ರಾಜ್ಯಾದ್ಯಂತ 28 “ವುಮೆನ್‌ ಪೋಸ್ಟ್‌ ಆಫೀಸ್‌’

ಮಹಿಳಾ ಗ್ರಾಹಕರಿಗೆ ಸಂವಹನಕ್ಕೆ ಅನುಕೂಲ ಸ್ರ್ತೀಯರ ಕಾರ್ಯಕ್ಷಮತೆಗೆ ಅವಕಾಶ-ಘನತೆ ಹೆಚ್ಚಳ

Team Udayavani, Mar 19, 2020, 12:03 PM IST

19-March-5

ಬೀದರ: ಮಹಿಳಾ ಸಬಲೀಕರಣಕ್ಕಾಗಿ ಭಾರತೀಯ ಮಹಿಳಾ ಬ್ಯಾಂಕ್‌ ಆರಂಭಿಸಿರುವ ಕೇಂದ್ರ ಸರ್ಕಾರ ಇದೀಗ ದೇಶದ ಆಯ್ದ ನಗರಗಳಲ್ಲಿ ಮಹಿಳಾ ಗ್ರಾಹಕರಿಗೆ ಸಂವಹನಕ್ಕೆ ಅನುಕೂಲವಾಗುವಂತೆ ಬೀದರ ಸೇರಿ ರಾಜ್ಯದ 28 ಕಡೆ “ವುಮೆನ್‌ ಪೋಸ್ಟ್‌ ಆಫೀಸ್‌’ಗಳನ್ನು ಆರಂಭಿಸಿದೆ.

ಸಮರ್ಪಕ ಸಂವಹನ ಮಾಧ್ಯಮವಾಗಿರುವ ಅಂಚೆ ಇಲಾಖೆ ಉಳಿಸುವ ದಿಸೆಯಲ್ಲಿ ಅದರ ಸೇವೆಯ ಬೇರುಗಳನ್ನು ವಿಸ್ತರಿಸಲು ಸರ್ಕಾರ ಕ್ರಮ ವಹಿಸುತ್ತಿದ್ದು, ಮಹಿಳಾ ನಿರ್ವಹಣಾ ಅಂಚೆ ಕಚೇರಿ ಇದರ ಭಾಗವಾಗಿದೆ. ಪೂರ್ಣ ಪ್ರಮಾಣದಲ್ಲಿ ಮಹಿಳೆಯರಿಂದಲೇ ಕೂಡಿರುವ ಕಚೇರಿಗಳನ್ನು ತೆರೆಯುವ ಮೂಲಕ ಅಂಚೆ ಇಲಾಖೆ ಸ್ತ್ರೀಯರ ಕಾರ್ಯಕ್ಷಮತೆಗೆ ಅವಕಾಶ ಒದಗಿಸಿದಲ್ಲದೇ ಅವರ ಘನತೆ ಹೆಚ್ಚಿಸಿ ಗಮನ ಸೆಳೆದಿದೆ.

ರಾಜ್ಯದಲ್ಲಿ ಉತ್ತರ ಕರ್ನಾಟಕ ಪ್ರಾದೇಶಿಕ ವಲಯ 14 ಮತ್ತು ದಕ್ಷಿಣ ಕರ್ನಾಟಕದಲ್ಲಿ 13 ಜತೆಗೆ ಬೆಂಗಳೂರು ವಲಯದಲ್ಲಿ 4 ಸೇರಿದಂತೆ ಒಟ್ಟು 31 ಮುಖ್ಯ ಅಂಚೆ ಕಚೇರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಸದ್ಯ 28 ಆಯ್ದ ನಗರಗಳಲ್ಲಿ ಮಹಿಳಾ ಅಂಚೆ ಕಚೇರಿಗಳನ್ನು ತೆರೆಯಲಾಗಿದೆ.

ಬೀದರನ ಬ್ರಿಮ್ಸ್‌ನಲ್ಲಿರುವ ಉಪ ಕಚೇರಿಯನ್ನೇ “ವುಮೆನ್ಸ್‌ ಅಂಚೆ ಕಚೇರಿ’ಯಾಗಿ ಪರಿವರ್ತಿಸಲಾಗಿದೆ. ಈ ಕಚೇರಿ ಸಹ ಅಂಚೆಯ ಎಲ್ಲ ಸಾಮಾನ್ಯ ಕಚೇರಿಗಳಂತೆಯೇ ಕಾರ್ಯ ನಿರ್ವಹಿಸಲಿದೆ.

ಎಲ್ಲರೂ ಮಹಿಳೆಯರೇ: ವುಮೆನ್ಸ್‌ ಅಂಚೆ ಕಚೇರಿಯಲ್ಲಿ ಎಲ್ಲಾ ಅಧಿಕೃತ ಹುದ್ದೆಗಳು, ಪೋಸ್ಟ್‌ ಮಾಸ್ಟರ್‌ ಉಸ್ತುವಾರಿಗಳಿಂದ ಹಿಡಿದು ಕೌಂಟರ್‌ ನಿರ್ವಾಹಕರ ವರೆಗೆ ಮಹಿಳೆಯರೇ ಕಾರ್ಯನಿರ್ವಹಿಸಲಿದ್ದಾರೆ. ಉಳಿತಾಯ  ಬ್ಯಾಂಕ್‌ ಕೌಂಟರ್‌ಗಳು, ವಿವಿಧೋದ್ದೇಶ ನೋಂದಣಿ ಬುಕಿಂಗ್‌ ಕೌಂಟರ್‌ಗಳು, ಜೀವ ವಿಮೆಗಳು, ಆಧಾರ್‌ ಸೆಂಟರ್‌, ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಮತ್ತು ಖಜಾನೆ ಕೆಲಸ ಸೇರಿದಂತೆ ಎಲ್ಲ ರೀತಿಯ ಕೆಲಸಗಳನ್ನು ಅವರೇ ಮೇಲ್ವಿಚಾರಣೆ-ನಿರ್ವಹಣೆ ಮಾಡಲಿದ್ದಾರೆ.

ಬೀದರ ಮಹಿಳಾ ಅಂಚೆ ಕಚೇರಿಯಲ್ಲಿ ಕೆಲಸ-ಕಾರ್ಯಗಳ ನಿರ್ವಹಣೆ ಹಾಗೂ ಗ್ರಾಹಕರಿಗೆ ಎಲ್ಲ ರೀತಿಯ ಸೇವೆಯನ್ನು ಮಹಿಳೆಯರು ಒದಗಿಸುತ್ತಾರೆ. ಸದ್ಯ ಒಬ್ಬರು ಅಂಚೆ ಪಾಲಕರು (ಪೋಸ್ಟ್‌ ಮಾಸ್ಟರ್‌) ಮತ್ತು ಒಬ್ಬರು ಟಾಕ್‌ ಸೇವಕರ ಹುದ್ದೆ ಇದ್ದು, ಮಹಿಳೆಯರನ್ನೇ ನಿಯೋಜಿಸಲಾಗಿದ್ದು, ಸಿಬ್ಬಂದಿ ತಮ್ಮ ಕಾರ್ಯಭಾರ ಶುರು ಮಾಡಿದ್ದಾರೆ.

„ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.