“ಲಿಂಗಾಯತ’ ಮಾನ್ಯತೆಗಾಗಿ ಬೃಹತ್‌ ಬೈಕ್‌ ರ್ಯಾಲಿ


Team Udayavani, Apr 16, 2018, 12:14 PM IST

gul-1.jpg

ಬೀದರ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಆಗ್ರಹಿಸಿ ರವಿವಾರ ನಗರದಲ್ಲಿ ಬೈಕ್‌ಗಳ ಬೃಹತ್‌ ರ್ಯಾಲಿ ನಡೆಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಾಯಿತು.

ಪ್ರತ್ಯೇಕ ಧರ್ಮದ ಮಾನ್ಯತೆಗೆ ಒತ್ತಾಯಿಸಿ ಬೀದರನಿಂದಲೇ ಬೃಹತ್‌ ಲಿಂಗಾಯತ ಮಹಾರ್ಯಾಲಿ ಆರಂಭಗೊಂಡು ನಂತರ ರಾಜ್ಯ ಮತ್ತು ನೆರೆ ರ್ಯಾಜ್ಯಗಳಿಗೂ ವ್ಯಾಪಿಸಿತ್ತು. ಈ ಕುರಿತು ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಹಾಗಾಗಿ ರವಿವಾರ ಬಸವ ಜಯಂತಿ ಉತ್ಸವ ಸಮಿತಿ ನೇತೃತ್ವದಲ್ಲಿ ಬೈಕ್‌ ರ್ಯಾಲಿ ನಡೆಸಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಯಿತು.

ಸುಮಾರು 2018 ಬೈಕ್‌ಗಳೊಂದಿಗೆ ರ್ಯಾಲಿ ನಡೆಸಿ ಬಸವ ಜಯಂತಿ ಪ್ರಚಾರದ ಜತೆಗೆ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ ನೀಡಬೇಕು ಎಂದು ಆಗ್ರಹಿಸಲಾಯಿತು. ನಗರದ ನೆಹರು ಕ್ರೀಡಾಂಗಣದಿಂದ ಆರಂಭಗೊಂಡ ರ್ಯಾಲಿಯು ಚೌಬಾರಾ, ಬಸವೇಶ್ವರ ವೃತ್ತ, ಬೊಮ್ಮಗೊಂಡ ವೃತ್ತ, ಸಿದ್ಧಾರೂಢ ಆಶ್ರಮ, ಗುದಗೆ ಆಸ್ಪತ್ರೆ, ರೋಟರಿ ವೃತ್ತದ ಮೂಲಕ ಹಾದು ಪಾಪನಾಶಿನಿ ದೇವಸ್ಥಾನದ ಆವರಣದಲ್ಲಿ ಮುಕ್ತಾಯಗೊಂಡಿತು.

ತಲೆಗೆ ರುಮಾಲು ಮತ್ತು ಹೆಗಲ ಮೇಲೆ ಸ್ಕಾರ್ಪ್‌ ಧರಿಸಿದ್ದ 200ಕ್ಕೂ ಹೆಚ್ಚು ಮಹಿಳೆಯರು ಬೈಕ್‌ ರ್ಯಾಲಿಯನ್ನು ಮುನ್ನಡೆಸಿದರು. ಬೈಕ್‌ಗಳಿಗೆ ಬೃಹತ್‌ ಬಸವ ಧ್ವಜ ಅಳವಡಿಸಿ ಬಸವ ಜಯಘೋಷಗಳನ್ನು ಕೂಗಿದರು. ಸಾವಿರಾರು ಬಸವ ಅನುಯಾಯಿಗಳು ಭಾಗವಹಿಸಿದ್ದರು.

ಉತ್ಸವ ಸಮಿತಿ ಅಧ್ಯಕ್ಷ ಶರಣಪ್ಪ ಮಿಠಾರೆ ಮಾತನಾಡಿ, ಬಸವ ಜಯಂತಿ ಮಾನವೀಯತೆ ಮತ್ತು ದೀನ ದಲಿತರ ಉತ್ಸವ. ಈ ಜಯಂತಿ ಅರಿವಿನ ಉತ್ಸವ, ರಾಷ್ಟ್ರದ ಉತ್ಸವವಾಗಬೇಕು. ನಾವು ಬಸವ ಅಭಿಮಾನಿಗಳು ಆಗುವುದಕ್ಕಿಂತ ಬಸವ ಅನುಯಾಯಿಗಳಾಗಿ ಶರಣರ ತತ್ವಗಳನ್ನು ನಿಜ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ. ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಕೇಂದ್ರದ ಗಮನ ಸೆಳೆಯಲು ಈ ರ್ಯಾಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಬಸವ ಸೇವಾ ಪ್ರತಿಷ್ಠಾನದ ಡಾ| ಗಂಗಾಂಬಿಕೆ ಅಕ್ಕ ಮಾತನಾಡಿ, ವಿಶಿಷ್ಟ ಧರ್ಮ ಲಿಂಗಾಯಕ್ಕೆ ಪ್ರತ್ಯೇಕ ಧರ್ಮದ ಸಾಂವಿಧಾನಿಕ ಮಾನ್ಯತೆಗೆ ರಾಜ್ಯ ಸರ್ಕಾರ ಒಪ್ಪಿಕೊಂಡಿರುವುದರಿಂದ 2018ರ ಬಸವ ಜಯಂತಿ ನಮಗೆಲ್ಲರಿಗೂ ಸಂಭ್ರಮದ ಉತ್ಸವವಾಗಿದೆ. ಬಸವಣ್ಣನ ವಿಚಾರಗಳು ದೇಶ ಮಾತ್ರವಲ್ಲದೇ ವಿಶ್ವದ ಜನ ಮನಕ್ಕೆ ಮುಟ್ಟಿಸುವ ಪ್ರಯತ್ನಗಳು ಆಗಬೇಕಿದೆ ಎಂದರು.

ರ್ಯಾಲಿಯಲ್ಲಿ ಪ್ರಮುಖರಾದ ಬಾಬು ವಾಲಿ, ಡಾ| ರಜನೀಶ ವಾಲಿ, ಡಾ| ಶೈಲೆಂದ್ರ ಬೆಲ್ದಾಳೆ, ಗುರುನಾಥ ಕೊಳ್ಳೂರ, ರಾಜೇಂದ್ರಕುಮಾರ ಗಂದಗೆ, ಕರುಣಾ ಶೆಟಕಾರ, ಶಕುಂತಲಾ ವಾಲಿ, ಸುರೇಶ ಚನ್ನಶೆಟ್ಟಿ, ಸೋಮಶೇಖರ ಪಾಟೀಲ ಗಾದಗಿ, ಸುರೇಶ ಸ್ವಾಮಿ, ವಿರೂಪಾಕ್ಷ ಗಾದಗಿ, ಪಾಟೀಲ ಖಾಜಾಪುರ, ಶಕುಂತಲಾ ಬೆಲ್ದಾಳೆ ಮತ್ತಿತರರು ಭಾಗವಹಿಸಿದ್ದರು ವಿಶ್ವ ಭಾತೃತ್ವದ ಆಶಯದೊಂದಿಗೆ ಬಸವಣ್ಣ ಈ ನೆಲದಲ್ಲಿ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ್ದರು. ಈಗ 900 ವರ್ಷಗಳ ಬಳಿಕ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆಗೆ ರಾಜ್ಯ ಸರ್ಕಾರ ಒಪ್ಪಿಗೆಯ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿರುವುದು ಐತಿಹಾಸಿಕ ಕ್ಷಣ. ಈಗ ಕೇಂದ್ರ ಸಹ ಸಾಂವಿಧಾನಿಕ ಮೊಹರು ಹಾಕಬೇಕಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಸಂದೇಶ ಮುಟ್ಟಿಸಲು ಈ ಮಹಾ ರ್ಯಾಲಿ ಆಯೋಜಿಸಲಾಗಿದೆ. ಇದು ಯಾವುದೇ ಪಕ್ಷದ ವೇದಿಕೆಯಲ್ಲ, ಲಿಂಗಾಯತರ ವೇದಿಕೆ.
  ಬಸವರಾಜ ಧನ್ನೂರ, ಪ್ರಧಾನ ಕಾರ್ಯದರ್ಶಿ

ಬೈಕ್‌ ನಿಂದ ಲಿಂಗಾಯತ ಶಬ್ದ ರಚನೆ ಮಹಾ ರ್ಯಾಲಿಯಲ್ಲಿ 2018ಕ್ಕೂ ಅಧಿಕ ಬೈಕ್‌ ಗಳನ್ನು ಆಂಗ್ಲ ಭಾಷೆಯಲ್ಲಿ “ಲಿಂಗಾಯತ’ ಶಬ್ದದ ಆಕಾರದಲ್ಲಿ ನಿಲ್ಲಿಸಿದ್ದು ಹಾಗೂ ಮಹಿಳೆಯರು ತಮ್ಮ ಬೈಕ್‌ಗಳೊಂದಿಗೆ ಭಾಗವಹಿಸಿದ್ದು ವಿಶೇಷವಾಗಿತ್ತು. ಎಲ್ಲ ಬಸವಪರ ಸಂಘಟನೆಗಳು ಒಗ್ಗಟ್ಟಾಗಿ ರ್ಯಾಲಿ ನಡೆಸಿದವು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.