುಸಾರ ಜೈಲು ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಬೇಕು. ಮಹಾರಾಷ್ಟ್ರದಿಂದ ಬಂದಿರುವವರ ಗಂಟಲು ದ್ರವವನ್ನು ವಿಶೇಷ ನಿಗಾವಹಿಸಿ ಪಡೆದು ಪರೀಕ್ಷೆಗೆ ಕಳುಹಿಸಬೇಕು. ಜಿಲ್ಲಾದ್ಯಂತ ಎಲ್ಲ ಕಡೆಗಳಲ್ಲಿ ಈ ಕಾರ್ಯ ನಡೆಯಲು ವಾಹನಗಳ ಕೊರತೆಯಾದಲ್ಲಿ ಬಾಡಿಗೆ ವಾಹನಗಳನ್ನು ಪಡೆದುಕೊಂಡು ಕೆಲಸ ತೀವ್ರಗೊಳಿಸಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ