ಕಳ್ಳಭಟ್ಟಿ ಗೆ ಮದ್ಯಪ್ರಿಯರ ಮೊರೆ!

ಜಿಲ್ಲೆಯಲ್ಲಿ ಹೆಚ್ಚಿದ ಅಕ್ರಮ ದಂಧೆ | 9.40 ಲಕ್ಷ ಮೌಲ್ಯದ ಸೊತ್ತು ವಶಕ್ಕೆ

Team Udayavani, Apr 12, 2020, 12:13 PM IST

12-April-7

ಬೀದರ: ಜಿಲ್ಲೆಯಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿ ನಾಶಪಡಿಸಿದರು.

ಬೀದರ: ಲಾಕ್‌ಡೌನ್‌ದಿಂದ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ವ್ಯಸನಿಗಳಿಗೆ ನುಂಗಲಾರದ ತುತ್ತಾಗಿದೆ. ಇದರ ಪರಿಣಾಮ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಳ ಮತ್ತು ಕಳ್ಳಭಟ್ಟಿ ದಂಧೆ ತಲೆ ಎತ್ತಿದ್ದು, ಇದಕ್ಕೆ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಅಬಕಾರಿ ದಾಳಿ ಪ್ರಕರಣಗಳೇ ಸಾಕ್ಷಿ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ರಾಜ್ಯಾದ್ಯಂತ ಲಾಕ್‌ಡೌನ್‌ ಘೋಷಿಸಿದ ಬಳಿಕ ಮದ್ಯ ಮಾರಾಟಕ್ಕೆ ನಿಷೇಧದಿಂದ ಎಲ್ಲ ಸಾರಾಯಿ ಅಂಗಡಿಗಳು ಬಾಗಿಲು ಹಾಕಿದ್ದು, ವ್ಯಸನಿಗಳು ಮದ್ಯಕ್ಕೆ ಚಡಪಡಿಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಿಡಿಗೇಡಿಗಳು ಜನರ ಪ್ರಾಣಕ್ಕೆ ಕುತ್ತು ತರುವಂತಹ ಕಳಪೆ ದರ್ಜೆಯ ಅಕ್ರಮ ಮದ್ಯ ತಯಾರಿಕೆ, ಮಾರಾಟವನ್ನು ನಿರಾತಂಕವಾಗಿ ಮಾಡುತ್ತಿದ್ದಾರೆ. ಈ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಸಾಕಷ್ಟು ಪ್ರಯತ್ನಿಸಿದರೂ ಅಕ್ರಮ ಚಟುವಟಿಕೆ ಎಗ್ಗಿಲ್ಲದೇ ನಡೆಯುತ್ತಿದೆ.

225 ಅಬಕಾರಿ ದಾಳಿ: ಲಾಕ್‌ಡೌನ್‌ಗೂ ಮುನ್ನ ಜಿಲ್ಲೆಯಲ್ಲಿ ನಿಯಂತ್ರಣದಲ್ಲಿದ್ದ ಅಕ್ರಮ ಕಳ್ಳಭಟ್ಟಿ ದಂಧೆ ಈಗ ರಾಜಾರೋಷವಾಗಿ ನಡೆಯುತ್ತಿದೆ. ಬೀದರ ಮಹಾರಾಷ್ಟ್ರ ಮತ್ತು ತೆಲಂಗಾಣ ಗಡಿ ಜಿಲ್ಲೆಯಾಗಿರುವುದರಿಂದ ದಂಧೆ ಹೆಚ್ಚಿದ್ದು, ಲಾಕ್‌ಡೌನ್‌ ಬಳಿಕ ಈವರೆಗೆ ಜಿಲ್ಲೆಯಲ್ಲಿ ಸುಮಾರು 225 ಅಬಕಾರಿ ದಾಳಿಗಳನ್ನು ನಡೆಸಿರುವ ಅಬಕಾರಿ ಪೊಲೀಸರು 21 ಪ್ರಕರಣಗಳು ದಾಖಲಿಸಿಕೊಂಡು ಐದು ಜನ ಆರೋಪಿಗಳನ್ನು ಬಂ ಧಿಸಿದ್ದಾರೆ. 1170 ಲೀ. ಬೀಯರ್‌, 1072 ಲೀ. ವಿಸ್ಕಿ, 41 ಲೀ. ಕಳ್ಳಭಟ್ಟಿ, 240 ಲೀ. ಸೇಂದಿ ಮತ್ತು 7 ವಾಹನ ಸೇರಿ 9.40 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಎರಡ್ಮೂರು ಪಟ್ಟು ದರ ಹೆಚ್ಚಳ: ಕೊರೊನಾ ಸೋಂಕು ವ್ಯಾಪಿಸದಂತೆ ಸರ್ಕಾರ ಲಾಕ್‌ ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಮನೆಯಿಂದ ಹೊರಗೆ ಬರದೇ ಸಹಕಾರ ನೀಡುತ್ತಿದ್ದಾರೆ. ಜತೆಗೆ ಮದ್ಯದ ಅಂಗಡಿಗಳನ್ನೂ ಬಂದ್‌ ಮಾಡಿರುವುದರಿಂದ ಜನ ಕಳ್ಳಭಟ್ಟಿಗೆ ಮೊರೆ ಹೋಗಿದ್ದಾರೆ.

ದಾಬಾ, ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಜನ ಎರಡ್ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತಮ್ಮ ನಶೆ ಏರಿಸಿಕೊಳ್ಳುತ್ತಿದ್ದಾರೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಹಾಗೂ ಮಾರಾಟ ತಡೆಗೆ ಅಬಕಾರಿ ಇಲಾಖೆ 7 ತಂಡ ರಚಿಸಿದೆ. ದೂರು ಮತ್ತು ಮಾಹಿತಿ ಆಧಾರದ ಮೇಲೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ದಾಳಿ ನಡೆಸಿ ಚಟುವಟಕೆ ನಡೆಯದಂತೆ ಕ್ರಮ ವಹಿಸಿದೆ. ದಾಳಿ, ಹಗಲು ರಾತ್ರಿ ಗಸ್ತು, ವಾಹನ ತಪಾಸಣೆ ನಡೆಸಿ ಅಬಕಾರಿ ಸ್ವತ್ತುಗಳನ್ನು ವಶಪಡಿಸಿಕೊಂಡಿದೆ. ಕಳ್ಳಭಟ್ಟಿ ತಯಾರಿಕೆಗೆ ಬಳಸುವ ಕಚ್ಚಾ ಪದಾರ್ಥ ಮಾರದಂತೆ ಕಿರಾಣಿ ವ್ಯಾಪಾರಿಗಳಿಗೂ ಸೂಚನೆ ನೀಡಲಾಗುತ್ತಿದೆ.

ಲಾಕ್‌ಡೌನ್‌ದಿಂದಾಗಿ ಮದ್ಯ ಮಾರಾಟ ನಿಷೇಧ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯ 165 ಮದ್ಯದಂಗಡಿ ಬಂದ್‌ ಮಾಡಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳಲು ಕೆಲವರು ಅಕ್ರಮ ದಂಧೆಗೆ ಇಳಿದಿದ್ದು, ನಿಯಂತ್ರಣಕ್ಕೆ ಅಬಕಾರಿ ಇಲಾಖೆ ಕ್ರಮ ವಹಿಸಿದೆ. ಅಕ್ರಮ ಸಾರಾಯಿ ಮಾರಾಟದಾರರ ಬಂಧನ, ಕಳ್ಳಭಟ್ಟಿ ಅಡ್ಡೆಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವೀರಣ್ಣಾ ಬಾಗೇವಾಡಿ,
ಡಿಸಿ, ಅಬಕಾರಿ ಇಲಾಖೆ, ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.