ಪಶು ವಿವಿಯಲ್ಲಿ 1292 ಹುದ್ದೆ ಖಾಲಿ

ಬೋಧನೆ, ಸಂಶೋಧನೆಗೆ ಹಿನ್ನಡೆ 153 ಅತಿಥಿ ಉಪನ್ಯಾಸಕರ ನಿಯೋಜನೆ

Team Udayavani, Mar 4, 2020, 11:43 AM IST

4–March-05

ಬೀದರ: ರಾಜ್ಯದ ಏಕೈಕ ಪಶು ವಿಶ್ವವಿದ್ಯಾಲಯ ಎಂಬ ಖ್ಯಾತಿವುಳ್ಳ ಬೀದರನ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿವಿ ಈಗ ಪ್ರಾಧ್ಯಾಪಕರ ಕೊರತೆಯಿಂದ ನಲುಗುತ್ತಿದೆ. ವಿವಿಯಲ್ಲಿ ಅರ್ಧಕ್ಕಿಂತ ಹೆಚ್ಚು ಹುದ್ದೆ ಖಾಲಿಯಿದ್ದು, ಬೋಧನೆ, ಅಭಿವೃದ್ಧಿ, ವಿಸ್ತರಣಾ ಚಟುವಟಿಕೆ ಹಾಗೂ ಸಂಶೋಧನಾ ಕಾರ್ಯಗಳಿಗೆ ಗ್ರಹಣ ಹಿಡಿದಂತಾಗಿದೆ.

ಪಶು ವಿವಿ ವ್ಯಾಪ್ತಿಯಲ್ಲಿ ಒಟ್ಟು 7 ಮಹಾವಿದ್ಯಾಲಯ ಮತ್ತು 2 ಪಾಲಿಟೆಕ್ನಿಕ್‌ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿವೆ. ಬೀದರ, ಬೆಂಗಳೂರು, ಶಿವಮೊಗ್ಗ, ಹಾಸನ, ಗದಗನಲ್ಲಿ ಪಶು ವೈದ್ಯ ಮಹಾವಿದ್ಯಾಲಯ, ಮಹಾಗಾಂವ (ಕಲಬುರಗಿ), ಬೆಂಗಳೂರಿನಲ್ಲಿ ಹೈನು ವಿಜ್ಞಾನ ಮತ್ತು ಮಂಗಳೂರಿನಲ್ಲಿ ಮೀನುಗಾರಿಕೆ ಮಹಾವಿದ್ಯಾಲಯವಿದೆ.

ವಿವಿಗೆ ಬೋಧಕ- ಬೋಧಕೇತರ ಸೇರಿ ಒಟ್ಟು 1,821 ಹುದ್ದೆ ಮಂಜೂರಾಗಿದ್ದು, ಅದರಲ್ಲಿ 1292 ಹುದ್ದೆಗಳು ಖಾಲಿ ಇವೆ. ಕೇವಲ 529 ಹುದ್ದೆ ಮಾತ್ರ ಭರ್ತಿಯಾಗಿವೆ. 116 ಪ್ರೊಫೆಸರ್‌ ಹುದ್ದೆ ಪೈಕಿ 30 ಭರ್ತಿ ಇದ್ದರೆ, 86 ಸ್ಥಾನ ಖಾಲಿ ಇವೆ. 174 ಅಸೋಸಿಯೇಟ್‌ ಪ್ರೊಫೆಸರ್‌ ಹುದ್ದೆಗಳಲ್ಲಿ 30 ಹುದ್ದೆ ತುಂಬಿದ್ದರೆ 144 ಬಾಕಿ ಇವೆ. 425 ಅಸಿಸ್ಟಂಟ್‌ ಪ್ರೊಫೆಸರ್‌ ಹುದ್ದೆ ಪೈಕಿ 185 ಭರ್ತಿ ಇದ್ದರೆ, 240 ಹುದ್ದೆ ಖಾಲಿ ಇವೆ. ಇನ್ನೂ ಒಟ್ಟು 1106 ಬೋಧಕೇತರ ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 822 ಹುದ್ದೆ ಖಾಲಿ ಇವೆ. ಕೇವಲ 284 ಹುದ್ದೆ ಮಾತ್ರ ಭರ್ತಿ ಮಾಡಲಾಗಿದೆ.

ಅತಿಥಿಗಳ ಅವಲಂಬನೆ: ವರ್ಷದ ಹಿಂದೆ ವಿವಿಯಲ್ಲಿ ಕುಲಪತಿ ಜತೆಗೆ ವಿವಿಧ ವಿಭಾಗಗಳ ನಿರ್ದೇಶಕ, ರಿಜಿಸ್ಟ್ರಾರ್‌, ಮಹಾವಿದ್ಯಾಲಯದ ಡೀನ್‌ ಹುದ್ದೆಗಳು ಖಾಲಿಯಿಂದ ಆಡಳಿತ ವೈಖರಿ ಮೇಲೆ ಪರಿಣಾಮ ಬೀರಿತ್ತು. ನಂತರ ಎಚ್ಚೆತ್ತ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡಿತ್ತು. ಆದರೆ, ಬೋಧಕ- ಬೋಧಕೇತರ ಹುದ್ದೆಗಳತ್ತ ನಿರ್ಲಕ್ಷ್ಯ ತೋರಿತ್ತು. ಇದರಿಂದ ವಿದ್ಯಾರ್ಥಿಗಳ ಅಧ್ಯಯನದ ಮೇಲೆ ಹೊಡೆತ ಬಿದ್ದಿದೆ. ಕೆಲವು ವಿಭಾಗಳಲ್ಲಿ 153 ಅತಿಥಿ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಸಿಬ್ಬಂದಿ ಕೊರತೆಯಿಂದ ಬಹುತೇಕ ಹುದ್ದೆಗಳಿಗೆ ಪ್ರಭಾರ ವಹಿಸಲಾಗಿದ್ದು, ಇರುವ ನೌಕರರ ಮೇಲೆ ಒತ್ತಡ ಹೆಚ್ಚಾಗುತ್ತಿದೆ.

ಜಾನುವಾರುಗಳ ಆರೋಗ್ಯ ಸಂಶೋಧನೆ ಚಟುವಟಿಕೆಗಳು ನಡೆಯುವುದರಿಂದ ಪಶು ವಿಶ್ವವಿದ್ಯಾಲಯ ಅತಿ ಮಹತ್ವದ್ದಾಗಿದೆ. ಆದರೂ ಹಲವು ವರ್ಷಗಳಿಂದ ಹುದ್ದೆಗಳನ್ನು ತುಂಬಿಕೊಳ್ಳುವಲ್ಲಿ ಸರ್ಕಾರ ನಿಷ್ಕಾಳಜಿ ತೋರುತ್ತ ಬಂದಿದೆ. ಸದ್ಯ ಈಗಿರುವ ಸಿಬ್ಬಂದಿಯಿಂದ ಕೇವಲ ಬೋಧನೆಯಷ್ಟೇ ಮಾಡಲಾಗುತ್ತಿದೆ. ಅಭಿವೃದ್ಧಿ, ಸಂಶೋಧನೆ, ವಿಸ್ತರಣಾ ಚಟುವಟಿಕೆಗಳಿಗೆ ಸಿಬ್ಬಂದಿಯೇ ಇಲ್ಲದಂತಾಗಿದೆ. ಜಾನುವಾರುಗಳ ಆರೋಗ್ಯ ಸಂಶೋಧನೆ ಚಟುವಟಿಕೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳಬೇಕಿದೆ.

ಕರ್ನಾಟಕ ಪಶು ವಿಶ್ವವಿದ್ಯಾಲಯದಲ್ಲಿ ಬೋಧಕ- ಬೋಧಕೇತರ ಸೇರಿ 1292 ಹುದ್ದೆಗಳು ಖಾಲಿ ಇರುವುದು ನಿಜ. ಬೋಧಕರ ಕೊರತೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಡಕಾಗಬಾರದು ಎಂಬ ಉದ್ದೇಶದಿಂದ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 400 ಬೋಧಕ ಮತ್ತು 216 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಅಧಿಸೂಚನೆ ಪ್ರಕ್ರಿಯೆ ಜಾರಿಯಲ್ಲಿದೆ. ಕೆ.ಸಿ. ವೀರಣ್ಣ, ರಿಜಿಸ್ಟ್ರಾರ್‌, ಕರ್ನಾಟಕ ಪಶು, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.