ಬೇಕೆಂಬುದು ಕಾಯ ಗುಣ, ಬೇಡೆಂಬುದು ವೈರಾಗ್ಯ

ಶರಣ ಉದ್ಯಾನದಲ್ಲಿ ನಗೆಹಬ್ಬ ಕಾರ್ಯಕ್ರಮ

Team Udayavani, Mar 11, 2020, 2:55 PM IST

11-March-26

ಬೀದರ: ದೇವರು ನಗೆಮೊಗದ ಅರಸ. ನಾವು ಗಂಟು ಮುಖದವರಾದರೆ ದೇವರಿಗೆ ಪ್ರಿಯರಾಗಲು ಸಾಧ್ಯವಿಲ್ಲ. ದೇವಕೃಪೆಗೆ ಪಾತ್ರರಾಗಬೇಕಾದರೆ ಸಂತೃಪ್ತರಾಗಿ ನಗು ನಗುತ್ತಾ ಜೀವಿಸುವುದನ್ನು ಕಲಿಯಬೇಕು ಎಂದು ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಾಯಿ ಹೇಳಿದರು.

ನಗರದ ಶರಣ ಉದ್ಯಾನದಲ್ಲಿ ಸೋಮವಾರ ಸಂಜೆ ಜರುಗಿದ 245ನೇ ಶರಣ ಸಂಗಮ ಮತ್ತು ನಗೆಹಬ್ಬ ಕಾರ್ಯಕ್ರಮದಲ್ಲಿ ಅನುಭಾವ ನೀಡಿದ ಅವರು, ಬೇಕೆಂಬುದು ಕಾಯ ಗುಣವಾದರೆ ಬೇಡೆಂಬುದು ವೈರಾಗ್ಯ. ಈ ಉಭಯವನ್ನೂ ಅತಿಗಳೆದವನೇ ಶರಣ. ಬಂದಿದ್ದು ಬರಲಿ ಸದ್ಗುರುವಿನ ದಯೆ ಇರಲೆಂಬುದು ಶರಣ ನಿಲುವು ಎಂದು ನುಡಿದರು.

ನಗು ಆರೋಗ್ಯದ ಕೀಲಿ ಕೈ. ಸದಾ ನಗುತ್ತಿರುವುದರಿಂದ ರೋಗ ನಿರೋಧಕ ಶಕ್ತಿ ಉತ್ಪನ್ನವಾಗುತ್ತದೆ. ದೀರ್ಘಾಯುಷ್ಯ ಪ್ರಾಪ್ತಿವಾಗುತ್ತದೆ. ಎಲ್ಲ ಯೋಗಗಳಲ್ಲಿ ನಗುವ ಯೋಗವು ಬಹು ಮುಖ್ಯವಾದದ್ದೆಂದು ಹಾಸ್ಯ ಚಟಾಕಿಗಳೊಂದಿಗೆ ವಿವರಿಸಿದರು.

ನಗೆಹಬ್ಬ ಉದ್ಘಾಟಿಸಿ ಮಾತನಾಡಿದ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, ವಚನಗಳು ಬೇರೆಯಲ್ಲ ಜನಪದ ಬೇರೆಯಲ್ಲ. ಜನಪದಗಳಲ್ಲಿ ಮಣ್ಣಿನ ವಾಸನೆಯ ಜ್ಞಾನವಿದೆ. ಮುಂಬರುವ ದಿನಗಳಲ್ಲಿ ಬೀದರ ನಗರದಲ್ಲಿ “ಅಂತಾರಾಷ್ಟ್ರಿಯ ಜನಪದ ಉತ್ಸವ’ ಆಯೋಜಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಸಮಾಜ ಸೇವಕ ಗುರುನಾಥ ಕೊಳ್ಳುರು ಮತ್ತು ಜಿಪಂನ ಮುಖ್ಯ ಲೆಕ್ಕಾಧಿಕಾರಿ ದೀಪುಕುಮಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಗಂಗಪ್ಪ ಸಾವ್ಲೆ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾನಗರ ನೀಲಮ್ಮನ ಬಳಗದ ವಿದ್ಯಾವತಿ ಖಪಲೆ ಷಟ್‌ ಸ್ಥಲ ಧ್ವಜಾರೋಹಣ ಮಾಡಿದರು. ನಿವೃತ್ತ ಅಭಿಯಂತರರು ಸಂಗಶೆಟ್ಟಿ ಮಾನಕಾರಿ ಮತ್ತು ರಾಜಮ್ಮ ಚಿಕ್ಕಪೇಟೆ ಉಪಸ್ಥಿತರಿದ್ದರು.

ನಕ್ಕು ನಲಿದ ಶರಣ ಸಂಕುಲ: ಮೊಬೈಲ್‌ ಮಲ್ಲ ಖ್ಯಾತಿಯ ಧಾರವಾಡದ ಮಲ್ಲಪ್ಪ ಹೊಂಗಲ್‌ ಅವರು ಮೊಬೈಲ್‌ ಬಳಕೆಯ ಅತಿರೇಕಗಳು ಮತ್ತು ಮಕ್ಕಳ ಸ್ವಾತಂತ್ರ್ಯ ಭಾಷಣಗಳ ಪ್ರಸಂಗಗಳನ್ನು ಉಲ್ಲೇಖೀಸುತ್ತಲೆ ಹಾಸ್ಯ ಚಟಾಕಿಗಳನ್ನು ಹಾರಿಸಿದರು. ನೆರೆದಿದ್ದ ಶರಣ ಸಂಕುಲ ನಕ್ಕು ನಕ್ಕು ನಲಿದಾಡಿದರು. ತಾನೇನೂ ಕಮ್ಮಿಯಿಲ್ಲ ಎನ್ನುವಂತೆ ಬೀದರನ ಹಾಸ್ಯ ಕಲಾವಿದ ನವಲಿಂಗ ಪಾಟೀಲರು ನಗುವಿನ ಪ್ರಕಾರ, ಅಳುವಿನ ವಿಧಗಳು, ದೈನಂದಿನ ಬದುಕಿನಲ್ಲನ ಹಾಸ್ಯ ಪ್ರಸಂಗಳನ್ನು ಹೇಳುತ್ತಲೆ ನಗಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಜಾನಪದ ಲೋಕಸಿರಿ ಪ್ರಶಸ್ತಿ ಪುರಸ್ಕೃತ ಡಾ| ಜಗನ್ನಾಥ ಹೆಬ್ಟಾಳೆ, ರಾಜ್ಯ ಲೋಕೋತ್ಸವ ಪ್ರಶಸ್ತಿ ಪುರಸ್ಕೃತ ನವಲಿಂಗ ಪಾಟೀಲ ಮತ್ತು ರಾಜ್ಯ ಬೀಜ ನಿಗಮದ ನಿವೃತ್ತ ಪ್ರಧಾನ ವ್ಯವಸ್ಥಾಪಕ ಶರಣಪ್ಪ ಚಿಮಕೋಡೆ ಅವರನ್ನು ಸನ್ಮಾನಿಸಲಾಯಿತು. ನಿರ್ಮಲಾ ಮಸೂದೆ ಸ್ವಾಗತಿಸಿದರು.

ವಿಜಯಲಕ್ಷ್ಮಿ ಪಾಟೀಲ ನಿರೂಪಿಸಿದರು. ಲಾಡಗೇರಿ ಎಸ್‌ಪಿಎಸ್‌ ಶಿಶು ಮಂದಿರದ ಮಕ್ಕಳ ದೇಶಭಕ್ತಿ ನೃತ್ಯ ಗಮನ ಸೆಳೆಯಿತು. ಕೋಳಾರ ಗ್ರಾಮದ ಶರಣೆಯರ ಕೋಲಾಟ ಸಭಿಕರನ್ನು ರಂಜಿಸಿತು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.