ವಕೀಲರ ಸಂಘದಿಂದ ಬೈಕ್ ರ್ಯಾಲಿ
Team Udayavani, Aug 14, 2022, 4:40 PM IST
ಔರಾದ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸರ್ಕಾರಿ, ಅರೆ ಸರ್ಕಾರಿ, ಸಂಘ-ಸಂಸ್ಥೆಗಳ ಕಚೇರಿಗಳ ಮೇಲೆ ಹಾಗೂ ಮನೆ ಹಾಗೂ ವಾಹನಗಳ ಮೇಲೆಯೂ ರಾಷ್ಟ್ರಧ್ವಜ ತಿರಂಗಾ ಶನಿವಾರ ಹಾರಾಡಿತು. ಸರ್ಕಾರಿ ಕಚೇರಿಗಳ ಮೇಲೆ ಅಧಿಕಾರಿಗಳು ಬಾವುಟ ಹಾರಿಸಿದರೆ, ಸಂಘ ಸಂಸ್ಥೆಗಳ ಕಚೇರಿಗಳ ಮೇಲೆ ಸಂಘಟನೆಯ ಪ್ರಮುಖರು ತಿರಂಗಾ ಹಾರಿಸಿದರು.
ಪಟ್ಟಣದ ಕನ್ನಡಾಂಬೆಯ ವೃತ್ತದಿಂದ ನ್ಯಾಯಾಲಯ ಆವರಣದ ತನಕ ವಕೀಲರ ಸಂಘದ ಅಧ್ಯಕ್ಷರು, ಸರ್ವ ಪದಾಧಿಕಾರಿಗಳು ಸೇರಿಕೊಂಡು ಬೈಕ್ಗೆ ತಿರಂಗಾ ಬಾವುಟ ಕಟ್ಟಿಕೊಂಡು ಜನರಲ್ಲಿ ಜಾಗೃತಿ ಮೂಡಿಸಿದರು.
ಅದರಂತೆ ಆಟೋ ಚಾಲಕರ ಸಂಘದ ಸದಸ್ಯರು ಕೂಡಾ ಬಸವೇಶ್ವರ ವೃತ್ತದಿಂದ ಕನ್ನಡಾಂಬೆಯ ವೃತ್ತದ ತನಕ ಆಟೋದ ಮೂಲಕ ರ್ಯಾಲಿ ಮಾಡಿ ಜನಮನ ಸೆಳೆದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಾ| ಶಾಲಿವಾನ ಉದಗಿರೆ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಸಾವಿರ ಧ್ವಜವನ್ನು ವಿತರಣೆ ಮೂಲಕ ರಾಷ್ಟ್ರ ಪ್ರೇಮದಲ್ಲಿ ಮೆರೆದರು.
ಸಿದ್ದಿ ವಿನಾಯಕ ಚಾರಿಟೇಬಲ್ ಟ್ರಸ್ಟ್ನಿಂದ ಔರಾದ ಪಟ್ಟಣದಲ್ಲಿನ ಗುರೂಜಿ ಪಬ್ಲಿಕ್ ಸ್ಕೂಲ್ ಔರಾದ ಹಾಗೂ ಗುರೂಜಿ ಪಬ್ಲಿಕ್ ಸ್ಕೂಲ್ ಮಾಳೆಗಾಂವ ಗ್ರಾಮದಲ್ಲಿನ ಶಾಲೆಯ ವಿದ್ಯಾರ್ಥಿಗಳಿಗೆ ಬಾವುಟ ವಿತರಣೆಯ ಜೊತೆಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಬಸವರಾಜ ಹಳ್ಳೆ ನೇತೃತ್ವದಲ್ಲಿ ಪಟ್ಟಣದ ಮೂರು ಸಾವಿರ ಮನೆ-ಮನೆಗೆ ತೆರಳಿ ತಿರಂಗಾ ಬಾವುಟವನ್ನು ಕುಟುಂಬದ ಸದಸ್ಯರಿಗೆ ನೀಡಿ ಮೂರು ದಿನಗಳ ಕಾಲ ತಮ್ಮ ಮನೆಗಳ ಮೇಲೆ ಬಾವುಟ ಹಾರಾಡಬೇಕೆಂದು ಮನವಿ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ