ಕೈ ಸೇರಲು ಬಿಜೆಪಿ ಶಾಸಕರು ಸಿದ್ಧ
Team Udayavani, Jul 30, 2018, 6:30 AM IST
ಬೀದರ: ಬಿಜೆಪಿಯ “ಆಪರೇಷನ್ ಕಮಲ’ದ ಚರ್ಚೆ ಹುಟ್ಟಿಕೊಳ್ಳುತ್ತಿರುವಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ
ಖಂಡ್ರೆಯವರು ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಭಾನುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲು
ಸಜ್ಜಾಗಿದ್ದಾರೆ. ಆದರೆ, ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಸೇರಿಸಿಕೊಳ್ಳಬಾ ರದೆಂಬ ಬಗ್ಗೆ ಚರ್ಚೆ ಪಕ್ಷದ ಮಟ್ಟದಲ್ಲಿ ನಡೆದಿದೆ. ಸಮಯಕ್ಕೆ ತಕ್ಕಂತೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.